ಮಳೆ(Rain) ಬಂದರೆ ಬೆಳೆ(Crop). ರೈತನ(Farmer) ಬದುಕು ಹಸನಾದರೆ ಮಾತ್ರವೇ ಸಮೃದ್ಧ. ಆದರೆ ಈ ಬಾರಿಯ ಭೀಕರ ಬರಗಾಲ(Drought) ರೈತರನ್ನು ಕೆಂಗೆಡಿಸಿದೆ. ಈ ಕಾರಣದಿಂದ ದಿನ ನಿತ್ಯದ ವಸ್ತುಗಳ ಬೆಲೆ ಗಗನಕ್ಕೇರಿದೆ. ರೈತರಿಗೂ ಫಸಲು ಕಡಿಮೆಯಾಗಿದೆ. ರೈತ ಬೆಳೆದ ಬೆಳೆಯೆಲ್ಲಾ ನೀರಿಲ್ಲದೆ, ಬಿಸಿಲಿನ ತಾಪಕ್ಕೆ(heat temperature) ಒಣಗಿ ಹೋಗಿದೆ. ಭೀಕರ ಬರಗಾಲದಿಂದ ಹಣ್ಣುಗಳ ರಾಜ ಎನಿಸಿಕೊಂಡಿರುವ ಮಾವು (Mangoes) ಬೆಳೆ ಸಂಪೂರ್ಣ ನೆಲ ಕಚ್ಚಿದ್ದು, ರೈತರಿಗೆ ಸಂಕಷ್ಟ ಎದುರಾಗಿದೆ. ರಾಮನಗರ(Ramanagara) ಜಿಲ್ಲೆಯಲ್ಲಿ ಬರೋಬ್ಬರಿ 400ಕೋಟಿ ರೂ. ಮೌಲ್ಯದ ಬೆಳೆ ನಾಶವಾಗಿದೆ. ಇತ್ತ ಹಾಕಿದ ಬಂಡವಾಳವೂ ಇಲ್ಲದೇ, ಹತ್ತಾರು ವರ್ಷಗಳಿಂದ ಬೆಳೆದಿದ್ದ ಮರಗಳೂ ಉಳಿಯದೇ ರೈತರ ಬದುಕು ಶೋಚನೀಯ ಸ್ಥಿತಿಗೆ ತಲುಪಿದೆ.
ಜಿಲ್ಲೆಯಲ್ಲಿ ಒಟ್ಟು 30 ಸಾವಿರಕ್ಕೂ ಹೆಚ್ಚು ಹೆಕ್ಟೇರ್ ಜಮೀನಿನಲ್ಲಿ ಮಾವು ಬೆಳೆಯಲಾಗುತ್ತಿದೆ. ಫೆಬ್ರವರಿ, ಮಾರ್ಚ್ ಹಾಗೂ ಏಪ್ರಿಲ್ ತಿಂಗಳಿನಲ್ಲಿನ ತೀವ್ರ ತಾಪಮಾನದಿಂದ ಹೂಗಳೆಲ್ಲ ಉದುರಿ 90% ಇಳುವರಿ ಕುಸಿದಿದ್ದು 10% ರಷ್ಟು ಮಾತ್ರ ಇಳುವರಿಯಾಗಿದೆ. ಅದೂ ಕೂಡಾ ಬಿಸಿಲಿಗೆ ಒಣಗಿ ಗುಣಮಟ್ಟ ಕಳೆದುಕೊಂಡಿದ್ದು, ಮಾರುಕಟ್ಟೆಯಲ್ಲೂ ಕೊಂಡುಕೊಳ್ಳುವವರಿಲ್ಲದೇ ಬೇಡಿಕೆ ಕುಸಿತ ಕಂಡಿದೆ.
ಈ ಬಗ್ಗೆ ಸಮೀಕ್ಷೆ ಮಾಡಿರುವ ಜಿಲ್ಲಾಡಳಿತ 400ಕೋಟಿ ರೂ. ಮೌಲ್ಯದ ಮಾವು ಬೆಳೆ ನಾಶ ಆಗಿರುವ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಇನ್ನೂ ಮಾವು ಬೆಳೆಗೆ ವಿಮೆ ನೀಡಲು ವಿಮಾ ಕಂಪನಿಗಳು ಹಿಂದೇಟು ಹಾಕಿವೆ. ಉಷ್ಣಾಂಶದಿಂದ ಬೆಳೆ ನಾಶವಾಗಿರೋದಕ್ಕೆ ವಿಮೆ ಅನ್ವಯವಾಗುವುದಿಲ್ಲ ಎಂದು ಹೇಳುತ್ತಿರುವುದು ಮಾವು ಬೆಳೆಗಾರರ ಆತಂಕಕ್ಕೆ ಕಾರಣವಾಗಿದೆ. ಕೂಡಲೇ ಸರ್ಕಾರ ಈ ಬಗ್ಗೆ ಗಮನಹರಿಸಿ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ರೈತರು ಮನವಿ ಮಾಡಿದ್ದಾರೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…
ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…
ದೊಡ್ಡಬಳ್ಳಾಪುರ ಭಾಗದಲ್ಲಿ ಅಡಿಕೆ ಹೊಂಬಾಳೆಗಳನ್ನು ಕಳ್ಳರು ಕದ್ದೊಯ್ಯುತ್ತಿರುವ ಘಟನೆಗಳು ಹೆಚ್ಚಾಗಿವೆ. ಇದರಿಂದ ರೈತರು…