ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ ಧರ್ಮವೆಂದೇ ಪರಿಗಣಿಸಲಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘ ಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ.…..ಮುಂದೆ ಓದಿ….
ದೆಹಲಿಯಲ್ಲಿ ಅವರು ಸ್ವಾಮಿ ವಿಜಯಾನಂದ ಅವರು ರಚಿಸಿರುವ ‘’ ದ ಹಿಂದೂ ಮ್ಯಾನಿಫ್ಯಾಸ್ಟೋ ‘’ ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದರು. ಭಾರತವು ಎಂದಿಗೂ ಅನ್ಯ ಧರ್ಮೀಯರನ್ನು ಅಗೌರವಿಸುವುದಾಗಲಿ, ಹಾನಿಯುಂಟು ಮಾಡುವುದಾಗಲಿ ಮಾಡಿಲ್ಲ. ಆದರೆ, ಯಾರಿಂದಲಾದರೂ ಸಮಾಜಕ್ಕೆ ಅಥವಾ ಧರ್ಮಕ್ಕೆ ಚ್ಯುತಿಯುಂಟಾದಲ್ಲಿ ಅವರನ್ನು ಶಿಕ್ಷಿಸುವುದು ತಪ್ಪೆನಿಸುವುದಿಲ್ಲ. ಭಗವದ್ಗೀತೆಯಲ್ಲೂ ಶ್ರೀ ಕೃಷ್ಣ ಪರಮಾತ್ಮ ಇದನ್ನೆ ಉಲ್ಲೇಖಿಸಿದ್ದಾನೆ. ಅರ್ಜುನ ಯುದ್ಧ ಮಾಡಿದ್ದು, ಬಂಧು ಬಾಂಧವರನ್ನೇ ಹತ್ಯೆ ಮಾಡಿದ್ದು ಸಹ ಧರ್ಮವೇ ಆಗುತ್ತದೆ ಎಂದು ಭಗವಂತ ಉಲ್ಲೇಖಿಸಿದ್ದಾನೆ. ಭಾರತ ಅಂಹಿಸಾ ಮಾರ್ಗದಲ್ಲಿ ಸಾಗುತ್ತಿದ್ದು, ಧರ್ಮ ರಕ್ಷಣೆಗೆ ಆದ್ಯತೆ ನೀಡುತ್ತಿದೆ. ಇದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದು ಹೇಳಿದರು.
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…
ಚಿಕ್ಕಮಗಳೂರು ಅರಣ್ಯ ವಿಭಾಗದಲ್ಲಿ ಕಾಡು ಬೆಂಕಿ ತಡೆಯಲು 970 ಕಿ.ಮೀ. ಬೆಂಕಿ ಪಥ…