ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ ಧರ್ಮವೆಂದೇ ಪರಿಗಣಿಸಲಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘ ಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ.…..ಮುಂದೆ ಓದಿ….
ದೆಹಲಿಯಲ್ಲಿ ಅವರು ಸ್ವಾಮಿ ವಿಜಯಾನಂದ ಅವರು ರಚಿಸಿರುವ ‘’ ದ ಹಿಂದೂ ಮ್ಯಾನಿಫ್ಯಾಸ್ಟೋ ‘’ ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದರು. ಭಾರತವು ಎಂದಿಗೂ ಅನ್ಯ ಧರ್ಮೀಯರನ್ನು ಅಗೌರವಿಸುವುದಾಗಲಿ, ಹಾನಿಯುಂಟು ಮಾಡುವುದಾಗಲಿ ಮಾಡಿಲ್ಲ. ಆದರೆ, ಯಾರಿಂದಲಾದರೂ ಸಮಾಜಕ್ಕೆ ಅಥವಾ ಧರ್ಮಕ್ಕೆ ಚ್ಯುತಿಯುಂಟಾದಲ್ಲಿ ಅವರನ್ನು ಶಿಕ್ಷಿಸುವುದು ತಪ್ಪೆನಿಸುವುದಿಲ್ಲ. ಭಗವದ್ಗೀತೆಯಲ್ಲೂ ಶ್ರೀ ಕೃಷ್ಣ ಪರಮಾತ್ಮ ಇದನ್ನೆ ಉಲ್ಲೇಖಿಸಿದ್ದಾನೆ. ಅರ್ಜುನ ಯುದ್ಧ ಮಾಡಿದ್ದು, ಬಂಧು ಬಾಂಧವರನ್ನೇ ಹತ್ಯೆ ಮಾಡಿದ್ದು ಸಹ ಧರ್ಮವೇ ಆಗುತ್ತದೆ ಎಂದು ಭಗವಂತ ಉಲ್ಲೇಖಿಸಿದ್ದಾನೆ. ಭಾರತ ಅಂಹಿಸಾ ಮಾರ್ಗದಲ್ಲಿ ಸಾಗುತ್ತಿದ್ದು, ಧರ್ಮ ರಕ್ಷಣೆಗೆ ಆದ್ಯತೆ ನೀಡುತ್ತಿದೆ. ಇದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದು ಹೇಳಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…