ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ ಧರ್ಮವೆಂದೇ ಪರಿಗಣಿಸಲಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘ ಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ.…..ಮುಂದೆ ಓದಿ….
ದೆಹಲಿಯಲ್ಲಿ ಅವರು ಸ್ವಾಮಿ ವಿಜಯಾನಂದ ಅವರು ರಚಿಸಿರುವ ‘’ ದ ಹಿಂದೂ ಮ್ಯಾನಿಫ್ಯಾಸ್ಟೋ ‘’ ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದರು. ಭಾರತವು ಎಂದಿಗೂ ಅನ್ಯ ಧರ್ಮೀಯರನ್ನು ಅಗೌರವಿಸುವುದಾಗಲಿ, ಹಾನಿಯುಂಟು ಮಾಡುವುದಾಗಲಿ ಮಾಡಿಲ್ಲ. ಆದರೆ, ಯಾರಿಂದಲಾದರೂ ಸಮಾಜಕ್ಕೆ ಅಥವಾ ಧರ್ಮಕ್ಕೆ ಚ್ಯುತಿಯುಂಟಾದಲ್ಲಿ ಅವರನ್ನು ಶಿಕ್ಷಿಸುವುದು ತಪ್ಪೆನಿಸುವುದಿಲ್ಲ. ಭಗವದ್ಗೀತೆಯಲ್ಲೂ ಶ್ರೀ ಕೃಷ್ಣ ಪರಮಾತ್ಮ ಇದನ್ನೆ ಉಲ್ಲೇಖಿಸಿದ್ದಾನೆ. ಅರ್ಜುನ ಯುದ್ಧ ಮಾಡಿದ್ದು, ಬಂಧು ಬಾಂಧವರನ್ನೇ ಹತ್ಯೆ ಮಾಡಿದ್ದು ಸಹ ಧರ್ಮವೇ ಆಗುತ್ತದೆ ಎಂದು ಭಗವಂತ ಉಲ್ಲೇಖಿಸಿದ್ದಾನೆ. ಭಾರತ ಅಂಹಿಸಾ ಮಾರ್ಗದಲ್ಲಿ ಸಾಗುತ್ತಿದ್ದು, ಧರ್ಮ ರಕ್ಷಣೆಗೆ ಆದ್ಯತೆ ನೀಡುತ್ತಿದೆ. ಇದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದು ಹೇಳಿದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…