ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ ಧರ್ಮವೆಂದೇ ಪರಿಗಣಿಸಲಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಸಂಘ ಚಾಲಕ ಮೋಹನ್ ಭಾಗವತ್ ಹೇಳಿದ್ದಾರೆ.…..ಮುಂದೆ ಓದಿ….
ದೆಹಲಿಯಲ್ಲಿ ಅವರು ಸ್ವಾಮಿ ವಿಜಯಾನಂದ ಅವರು ರಚಿಸಿರುವ ‘’ ದ ಹಿಂದೂ ಮ್ಯಾನಿಫ್ಯಾಸ್ಟೋ ‘’ ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದರು. ಭಾರತವು ಎಂದಿಗೂ ಅನ್ಯ ಧರ್ಮೀಯರನ್ನು ಅಗೌರವಿಸುವುದಾಗಲಿ, ಹಾನಿಯುಂಟು ಮಾಡುವುದಾಗಲಿ ಮಾಡಿಲ್ಲ. ಆದರೆ, ಯಾರಿಂದಲಾದರೂ ಸಮಾಜಕ್ಕೆ ಅಥವಾ ಧರ್ಮಕ್ಕೆ ಚ್ಯುತಿಯುಂಟಾದಲ್ಲಿ ಅವರನ್ನು ಶಿಕ್ಷಿಸುವುದು ತಪ್ಪೆನಿಸುವುದಿಲ್ಲ. ಭಗವದ್ಗೀತೆಯಲ್ಲೂ ಶ್ರೀ ಕೃಷ್ಣ ಪರಮಾತ್ಮ ಇದನ್ನೆ ಉಲ್ಲೇಖಿಸಿದ್ದಾನೆ. ಅರ್ಜುನ ಯುದ್ಧ ಮಾಡಿದ್ದು, ಬಂಧು ಬಾಂಧವರನ್ನೇ ಹತ್ಯೆ ಮಾಡಿದ್ದು ಸಹ ಧರ್ಮವೇ ಆಗುತ್ತದೆ ಎಂದು ಭಗವಂತ ಉಲ್ಲೇಖಿಸಿದ್ದಾನೆ. ಭಾರತ ಅಂಹಿಸಾ ಮಾರ್ಗದಲ್ಲಿ ಸಾಗುತ್ತಿದ್ದು, ಧರ್ಮ ರಕ್ಷಣೆಗೆ ಆದ್ಯತೆ ನೀಡುತ್ತಿದೆ. ಇದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದು ಹೇಳಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…