ಕರ್ನಾಟಕದ ಕಲೆಗೆ ಮತ್ತೊಂದು ಗರಿ | ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ರಾಜ್ಯದ ಹೊಯ್ಸಳ ದೇವಾಲಯಗಳು ಸೇರ್ಪಡೆ

September 19, 2023
9:51 AM
ಕರ್ನಾಟಕದ ಬೇಲೂರು, ಹಳೇಬೀಡು ಮತ್ತು ಸೋಮನಾಥಪುರದ ಪ್ರಸಿದ್ಧ ಹೊಯ್ಸಳ ದೇವಾಲಯಗಳನ್ನು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಲಾಗಿದೆ.

ಕರ್ನಾಟಕ ಹಲವು ವೈವಿಧ್ಯಗಳನ್ನು ತನ್ನೊಳಗೆ ತುಂಬಿಕೊಂಡ ರಾಜ್ಯ. ಕಲೆ, ಸಾಹಿತ್ಯ, ಪ್ರಕೃತಿ, ಪಾರಂಪರಿಕ ತಾಣಗಳನ್ನು ಹೊಂದಿರುವ ರಾಜ್ಯ. ಇದೀಗ ಯುನೆಸ್ಕೊ (UNESCO) ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಕರ್ನಾಟಕದ ಹೊಯ್ಸಳ ದೇವಾಲಯಗಳನ್ನು ಸೇರ್ಪಡೆ ಮಾಡಲಾಗಿದೆ. ಈ ವಿಚಾರವನ್ನು ವಿಶ್ವಸಂಸ್ಥೆಯು ಸಾಮಾಜಿಕ ಜಾಲತಾಣ ಟ್ವಿಟ್ಟರ್‌ (X)ನಲ್ಲಿ ಪೋಸ್ಟ್‌ ಮಾಡಿದೆ.

ಹೊಯ್ಸಳರ ಕಾಲದ ಪವಿತ್ರ ದೇವಾಲಯಗಳು. ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿ ಸೇರಿವೆ. ಭಾರತಕ್ಕೆ ಅಭಿನಂದನೆಗಳು ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದೆ. ಕರ್ನಾಟಕದ ಬೇಲೂರು, ಹಳೇಬೀಡು ಮತ್ತು ಸೋಮನಾಥಪುರದ ಪ್ರಸಿದ್ಧ ಹೊಯ್ಸಳ ದೇವಾಲಯಗಳನ್ನು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ(ಯುನೆಸ್ಕೊ) ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಲಾಗಿದೆ.

ಹೊಯ್ಸಳ ದೇವಾಲಯಗಳು, ಏಪ್ರಿಲ್ 2014 ರಿಂದಲೂ ಯುನೆಸ್ಕೊದ ತಾತ್ಕಾಲಿಕ ಪಟ್ಟಿಯಲ್ಲಿದ್ದವು. ಜನವರಿ 2022 ರಲ್ಲಿ, 2022-23 ಕ್ಕೆ ವಿಶ್ವ ಪಾರಂಪರಿಕ ತಾಣವಾಗಿ ಪರಿಗಣಿಸಲು ಭಾರತದಿಂದ ನಾಮನಿರ್ದೇಶನ ಮಾಡಲಾಗಿತ್ತು. ಸರ್ಕಾರದ ಮನವಿಗೆ ಒಪ್ಪಿ ಈಗ ಯುನೆಸ್ಕೊ ಪಟ್ಟಿಗೆ ಸೇರ್ಪಡೆ ಮಾಡಿದೆ. ಈ ಮೂರು ಹೊಯ್ಸಳ ದೇವಾಲಯಗಳು ಈಗಾಗಲೇ ಭಾರತೀಯ ಪುರಾತತ್ವ ಸರ್ವೇಕ್ಷಣೆಯ ರಕ್ಷಿತ ಸ್ಮಾರಕಗಳಾಗಿವೆ.

Source : Twitter(X)

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ
ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?
September 11, 2026
8:34 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror