ಕರ್ನಾಟಕ ಹಲವು ವೈವಿಧ್ಯಗಳನ್ನು ತನ್ನೊಳಗೆ ತುಂಬಿಕೊಂಡ ರಾಜ್ಯ. ಕಲೆ, ಸಾಹಿತ್ಯ, ಪ್ರಕೃತಿ, ಪಾರಂಪರಿಕ ತಾಣಗಳನ್ನು ಹೊಂದಿರುವ ರಾಜ್ಯ. ಇದೀಗ ಯುನೆಸ್ಕೊ (UNESCO) ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಕರ್ನಾಟಕದ ಹೊಯ್ಸಳ ದೇವಾಲಯಗಳನ್ನು ಸೇರ್ಪಡೆ ಮಾಡಲಾಗಿದೆ. ಈ ವಿಚಾರವನ್ನು ವಿಶ್ವಸಂಸ್ಥೆಯು ಸಾಮಾಜಿಕ ಜಾಲತಾಣ ಟ್ವಿಟ್ಟರ್ (X)ನಲ್ಲಿ ಪೋಸ್ಟ್ ಮಾಡಿದೆ.
ಹೊಯ್ಸಳರ ಕಾಲದ ಪವಿತ್ರ ದೇವಾಲಯಗಳು. ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿ ಸೇರಿವೆ. ಭಾರತಕ್ಕೆ ಅಭಿನಂದನೆಗಳು ಎಂದು ಪೋಸ್ಟ್ನಲ್ಲಿ ಬರೆದುಕೊಂಡಿದೆ. ಕರ್ನಾಟಕದ ಬೇಲೂರು, ಹಳೇಬೀಡು ಮತ್ತು ಸೋಮನಾಥಪುರದ ಪ್ರಸಿದ್ಧ ಹೊಯ್ಸಳ ದೇವಾಲಯಗಳನ್ನು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ(ಯುನೆಸ್ಕೊ) ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಲಾಗಿದೆ.
ಹೊಯ್ಸಳ ದೇವಾಲಯಗಳು, ಏಪ್ರಿಲ್ 2014 ರಿಂದಲೂ ಯುನೆಸ್ಕೊದ ತಾತ್ಕಾಲಿಕ ಪಟ್ಟಿಯಲ್ಲಿದ್ದವು. ಜನವರಿ 2022 ರಲ್ಲಿ, 2022-23 ಕ್ಕೆ ವಿಶ್ವ ಪಾರಂಪರಿಕ ತಾಣವಾಗಿ ಪರಿಗಣಿಸಲು ಭಾರತದಿಂದ ನಾಮನಿರ್ದೇಶನ ಮಾಡಲಾಗಿತ್ತು. ಸರ್ಕಾರದ ಮನವಿಗೆ ಒಪ್ಪಿ ಈಗ ಯುನೆಸ್ಕೊ ಪಟ್ಟಿಗೆ ಸೇರ್ಪಡೆ ಮಾಡಿದೆ. ಈ ಮೂರು ಹೊಯ್ಸಳ ದೇವಾಲಯಗಳು ಈಗಾಗಲೇ ಭಾರತೀಯ ಪುರಾತತ್ವ ಸರ್ವೇಕ್ಷಣೆಯ ರಕ್ಷಿತ ಸ್ಮಾರಕಗಳಾಗಿವೆ.
Source : Twitter(X)
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…