ಕರ್ನಾಟಕ ಹಲವು ವೈವಿಧ್ಯಗಳನ್ನು ತನ್ನೊಳಗೆ ತುಂಬಿಕೊಂಡ ರಾಜ್ಯ. ಕಲೆ, ಸಾಹಿತ್ಯ, ಪ್ರಕೃತಿ, ಪಾರಂಪರಿಕ ತಾಣಗಳನ್ನು ಹೊಂದಿರುವ ರಾಜ್ಯ. ಇದೀಗ ಯುನೆಸ್ಕೊ (UNESCO) ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಕರ್ನಾಟಕದ ಹೊಯ್ಸಳ ದೇವಾಲಯಗಳನ್ನು ಸೇರ್ಪಡೆ ಮಾಡಲಾಗಿದೆ. ಈ ವಿಚಾರವನ್ನು ವಿಶ್ವಸಂಸ್ಥೆಯು ಸಾಮಾಜಿಕ ಜಾಲತಾಣ ಟ್ವಿಟ್ಟರ್ (X)ನಲ್ಲಿ ಪೋಸ್ಟ್ ಮಾಡಿದೆ.
ಹೊಯ್ಸಳರ ಕಾಲದ ಪವಿತ್ರ ದೇವಾಲಯಗಳು. ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿ ಸೇರಿವೆ. ಭಾರತಕ್ಕೆ ಅಭಿನಂದನೆಗಳು ಎಂದು ಪೋಸ್ಟ್ನಲ್ಲಿ ಬರೆದುಕೊಂಡಿದೆ. ಕರ್ನಾಟಕದ ಬೇಲೂರು, ಹಳೇಬೀಡು ಮತ್ತು ಸೋಮನಾಥಪುರದ ಪ್ರಸಿದ್ಧ ಹೊಯ್ಸಳ ದೇವಾಲಯಗಳನ್ನು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ(ಯುನೆಸ್ಕೊ) ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಲಾಗಿದೆ.
ಹೊಯ್ಸಳ ದೇವಾಲಯಗಳು, ಏಪ್ರಿಲ್ 2014 ರಿಂದಲೂ ಯುನೆಸ್ಕೊದ ತಾತ್ಕಾಲಿಕ ಪಟ್ಟಿಯಲ್ಲಿದ್ದವು. ಜನವರಿ 2022 ರಲ್ಲಿ, 2022-23 ಕ್ಕೆ ವಿಶ್ವ ಪಾರಂಪರಿಕ ತಾಣವಾಗಿ ಪರಿಗಣಿಸಲು ಭಾರತದಿಂದ ನಾಮನಿರ್ದೇಶನ ಮಾಡಲಾಗಿತ್ತು. ಸರ್ಕಾರದ ಮನವಿಗೆ ಒಪ್ಪಿ ಈಗ ಯುನೆಸ್ಕೊ ಪಟ್ಟಿಗೆ ಸೇರ್ಪಡೆ ಮಾಡಿದೆ. ಈ ಮೂರು ಹೊಯ್ಸಳ ದೇವಾಲಯಗಳು ಈಗಾಗಲೇ ಭಾರತೀಯ ಪುರಾತತ್ವ ಸರ್ವೇಕ್ಷಣೆಯ ರಕ್ಷಿತ ಸ್ಮಾರಕಗಳಾಗಿವೆ.
Source : Twitter(X)
ಡಾ. ವಿಘ್ನೇಶ್ವರ ವರ್ಮುಡಿ ಅವರು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಕಟಿಸಿದ್ದ ಲೇಖನಗಳನ್ನು ವಿಶ್ವದ ಬೇರೆ…
ಮರೆತುಹೋದ ಮನೆಮಾತನ್ನು ಮರಳಿ ನೆನಪಿಸುವ ಉದ್ದೇಶದಿಂದ ಈ ಬಾರಿಯ ಚಾತುರ್ಮಾಸ್ಯವನ್ನು ಸ್ವಭಾಷಾ ಚಾತುರ್ಮಾಸ್ಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದೇಶದಲ್ಲಿ ರಬ್ಬರ್ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್ ಆಮದು ನೀತಿಯು ರಬ್ಬರ್…
ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ…
ಸುಳ್ಯದ ಬಹುತೇಕ ಪ್ರದೇಶ ಅರಣ್ಯದಿಂದ ಕೂಡಿದೆ. ಮಲೆನಾಡು ತಪ್ಪಲು ಪ್ರದೇಶವಾದ್ದರಿಂದ ಮಳೆಯೂ ಹೆಚ್ಚು,…