ಕರ್ನಾಟಕ ಹಲವು ವೈವಿಧ್ಯಗಳನ್ನು ತನ್ನೊಳಗೆ ತುಂಬಿಕೊಂಡ ರಾಜ್ಯ. ಕಲೆ, ಸಾಹಿತ್ಯ, ಪ್ರಕೃತಿ, ಪಾರಂಪರಿಕ ತಾಣಗಳನ್ನು ಹೊಂದಿರುವ ರಾಜ್ಯ. ಇದೀಗ ಯುನೆಸ್ಕೊ (UNESCO) ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಕರ್ನಾಟಕದ ಹೊಯ್ಸಳ ದೇವಾಲಯಗಳನ್ನು ಸೇರ್ಪಡೆ ಮಾಡಲಾಗಿದೆ. ಈ ವಿಚಾರವನ್ನು ವಿಶ್ವಸಂಸ್ಥೆಯು ಸಾಮಾಜಿಕ ಜಾಲತಾಣ ಟ್ವಿಟ್ಟರ್ (X)ನಲ್ಲಿ ಪೋಸ್ಟ್ ಮಾಡಿದೆ.
ಹೊಯ್ಸಳರ ಕಾಲದ ಪವಿತ್ರ ದೇವಾಲಯಗಳು. ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿ ಸೇರಿವೆ. ಭಾರತಕ್ಕೆ ಅಭಿನಂದನೆಗಳು ಎಂದು ಪೋಸ್ಟ್ನಲ್ಲಿ ಬರೆದುಕೊಂಡಿದೆ. ಕರ್ನಾಟಕದ ಬೇಲೂರು, ಹಳೇಬೀಡು ಮತ್ತು ಸೋಮನಾಥಪುರದ ಪ್ರಸಿದ್ಧ ಹೊಯ್ಸಳ ದೇವಾಲಯಗಳನ್ನು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ(ಯುನೆಸ್ಕೊ) ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಲಾಗಿದೆ.
ಹೊಯ್ಸಳ ದೇವಾಲಯಗಳು, ಏಪ್ರಿಲ್ 2014 ರಿಂದಲೂ ಯುನೆಸ್ಕೊದ ತಾತ್ಕಾಲಿಕ ಪಟ್ಟಿಯಲ್ಲಿದ್ದವು. ಜನವರಿ 2022 ರಲ್ಲಿ, 2022-23 ಕ್ಕೆ ವಿಶ್ವ ಪಾರಂಪರಿಕ ತಾಣವಾಗಿ ಪರಿಗಣಿಸಲು ಭಾರತದಿಂದ ನಾಮನಿರ್ದೇಶನ ಮಾಡಲಾಗಿತ್ತು. ಸರ್ಕಾರದ ಮನವಿಗೆ ಒಪ್ಪಿ ಈಗ ಯುನೆಸ್ಕೊ ಪಟ್ಟಿಗೆ ಸೇರ್ಪಡೆ ಮಾಡಿದೆ. ಈ ಮೂರು ಹೊಯ್ಸಳ ದೇವಾಲಯಗಳು ಈಗಾಗಲೇ ಭಾರತೀಯ ಪುರಾತತ್ವ ಸರ್ವೇಕ್ಷಣೆಯ ರಕ್ಷಿತ ಸ್ಮಾರಕಗಳಾಗಿವೆ.
Source : Twitter(X)
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…