Advertisement
ಕಲೆ-ಸಂಸ್ಕೃತಿ

ಕರ್ನಾಟಕದ ಕಲೆಗೆ ಮತ್ತೊಂದು ಗರಿ | ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ರಾಜ್ಯದ ಹೊಯ್ಸಳ ದೇವಾಲಯಗಳು ಸೇರ್ಪಡೆ

Share

ಕರ್ನಾಟಕ ಹಲವು ವೈವಿಧ್ಯಗಳನ್ನು ತನ್ನೊಳಗೆ ತುಂಬಿಕೊಂಡ ರಾಜ್ಯ. ಕಲೆ, ಸಾಹಿತ್ಯ, ಪ್ರಕೃತಿ, ಪಾರಂಪರಿಕ ತಾಣಗಳನ್ನು ಹೊಂದಿರುವ ರಾಜ್ಯ. ಇದೀಗ ಯುನೆಸ್ಕೊ (UNESCO) ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಕರ್ನಾಟಕದ ಹೊಯ್ಸಳ ದೇವಾಲಯಗಳನ್ನು ಸೇರ್ಪಡೆ ಮಾಡಲಾಗಿದೆ. ಈ ವಿಚಾರವನ್ನು ವಿಶ್ವಸಂಸ್ಥೆಯು ಸಾಮಾಜಿಕ ಜಾಲತಾಣ ಟ್ವಿಟ್ಟರ್‌ (X)ನಲ್ಲಿ ಪೋಸ್ಟ್‌ ಮಾಡಿದೆ.

ಹೊಯ್ಸಳರ ಕಾಲದ ಪವಿತ್ರ ದೇವಾಲಯಗಳು. ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿ ಸೇರಿವೆ. ಭಾರತಕ್ಕೆ ಅಭಿನಂದನೆಗಳು ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದೆ. ಕರ್ನಾಟಕದ ಬೇಲೂರು, ಹಳೇಬೀಡು ಮತ್ತು ಸೋಮನಾಥಪುರದ ಪ್ರಸಿದ್ಧ ಹೊಯ್ಸಳ ದೇವಾಲಯಗಳನ್ನು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ(ಯುನೆಸ್ಕೊ) ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಲಾಗಿದೆ.

ಹೊಯ್ಸಳ ದೇವಾಲಯಗಳು, ಏಪ್ರಿಲ್ 2014 ರಿಂದಲೂ ಯುನೆಸ್ಕೊದ ತಾತ್ಕಾಲಿಕ ಪಟ್ಟಿಯಲ್ಲಿದ್ದವು. ಜನವರಿ 2022 ರಲ್ಲಿ, 2022-23 ಕ್ಕೆ ವಿಶ್ವ ಪಾರಂಪರಿಕ ತಾಣವಾಗಿ ಪರಿಗಣಿಸಲು ಭಾರತದಿಂದ ನಾಮನಿರ್ದೇಶನ ಮಾಡಲಾಗಿತ್ತು. ಸರ್ಕಾರದ ಮನವಿಗೆ ಒಪ್ಪಿ ಈಗ ಯುನೆಸ್ಕೊ ಪಟ್ಟಿಗೆ ಸೇರ್ಪಡೆ ಮಾಡಿದೆ. ಈ ಮೂರು ಹೊಯ್ಸಳ ದೇವಾಲಯಗಳು ಈಗಾಗಲೇ ಭಾರತೀಯ ಪುರಾತತ್ವ ಸರ್ವೇಕ್ಷಣೆಯ ರಕ್ಷಿತ ಸ್ಮಾರಕಗಳಾಗಿವೆ.

Source : Twitter(X)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

5 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

16 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

16 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

16 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

22 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

1 day ago