ಕರ್ನಾಟಕ ಹಲವು ವೈವಿಧ್ಯಗಳನ್ನು ತನ್ನೊಳಗೆ ತುಂಬಿಕೊಂಡ ರಾಜ್ಯ. ಕಲೆ, ಸಾಹಿತ್ಯ, ಪ್ರಕೃತಿ, ಪಾರಂಪರಿಕ ತಾಣಗಳನ್ನು ಹೊಂದಿರುವ ರಾಜ್ಯ. ಇದೀಗ ಯುನೆಸ್ಕೊ (UNESCO) ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಕರ್ನಾಟಕದ ಹೊಯ್ಸಳ ದೇವಾಲಯಗಳನ್ನು ಸೇರ್ಪಡೆ ಮಾಡಲಾಗಿದೆ. ಈ ವಿಚಾರವನ್ನು ವಿಶ್ವಸಂಸ್ಥೆಯು ಸಾಮಾಜಿಕ ಜಾಲತಾಣ ಟ್ವಿಟ್ಟರ್ (X)ನಲ್ಲಿ ಪೋಸ್ಟ್ ಮಾಡಿದೆ.
ಹೊಯ್ಸಳರ ಕಾಲದ ಪವಿತ್ರ ದೇವಾಲಯಗಳು. ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿ ಸೇರಿವೆ. ಭಾರತಕ್ಕೆ ಅಭಿನಂದನೆಗಳು ಎಂದು ಪೋಸ್ಟ್ನಲ್ಲಿ ಬರೆದುಕೊಂಡಿದೆ. ಕರ್ನಾಟಕದ ಬೇಲೂರು, ಹಳೇಬೀಡು ಮತ್ತು ಸೋಮನಾಥಪುರದ ಪ್ರಸಿದ್ಧ ಹೊಯ್ಸಳ ದೇವಾಲಯಗಳನ್ನು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ(ಯುನೆಸ್ಕೊ) ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಲಾಗಿದೆ.
ಹೊಯ್ಸಳ ದೇವಾಲಯಗಳು, ಏಪ್ರಿಲ್ 2014 ರಿಂದಲೂ ಯುನೆಸ್ಕೊದ ತಾತ್ಕಾಲಿಕ ಪಟ್ಟಿಯಲ್ಲಿದ್ದವು. ಜನವರಿ 2022 ರಲ್ಲಿ, 2022-23 ಕ್ಕೆ ವಿಶ್ವ ಪಾರಂಪರಿಕ ತಾಣವಾಗಿ ಪರಿಗಣಿಸಲು ಭಾರತದಿಂದ ನಾಮನಿರ್ದೇಶನ ಮಾಡಲಾಗಿತ್ತು. ಸರ್ಕಾರದ ಮನವಿಗೆ ಒಪ್ಪಿ ಈಗ ಯುನೆಸ್ಕೊ ಪಟ್ಟಿಗೆ ಸೇರ್ಪಡೆ ಮಾಡಿದೆ. ಈ ಮೂರು ಹೊಯ್ಸಳ ದೇವಾಲಯಗಳು ಈಗಾಗಲೇ ಭಾರತೀಯ ಪುರಾತತ್ವ ಸರ್ವೇಕ್ಷಣೆಯ ರಕ್ಷಿತ ಸ್ಮಾರಕಗಳಾಗಿವೆ.
Source : Twitter(X)
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…