ಕರ್ನಾಟಕ ಹಲವು ವೈವಿಧ್ಯಗಳನ್ನು ತನ್ನೊಳಗೆ ತುಂಬಿಕೊಂಡ ರಾಜ್ಯ. ಕಲೆ, ಸಾಹಿತ್ಯ, ಪ್ರಕೃತಿ, ಪಾರಂಪರಿಕ ತಾಣಗಳನ್ನು ಹೊಂದಿರುವ ರಾಜ್ಯ. ಇದೀಗ ಯುನೆಸ್ಕೊ (UNESCO) ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಕರ್ನಾಟಕದ ಹೊಯ್ಸಳ ದೇವಾಲಯಗಳನ್ನು ಸೇರ್ಪಡೆ ಮಾಡಲಾಗಿದೆ. ಈ ವಿಚಾರವನ್ನು ವಿಶ್ವಸಂಸ್ಥೆಯು ಸಾಮಾಜಿಕ ಜಾಲತಾಣ ಟ್ವಿಟ್ಟರ್ (X)ನಲ್ಲಿ ಪೋಸ್ಟ್ ಮಾಡಿದೆ.
ಹೊಯ್ಸಳರ ಕಾಲದ ಪವಿತ್ರ ದೇವಾಲಯಗಳು. ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿ ಸೇರಿವೆ. ಭಾರತಕ್ಕೆ ಅಭಿನಂದನೆಗಳು ಎಂದು ಪೋಸ್ಟ್ನಲ್ಲಿ ಬರೆದುಕೊಂಡಿದೆ. ಕರ್ನಾಟಕದ ಬೇಲೂರು, ಹಳೇಬೀಡು ಮತ್ತು ಸೋಮನಾಥಪುರದ ಪ್ರಸಿದ್ಧ ಹೊಯ್ಸಳ ದೇವಾಲಯಗಳನ್ನು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ(ಯುನೆಸ್ಕೊ) ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಲಾಗಿದೆ.
ಹೊಯ್ಸಳ ದೇವಾಲಯಗಳು, ಏಪ್ರಿಲ್ 2014 ರಿಂದಲೂ ಯುನೆಸ್ಕೊದ ತಾತ್ಕಾಲಿಕ ಪಟ್ಟಿಯಲ್ಲಿದ್ದವು. ಜನವರಿ 2022 ರಲ್ಲಿ, 2022-23 ಕ್ಕೆ ವಿಶ್ವ ಪಾರಂಪರಿಕ ತಾಣವಾಗಿ ಪರಿಗಣಿಸಲು ಭಾರತದಿಂದ ನಾಮನಿರ್ದೇಶನ ಮಾಡಲಾಗಿತ್ತು. ಸರ್ಕಾರದ ಮನವಿಗೆ ಒಪ್ಪಿ ಈಗ ಯುನೆಸ್ಕೊ ಪಟ್ಟಿಗೆ ಸೇರ್ಪಡೆ ಮಾಡಿದೆ. ಈ ಮೂರು ಹೊಯ್ಸಳ ದೇವಾಲಯಗಳು ಈಗಾಗಲೇ ಭಾರತೀಯ ಪುರಾತತ್ವ ಸರ್ವೇಕ್ಷಣೆಯ ರಕ್ಷಿತ ಸ್ಮಾರಕಗಳಾಗಿವೆ.
Source : Twitter(X)
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…