ಕರ್ನಾಟಕ ಹಲವು ವೈವಿಧ್ಯಗಳನ್ನು ತನ್ನೊಳಗೆ ತುಂಬಿಕೊಂಡ ರಾಜ್ಯ. ಕಲೆ, ಸಾಹಿತ್ಯ, ಪ್ರಕೃತಿ, ಪಾರಂಪರಿಕ ತಾಣಗಳನ್ನು ಹೊಂದಿರುವ ರಾಜ್ಯ. ಇದೀಗ ಯುನೆಸ್ಕೊ (UNESCO) ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಕರ್ನಾಟಕದ ಹೊಯ್ಸಳ ದೇವಾಲಯಗಳನ್ನು ಸೇರ್ಪಡೆ ಮಾಡಲಾಗಿದೆ. ಈ ವಿಚಾರವನ್ನು ವಿಶ್ವಸಂಸ್ಥೆಯು ಸಾಮಾಜಿಕ ಜಾಲತಾಣ ಟ್ವಿಟ್ಟರ್ (X)ನಲ್ಲಿ ಪೋಸ್ಟ್ ಮಾಡಿದೆ.
ಹೊಯ್ಸಳರ ಕಾಲದ ಪವಿತ್ರ ದೇವಾಲಯಗಳು. ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿ ಸೇರಿವೆ. ಭಾರತಕ್ಕೆ ಅಭಿನಂದನೆಗಳು ಎಂದು ಪೋಸ್ಟ್ನಲ್ಲಿ ಬರೆದುಕೊಂಡಿದೆ. ಕರ್ನಾಟಕದ ಬೇಲೂರು, ಹಳೇಬೀಡು ಮತ್ತು ಸೋಮನಾಥಪುರದ ಪ್ರಸಿದ್ಧ ಹೊಯ್ಸಳ ದೇವಾಲಯಗಳನ್ನು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ(ಯುನೆಸ್ಕೊ) ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಲಾಗಿದೆ.
ಹೊಯ್ಸಳ ದೇವಾಲಯಗಳು, ಏಪ್ರಿಲ್ 2014 ರಿಂದಲೂ ಯುನೆಸ್ಕೊದ ತಾತ್ಕಾಲಿಕ ಪಟ್ಟಿಯಲ್ಲಿದ್ದವು. ಜನವರಿ 2022 ರಲ್ಲಿ, 2022-23 ಕ್ಕೆ ವಿಶ್ವ ಪಾರಂಪರಿಕ ತಾಣವಾಗಿ ಪರಿಗಣಿಸಲು ಭಾರತದಿಂದ ನಾಮನಿರ್ದೇಶನ ಮಾಡಲಾಗಿತ್ತು. ಸರ್ಕಾರದ ಮನವಿಗೆ ಒಪ್ಪಿ ಈಗ ಯುನೆಸ್ಕೊ ಪಟ್ಟಿಗೆ ಸೇರ್ಪಡೆ ಮಾಡಿದೆ. ಈ ಮೂರು ಹೊಯ್ಸಳ ದೇವಾಲಯಗಳು ಈಗಾಗಲೇ ಭಾರತೀಯ ಪುರಾತತ್ವ ಸರ್ವೇಕ್ಷಣೆಯ ರಕ್ಷಿತ ಸ್ಮಾರಕಗಳಾಗಿವೆ.
Source : Twitter(X)
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…