MIRROR FOCUS

ಅಡಿಕೆ ಧಾರಣೆ ಏರಿಕೆಗೆ ಕಾರಣವೇನು..? | ಕಳ್ಳಸಾಗಾಣಿಕೆಯಾಗುತ್ತಿದ್ದ ಅಡಿಕೆಗೆ ಕಡಿವಾಣ ಹೇಗಾಯ್ತು..? |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

 ಅಸ್ಸಾಂ, ಮೇಘಾಲಯ ಸೇರಿದಂತೆ ಈಶಾನ್ಯ ರಾಜ್ಯಗಳಿಂದ ಕಳೆದ ಕೆಲವು ಸಮಯಗಳಿಂದ ಕಳ್ಳದಾರಿಯ ಮೂಲಕ ಸಾಗಾಟವಾಗುತ್ತಿದ್ದ ಅಡಿಕೆಗೆ ಬಹುತೇಕ ಕಡಿವಾಣ ಬಿದ್ದಿದೆ ಎಂದು ಮೇಘಾಲಯದ ಸಾಮಾಜಿಕ ಸಂಘಟನೆಗಳು ಹೇಳಿವೆ.  ಕಳೆದ ಕೆಲವು ದಿನಗಳಿಂದ ಕಳ್ಳಸಾಗಾಣಿಕೆಯ ಮೂಲಕ ಬರುತ್ತಿದ್ದ ಅಡಿಕೆಗೆ ಕಡಿವಾಣ ಹಾಕಲಾಗಿದೆ. ಇದೀಗ ಅಡಿಕೆ ಧಾರಣೆಯೂ ಏರಿಕೆ ಕಾಣುತ್ತಿದೆ.

Advertisement
Advertisement

ಬಾಂಗ್ಲಾದೇಶದಿಂದ ವಿವಿಧ ಗಡಿಗಳ ಮೂಲಕ ಅಕ್ರಮವಾಗಿ ಬರ್ಮಾ ಅಡಿಕೆ ಸಾಗಾಟವನ್ನು ತಡೆಯಲು ಮೇಘಾಲಯದ  ವಿವಿಧ ಸಂಘಟನೆಗಳ ಪ್ರಯತ್ನದ ನಂತರ ಮೇಘಾಲಯ, ಅಸ್ಸಾಂ ಪ್ರದೇಶದಲ್ಲೂ ಅಡಿಕೆ ವಹಿವಾಟು ಸುಧಾರಣೆ ಕಂಡಿದೆ.  ಮೂಲಗಳ ಪ್ರಕಾರ ಅಕ್ರಮ ವ್ಯಾಪಾರವನ್ನು ಈಗ ನಿಲ್ಲಿಸಲಾಗಿದೆ, ಇದು ಮಾರುಕಟ್ಟೆಗಳು ಸ್ವಲ್ಪಮಟ್ಟಿಗೆ ಚೇತರಿಸಿಕೊಳ್ಳಲು ಕಾರಣವಾಯಿತು ಎಂದು ಮೇಘಾಲಯದ ವರದಿ ತಿಳಿಸಿದೆ. ಬರ್ಮಾ ಅಡಿಕೆ ಅಕ್ರಮ ಸಾಗಾಟದ ಕಾರಣದಿಂದ ಅಲ್ಲಿನ ಅಡಿಕೆ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದರು. ಇದಕ್ಕಾಗಿ ಅಡಿಕೆ ಸಾಗಾಟ ತಡೆಗೆ ಹೋರಾಟ ನಡೆಯುತ್ತಿತ್ತು. ಕಳೆದ ಒಂದು ವಾರದಿಂದ ಯಾವುದೇ ಅಕ್ರಮ ಅಡಿಕೆ ಸಾಗಾಟದ  ವಾಹನಗಳು ಬರುತ್ತಿಲ್ಲ ಎಂದು ವರದಿ ಮಾಡಿದೆ.

ಅಡಿಕೆ ಅಕ್ರಮ ಸಾಗಾಟ ಹಾಗೂ ಈ ವಹಿವಾಟು ನಿಜಕ್ಕೂ ಕಳವಳಕಾರಿಯಾಗಿದೆ. ಅಂತರರಾಷ್ಟ್ರೀಯ ಕಳ್ಳಸಾಗಣೆ ಜಾಲದ ಹಿಂದೆ ಇರುವವರನ್ನು ಸರ್ಕಾರವು ಪತ್ತೆ ಮಾಡಬೇಕಿತ್ತು ಹಾಗೂ ಸಾರ್ವಜನಿಕವಾಗಿ ಈ ವಿವರ ಬಹಿರಂಗಪಡಿಸಬೇಕಿತ್ತು. ಆದರೆ ಈ ಬಗ್ಗೆ ಇದುವರೆಗೂ ಏಕೆ ಯಾವುದೇ ಕ್ರಮಗಳು ಆಗಿಲ್ಲ ಎಂದು ಸಾಮಾಜಿಕ ಸಂಘಟನೆಗಳು ಪ್ರಶ್ನಿಸಿವೆ.

ಅಡಿಕೆ ಕಳ್ಳಸಾಗಾಣಿಕೆಯ ತನಿಖಾ ವರದಿಯನ್ನು ಸಾರ್ವಜನಿಕಗೊಳಿಸಬೇಕು, ತನಿಖೆ ಏನಾಯಿತು ಎಂದು ಬಹಿರಂಗಗೊಳಿಸಬೇಕು ಹಾಗೂ  ಜನರಲ್ಲಿ ವಿಶ್ವಾಸ ಮೂಡಿಸಬೇಕು, ಎಂದು ಸಾಮಾಜಿಕ ಕಾರ್ಯಕರ್ತರು ಮೇಘಾಲಯದಲ್ಲಿ ಒತ್ತಾಯಿಸಿದ್ದಾರೆ.

Source : Meghalaya Media

Advertisement

As per sources,  Arecanut  smugglers from Meghalaya, Assam and Bangladesh, the illegal trade has now stopped, leading to markets recovering ever so slightly.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?

ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…

20 hours ago

ಮಳೆ Update | ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆ | ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆ | ಉಡುಪಿಯಲ್ಲಿ 164 ಮಿಮೀ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…

20 hours ago

ಬಿತ್ತನೆ ಬೀಜ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ

ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…

23 hours ago

ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ

ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…

23 hours ago

ಬದುಕು ಪುರಾಣ | ಎಲ್ಲರೊಳಗೂ ಏಕಲವ್ಯನಿದ್ದಾನೆ!

 ‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…

23 hours ago

ಮನೆಯಲ್ಲಿ ಸಂಪತ್ತು, ಸಂತೋಷ ಹೆಚ್ಚಾಗಲು ಮುಖ್ಯ ದ್ವಾರ ಹೀಗಿರಲಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

23 hours ago