MIRROR FOCUS

ಅಡಿಕೆ ಧಾರಣೆ ಏರಿಕೆಗೆ ಕಾರಣವೇನು..? | ಕಳ್ಳಸಾಗಾಣಿಕೆಯಾಗುತ್ತಿದ್ದ ಅಡಿಕೆಗೆ ಕಡಿವಾಣ ಹೇಗಾಯ್ತು..? |

Share

 ಅಸ್ಸಾಂ, ಮೇಘಾಲಯ ಸೇರಿದಂತೆ ಈಶಾನ್ಯ ರಾಜ್ಯಗಳಿಂದ ಕಳೆದ ಕೆಲವು ಸಮಯಗಳಿಂದ ಕಳ್ಳದಾರಿಯ ಮೂಲಕ ಸಾಗಾಟವಾಗುತ್ತಿದ್ದ ಅಡಿಕೆಗೆ ಬಹುತೇಕ ಕಡಿವಾಣ ಬಿದ್ದಿದೆ ಎಂದು ಮೇಘಾಲಯದ ಸಾಮಾಜಿಕ ಸಂಘಟನೆಗಳು ಹೇಳಿವೆ.  ಕಳೆದ ಕೆಲವು ದಿನಗಳಿಂದ ಕಳ್ಳಸಾಗಾಣಿಕೆಯ ಮೂಲಕ ಬರುತ್ತಿದ್ದ ಅಡಿಕೆಗೆ ಕಡಿವಾಣ ಹಾಕಲಾಗಿದೆ. ಇದೀಗ ಅಡಿಕೆ ಧಾರಣೆಯೂ ಏರಿಕೆ ಕಾಣುತ್ತಿದೆ.

Advertisement

ಬಾಂಗ್ಲಾದೇಶದಿಂದ ವಿವಿಧ ಗಡಿಗಳ ಮೂಲಕ ಅಕ್ರಮವಾಗಿ ಬರ್ಮಾ ಅಡಿಕೆ ಸಾಗಾಟವನ್ನು ತಡೆಯಲು ಮೇಘಾಲಯದ  ವಿವಿಧ ಸಂಘಟನೆಗಳ ಪ್ರಯತ್ನದ ನಂತರ ಮೇಘಾಲಯ, ಅಸ್ಸಾಂ ಪ್ರದೇಶದಲ್ಲೂ ಅಡಿಕೆ ವಹಿವಾಟು ಸುಧಾರಣೆ ಕಂಡಿದೆ.  ಮೂಲಗಳ ಪ್ರಕಾರ ಅಕ್ರಮ ವ್ಯಾಪಾರವನ್ನು ಈಗ ನಿಲ್ಲಿಸಲಾಗಿದೆ, ಇದು ಮಾರುಕಟ್ಟೆಗಳು ಸ್ವಲ್ಪಮಟ್ಟಿಗೆ ಚೇತರಿಸಿಕೊಳ್ಳಲು ಕಾರಣವಾಯಿತು ಎಂದು ಮೇಘಾಲಯದ ವರದಿ ತಿಳಿಸಿದೆ. ಬರ್ಮಾ ಅಡಿಕೆ ಅಕ್ರಮ ಸಾಗಾಟದ ಕಾರಣದಿಂದ ಅಲ್ಲಿನ ಅಡಿಕೆ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದರು. ಇದಕ್ಕಾಗಿ ಅಡಿಕೆ ಸಾಗಾಟ ತಡೆಗೆ ಹೋರಾಟ ನಡೆಯುತ್ತಿತ್ತು. ಕಳೆದ ಒಂದು ವಾರದಿಂದ ಯಾವುದೇ ಅಕ್ರಮ ಅಡಿಕೆ ಸಾಗಾಟದ  ವಾಹನಗಳು ಬರುತ್ತಿಲ್ಲ ಎಂದು ವರದಿ ಮಾಡಿದೆ.

ಅಡಿಕೆ ಅಕ್ರಮ ಸಾಗಾಟ ಹಾಗೂ ಈ ವಹಿವಾಟು ನಿಜಕ್ಕೂ ಕಳವಳಕಾರಿಯಾಗಿದೆ. ಅಂತರರಾಷ್ಟ್ರೀಯ ಕಳ್ಳಸಾಗಣೆ ಜಾಲದ ಹಿಂದೆ ಇರುವವರನ್ನು ಸರ್ಕಾರವು ಪತ್ತೆ ಮಾಡಬೇಕಿತ್ತು ಹಾಗೂ ಸಾರ್ವಜನಿಕವಾಗಿ ಈ ವಿವರ ಬಹಿರಂಗಪಡಿಸಬೇಕಿತ್ತು. ಆದರೆ ಈ ಬಗ್ಗೆ ಇದುವರೆಗೂ ಏಕೆ ಯಾವುದೇ ಕ್ರಮಗಳು ಆಗಿಲ್ಲ ಎಂದು ಸಾಮಾಜಿಕ ಸಂಘಟನೆಗಳು ಪ್ರಶ್ನಿಸಿವೆ.

ಅಡಿಕೆ ಕಳ್ಳಸಾಗಾಣಿಕೆಯ ತನಿಖಾ ವರದಿಯನ್ನು ಸಾರ್ವಜನಿಕಗೊಳಿಸಬೇಕು, ತನಿಖೆ ಏನಾಯಿತು ಎಂದು ಬಹಿರಂಗಗೊಳಿಸಬೇಕು ಹಾಗೂ  ಜನರಲ್ಲಿ ವಿಶ್ವಾಸ ಮೂಡಿಸಬೇಕು, ಎಂದು ಸಾಮಾಜಿಕ ಕಾರ್ಯಕರ್ತರು ಮೇಘಾಲಯದಲ್ಲಿ ಒತ್ತಾಯಿಸಿದ್ದಾರೆ.

Source : Meghalaya Media

As per sources,  Arecanut  smugglers from Meghalaya, Assam and Bangladesh, the illegal trade has now stopped, leading to markets recovering ever so slightly.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಣಿಪುರದಲ್ಲಿ 68 ಟನ್ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಡಿಕೆ ವಶ

ಅಕ್ರಮವಾಗಿ ಸುಮಾರು 68 ಟನ್‌ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಪೊಲೀಸರು…

10 hours ago

ಅಡುಗೆ ಮನೆ ‘ಬೇಯಿಸುವ ಕೋಣೆ’ಯಲ್ಲ!

ಬದುಕಿನ ಒಂದೊಂದು ಅಂಗವೂ ‘ಕಲಾತ್ಮಕ’. ಒದಗುವ ಸುಭಗತನವು ಅನುಭವವೇದ್ಯ. ಅಡುಗೆ ಮನೆಯು ಬರೇ…

11 hours ago

2025ರಲ್ಲಿ ಶನಿ ತಮ್ಮ ನಕ್ಷತ್ರ ಅಥವಾ ರಾಶಿಯಲ್ಲಿ ಅಧೋಗತಿಯ ಚಲನೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜೋತಿಷಿಗಳನ್ನು ಸಂಪರ್ಕಿಸಿ 9535156490

11 hours ago

ತಾಪಮಾನ ಹೆಚ್ಚಳ | ಬನ್ನೇರುಘಟ್ಟ ಉದ್ಯಾನವನದಲ್ಲಿ ಪ್ರಾಣಿಗಳಿಗೆ ತಂಪಾದ ಆಹಾರ ಪದಾರ್ಥ |

ಬೇಸಿಗೆ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೃಗಾಲಯದ ಪ್ರಾಣಿಗಳು ಸುಡುಬಿಸಿಲಿಗೆ ಕಂಗಾಲಾಗಿದ್ದು, ಮಧ್ಯಾಹ್ನದ ವೇಳೆಯಲ್ಲಿ…

21 hours ago

ತೊಗರಿ ಉತ್ಪನ್ನ ಖರೀದಿ ಅವಧಿ ಎ.25 ರವರೆಗೆ ವಿಸ್ತರಣೆ

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಉತ್ಪನ್ನವನ್ನು ಖರೀದಿಸುವ…

21 hours ago

ತಾಂತ್ರಿಕ ಸಮಸ್ಯೆ | ದೇಶಾದ್ಯಂತ ಯುಪಿಐ, ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯ

ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಏಕೀಕೃತ ಪಾವತಿ ಇಂಟರ್ ಫೇಸ್ - ಯುಪಿಐ ಸೇವೆಯ…

21 hours ago