Advertisement
MIRROR FOCUS

ಅಡಿಕೆ ಧಾರಣೆ ಏರಿಕೆಗೆ ಕಾರಣವೇನು..? | ಕಳ್ಳಸಾಗಾಣಿಕೆಯಾಗುತ್ತಿದ್ದ ಅಡಿಕೆಗೆ ಕಡಿವಾಣ ಹೇಗಾಯ್ತು..? |

Share

 ಅಸ್ಸಾಂ, ಮೇಘಾಲಯ ಸೇರಿದಂತೆ ಈಶಾನ್ಯ ರಾಜ್ಯಗಳಿಂದ ಕಳೆದ ಕೆಲವು ಸಮಯಗಳಿಂದ ಕಳ್ಳದಾರಿಯ ಮೂಲಕ ಸಾಗಾಟವಾಗುತ್ತಿದ್ದ ಅಡಿಕೆಗೆ ಬಹುತೇಕ ಕಡಿವಾಣ ಬಿದ್ದಿದೆ ಎಂದು ಮೇಘಾಲಯದ ಸಾಮಾಜಿಕ ಸಂಘಟನೆಗಳು ಹೇಳಿವೆ.  ಕಳೆದ ಕೆಲವು ದಿನಗಳಿಂದ ಕಳ್ಳಸಾಗಾಣಿಕೆಯ ಮೂಲಕ ಬರುತ್ತಿದ್ದ ಅಡಿಕೆಗೆ ಕಡಿವಾಣ ಹಾಕಲಾಗಿದೆ. ಇದೀಗ ಅಡಿಕೆ ಧಾರಣೆಯೂ ಏರಿಕೆ ಕಾಣುತ್ತಿದೆ.

ಬಾಂಗ್ಲಾದೇಶದಿಂದ ವಿವಿಧ ಗಡಿಗಳ ಮೂಲಕ ಅಕ್ರಮವಾಗಿ ಬರ್ಮಾ ಅಡಿಕೆ ಸಾಗಾಟವನ್ನು ತಡೆಯಲು ಮೇಘಾಲಯದ  ವಿವಿಧ ಸಂಘಟನೆಗಳ ಪ್ರಯತ್ನದ ನಂತರ ಮೇಘಾಲಯ, ಅಸ್ಸಾಂ ಪ್ರದೇಶದಲ್ಲೂ ಅಡಿಕೆ ವಹಿವಾಟು ಸುಧಾರಣೆ ಕಂಡಿದೆ.  ಮೂಲಗಳ ಪ್ರಕಾರ ಅಕ್ರಮ ವ್ಯಾಪಾರವನ್ನು ಈಗ ನಿಲ್ಲಿಸಲಾಗಿದೆ, ಇದು ಮಾರುಕಟ್ಟೆಗಳು ಸ್ವಲ್ಪಮಟ್ಟಿಗೆ ಚೇತರಿಸಿಕೊಳ್ಳಲು ಕಾರಣವಾಯಿತು ಎಂದು ಮೇಘಾಲಯದ ವರದಿ ತಿಳಿಸಿದೆ. ಬರ್ಮಾ ಅಡಿಕೆ ಅಕ್ರಮ ಸಾಗಾಟದ ಕಾರಣದಿಂದ ಅಲ್ಲಿನ ಅಡಿಕೆ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದರು. ಇದಕ್ಕಾಗಿ ಅಡಿಕೆ ಸಾಗಾಟ ತಡೆಗೆ ಹೋರಾಟ ನಡೆಯುತ್ತಿತ್ತು. ಕಳೆದ ಒಂದು ವಾರದಿಂದ ಯಾವುದೇ ಅಕ್ರಮ ಅಡಿಕೆ ಸಾಗಾಟದ  ವಾಹನಗಳು ಬರುತ್ತಿಲ್ಲ ಎಂದು ವರದಿ ಮಾಡಿದೆ.

ಅಡಿಕೆ ಅಕ್ರಮ ಸಾಗಾಟ ಹಾಗೂ ಈ ವಹಿವಾಟು ನಿಜಕ್ಕೂ ಕಳವಳಕಾರಿಯಾಗಿದೆ. ಅಂತರರಾಷ್ಟ್ರೀಯ ಕಳ್ಳಸಾಗಣೆ ಜಾಲದ ಹಿಂದೆ ಇರುವವರನ್ನು ಸರ್ಕಾರವು ಪತ್ತೆ ಮಾಡಬೇಕಿತ್ತು ಹಾಗೂ ಸಾರ್ವಜನಿಕವಾಗಿ ಈ ವಿವರ ಬಹಿರಂಗಪಡಿಸಬೇಕಿತ್ತು. ಆದರೆ ಈ ಬಗ್ಗೆ ಇದುವರೆಗೂ ಏಕೆ ಯಾವುದೇ ಕ್ರಮಗಳು ಆಗಿಲ್ಲ ಎಂದು ಸಾಮಾಜಿಕ ಸಂಘಟನೆಗಳು ಪ್ರಶ್ನಿಸಿವೆ.

ಅಡಿಕೆ ಕಳ್ಳಸಾಗಾಣಿಕೆಯ ತನಿಖಾ ವರದಿಯನ್ನು ಸಾರ್ವಜನಿಕಗೊಳಿಸಬೇಕು, ತನಿಖೆ ಏನಾಯಿತು ಎಂದು ಬಹಿರಂಗಗೊಳಿಸಬೇಕು ಹಾಗೂ  ಜನರಲ್ಲಿ ವಿಶ್ವಾಸ ಮೂಡಿಸಬೇಕು, ಎಂದು ಸಾಮಾಜಿಕ ಕಾರ್ಯಕರ್ತರು ಮೇಘಾಲಯದಲ್ಲಿ ಒತ್ತಾಯಿಸಿದ್ದಾರೆ.

Source : Meghalaya Media

As per sources,  Arecanut  smugglers from Meghalaya, Assam and Bangladesh, the illegal trade has now stopped, leading to markets recovering ever so slightly.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

2 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

2 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

3 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

4 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

4 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

4 days ago