Advertisement
MIRROR FOCUS

ಅಡಿಕೆ ಧಾರಣೆ ಏರಿಕೆಗೆ ಕಾರಣವೇನು..? | ಕಳ್ಳಸಾಗಾಣಿಕೆಯಾಗುತ್ತಿದ್ದ ಅಡಿಕೆಗೆ ಕಡಿವಾಣ ಹೇಗಾಯ್ತು..? |

Share

 ಅಸ್ಸಾಂ, ಮೇಘಾಲಯ ಸೇರಿದಂತೆ ಈಶಾನ್ಯ ರಾಜ್ಯಗಳಿಂದ ಕಳೆದ ಕೆಲವು ಸಮಯಗಳಿಂದ ಕಳ್ಳದಾರಿಯ ಮೂಲಕ ಸಾಗಾಟವಾಗುತ್ತಿದ್ದ ಅಡಿಕೆಗೆ ಬಹುತೇಕ ಕಡಿವಾಣ ಬಿದ್ದಿದೆ ಎಂದು ಮೇಘಾಲಯದ ಸಾಮಾಜಿಕ ಸಂಘಟನೆಗಳು ಹೇಳಿವೆ.  ಕಳೆದ ಕೆಲವು ದಿನಗಳಿಂದ ಕಳ್ಳಸಾಗಾಣಿಕೆಯ ಮೂಲಕ ಬರುತ್ತಿದ್ದ ಅಡಿಕೆಗೆ ಕಡಿವಾಣ ಹಾಕಲಾಗಿದೆ. ಇದೀಗ ಅಡಿಕೆ ಧಾರಣೆಯೂ ಏರಿಕೆ ಕಾಣುತ್ತಿದೆ.

ಬಾಂಗ್ಲಾದೇಶದಿಂದ ವಿವಿಧ ಗಡಿಗಳ ಮೂಲಕ ಅಕ್ರಮವಾಗಿ ಬರ್ಮಾ ಅಡಿಕೆ ಸಾಗಾಟವನ್ನು ತಡೆಯಲು ಮೇಘಾಲಯದ  ವಿವಿಧ ಸಂಘಟನೆಗಳ ಪ್ರಯತ್ನದ ನಂತರ ಮೇಘಾಲಯ, ಅಸ್ಸಾಂ ಪ್ರದೇಶದಲ್ಲೂ ಅಡಿಕೆ ವಹಿವಾಟು ಸುಧಾರಣೆ ಕಂಡಿದೆ.  ಮೂಲಗಳ ಪ್ರಕಾರ ಅಕ್ರಮ ವ್ಯಾಪಾರವನ್ನು ಈಗ ನಿಲ್ಲಿಸಲಾಗಿದೆ, ಇದು ಮಾರುಕಟ್ಟೆಗಳು ಸ್ವಲ್ಪಮಟ್ಟಿಗೆ ಚೇತರಿಸಿಕೊಳ್ಳಲು ಕಾರಣವಾಯಿತು ಎಂದು ಮೇಘಾಲಯದ ವರದಿ ತಿಳಿಸಿದೆ. ಬರ್ಮಾ ಅಡಿಕೆ ಅಕ್ರಮ ಸಾಗಾಟದ ಕಾರಣದಿಂದ ಅಲ್ಲಿನ ಅಡಿಕೆ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದರು. ಇದಕ್ಕಾಗಿ ಅಡಿಕೆ ಸಾಗಾಟ ತಡೆಗೆ ಹೋರಾಟ ನಡೆಯುತ್ತಿತ್ತು. ಕಳೆದ ಒಂದು ವಾರದಿಂದ ಯಾವುದೇ ಅಕ್ರಮ ಅಡಿಕೆ ಸಾಗಾಟದ  ವಾಹನಗಳು ಬರುತ್ತಿಲ್ಲ ಎಂದು ವರದಿ ಮಾಡಿದೆ.

ಅಡಿಕೆ ಅಕ್ರಮ ಸಾಗಾಟ ಹಾಗೂ ಈ ವಹಿವಾಟು ನಿಜಕ್ಕೂ ಕಳವಳಕಾರಿಯಾಗಿದೆ. ಅಂತರರಾಷ್ಟ್ರೀಯ ಕಳ್ಳಸಾಗಣೆ ಜಾಲದ ಹಿಂದೆ ಇರುವವರನ್ನು ಸರ್ಕಾರವು ಪತ್ತೆ ಮಾಡಬೇಕಿತ್ತು ಹಾಗೂ ಸಾರ್ವಜನಿಕವಾಗಿ ಈ ವಿವರ ಬಹಿರಂಗಪಡಿಸಬೇಕಿತ್ತು. ಆದರೆ ಈ ಬಗ್ಗೆ ಇದುವರೆಗೂ ಏಕೆ ಯಾವುದೇ ಕ್ರಮಗಳು ಆಗಿಲ್ಲ ಎಂದು ಸಾಮಾಜಿಕ ಸಂಘಟನೆಗಳು ಪ್ರಶ್ನಿಸಿವೆ.

ಅಡಿಕೆ ಕಳ್ಳಸಾಗಾಣಿಕೆಯ ತನಿಖಾ ವರದಿಯನ್ನು ಸಾರ್ವಜನಿಕಗೊಳಿಸಬೇಕು, ತನಿಖೆ ಏನಾಯಿತು ಎಂದು ಬಹಿರಂಗಗೊಳಿಸಬೇಕು ಹಾಗೂ  ಜನರಲ್ಲಿ ವಿಶ್ವಾಸ ಮೂಡಿಸಬೇಕು, ಎಂದು ಸಾಮಾಜಿಕ ಕಾರ್ಯಕರ್ತರು ಮೇಘಾಲಯದಲ್ಲಿ ಒತ್ತಾಯಿಸಿದ್ದಾರೆ.

Source : Meghalaya Media

As per sources,  Arecanut  smugglers from Meghalaya, Assam and Bangladesh, the illegal trade has now stopped, leading to markets recovering ever so slightly.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

2 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

3 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

4 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago