Advertisement
ಸುದ್ದಿಗಳು

ಹವಾಮಾನ ವರದಿ | 03-12-2024 | ಕರಾವಳಿ ಜಿಲ್ಲೆಗಳಲ್ಲಿ ಡಿ. 8 ರ ತನಕ ಅಲ್ಲಲ್ಲಿ ಮಳೆ | ಇನ್ನೊಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣ |

Share

04.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಈಗಿನ ಮಳೆಯ ವಾತಾವರಣವು ಮಧ್ಯಾಹ್ನ ನಂತರ ಕಡಮೆಯಾಗುವ ಮುನ್ಸೂಚನೆ ಇದೆ. ಈಗಿನಂತೆ ಡಿಸೆಂಬರ್ 4ರಿಂದ 2 ದಿವಸಗಳ ಕಾಲ ಉತ್ತರ ಕನ್ನಡ ಜಿಲ್ಲೆಯ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಡಿಸೆಂಬರ್ 8ರ ತನಕ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮಲೆನಾಡು : ಕೊಡಗು ಜಿಲ್ಲೆಯಲ್ಲಿ ಮಳೆ ಕಡಿಮೆಯಾಗಿ ಮೋಡದ ವಾತಾವರಣ ಮುಂದುವರಿಯಲಿದ್ದು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಈಗಿನಂತೆ ಡಿಸೆಂಬರ್ 6ರಿಂದ ಮತ್ತೆ ಮಳೆಯ ಮುನ್ಸೂಚೆನೆ ಇದೆ.

ಒಳನಾಡು : ಉತ್ತರ ಒಳನಾಡಿನ ಹಾವೇರಿ – ದಾವಣಗೆರೆ ಗಡಿ ಭಾಗಗಳ ಸುತ್ತಮುತ್ತ ಮಳೆಯ ಮುನ್ಸೂಚನೆ ಇದೆ. ಉಳಿದ ಹಾವೇರಿ, ಧಾರವಾಡ, ಬೆಳಗಾವಿ, ಉಳಿದ ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ
ದಕ್ಷಿಣ ಒಳನಾಡಿನ ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ ಜಿಲ್ಲೆಗಳ ಅಲ್ಲಲ್ಲಿ ಸಂಜೆ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಫೆಂಗಲ್ ಚಂಡಮಾರುತವು ಈಗಾಗಲೇ ದುರ್ಬಲಗೊಂಡು ಅರಬ್ಬಿ ಸಮುದ್ರ ಪ್ರವೇಶಿಸಿದೆ ಮತ್ತು ಮುಂದೆ ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದಂತೆಯೇ ರಾಜ್ಯದಲ್ಲಿ ಅದರ ಪ್ರಭಾವ ಕಡಿಮೆಯಾಗಲಿದೆ. ಆದರೆ ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಗಾಳಿ ಪರಿಣಾಮದಿಂದ ಹಿಂಗಾರು ರೀತಿಯ ಗುಡುಗು ಮಳೆ ಅಲ್ಲಲ್ಲಿ ಮುಂದುವರಿಯುವ ಲಕ್ಷಣಗಳಿವೆ. ಈಗಿನ ವಿದ್ಯಮಾನಗಳ ಹಿನ್ನೆಲೆಯಲ್ಲಿ ಡಿಸೆಂಬರ್ 7 ರ ವೇಳೆಗೆ ಬಂಗಾಳಕೊಲ್ಲಿಯ ನಿಕೋಬಾರ್ ದ್ವೀಪ ಪ್ರದೇಶದಲ್ಲಿ ಇನ್ನೊಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

16 hours ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

18 hours ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

19 hours ago

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.

19 hours ago

ಜಾಗತಿಕ ತಾಪಮಾನಕ್ಕೆ ಪರಿಹಾರ : ವೃಕ್ಷ ಸಂವರ್ಧನೆಗೆ ಒತ್ತು

ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…

20 hours ago

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್

ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…

1 day ago