Advertisement
ಸುದ್ದಿಗಳು

#Karnataka | ಅಧಿವೇಶನದಲ್ಲಿ ಪ್ರತಿಧ್ವನಿಸಿದ ದೈವಾರಾಧನೆ ವಿಚಾರ | ದೈವಾರಾಧನೆ ಪ್ರದರ್ಶನದ ವಸ್ತು ಅಲ್ಲ- ಗುಡುಗಿದ ಸುನೀಲ್‌ ಕುಮಾರ್‌ |

Share

ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ದೈವಾರಾಧನೆ, ಕೋಲ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿದ್ದ ಕುರಿತು ಇಂದು ವಿಧಾನಸಭೆಯ ಅಧಿವೇಶನದಲ್ಲೂ ದೈವಾರಾಧನೆ ವಿಚಾರ ಸದ್ದು ಮಾಡಿದೆ.  ಶಿಕ್ಷಣ ಇಲಾಖೆ ವಿರುದ್ಧ ಶಾಸಕ ಸುನೀಲ್‌ ಕುಮಾರ್‌  ಈ ಸಂಬಂಧ ಗರಂ ಆದರು.

ಅಧಿವೇಶನದ ಶೂನ್ಯ ವೇಳೆಯಲ್ಲಿ ದೈವಾರಾಧನೆ ಬಗ್ಗೆ ಪ್ರಸ್ತಾಪಿಸಿದ ಸುನೀಲ್‌ ಕುಮಾರ್‌, ದಕ್ಷಿಣ ಕನ್ನಡ ಸೇರಿದಂತೆ ಮೂರ್ನಾಲ್ಕು ಜಿಲ್ಲೆಗಳಲ್ಲಿ ದೈವಾರಾಧನೆ ಪದ್ಧತಿ ಇದೆ. ಶಿಕ್ಷಣ ಇಲಾಖೆಯು ಪ್ರತಿಭಾ ಕಾರಂಜಿಯಲ್ಲಿ ದೈವಾರಾಧನೆ, ಕೋಲ ಪ್ರದರ್ಶನ ಮಾಡುವುದಕ್ಕೆ ಅವಕಾಶ ಮಾಡಿಕೊಟ್ಟಿದೆ. ಜನಪದ ನೃತ್ಯಗಳ ಜೊತೆಗೆ ದೈವಾರಾಧನೆ ಕೂಡ ಸೇರಿಸಲಾಗಿದೆ. ದೈವಾರಾಧನೆ ಪ್ರದರ್ಶನದ ವಸ್ತು ಅಲ್ಲ ಎಂದು ಗುಡುಗಿದರು.

ಶಿಕ್ಷಣ ಇಲಾಖೆ ಕೂಡಲೇ ಈ ಆದೇಶದಲ್ಲಿ ದೈವಾರಾಧನೆ, ಕೋಲ ಕೈಬಿಡಬೇಕು ಎಂದು ಒತ್ತಾಯ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಆದೇಶದಲ್ಲಿ ಬದಲಾವಣೆ ಮಾಡುವುದಾಗಿ ಭರವಸೆ ನೀಡಿದರು.

ದೈವಾರಾಧನೆಯು ತುಳುನಾಡಿನ ಆರಾಧನೆಯಲ್ಲಿ ಪ್ರಮುಖವಾದದ್ದು. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ದೈವಾರಾಧನೆ ಸಂಪ್ರದಾಯ ಆಚರಣೆಯಲ್ಲಿದೆ. ರಿಷಬ್‌ ಶೆಟ್ಟಿಯ ‘ಕಾಂತಾರ’ ಸಿನಿಮಾ ಬಂದ ನಂತರ ದೈವಾರಾಧನೆ ಸಂಸ್ಕೃತಿ ದೇಶ-ವಿದೇಶಗಳಲ್ಲಿ ಹೆಚ್ಚು ಚಿರಪರಿಚಿತವಾಯಿತು.

ಸಿನಿಮಾದಿಂದ ಪ್ರೇರೇಪಿತರಾದ ಅನೇಕರು ದೈವಾರಾಧನೆಯನ್ನು ಅನುಕರಿಸಲು ಶುರು ಮಾಡಿದ್ದರು. ಕೆಲವರು ಇದನ್ನೇ ಧಂದೆ ಮಾಡಿಕೊಂಡಿದ್ದರು. ದೈವಾರಾಧನೆ ಮಹತ್ವದ ಬಗ್ಗೆ ತಿಳಿಸಿದ ಬಳಿಕ ಅನುಕರಣೆ, ಧಂದೆ ನಿಯಂತ್ರಣಕ್ಕೆ ಬಂತು. ಆದರೂ ಒಂದಲ್ಲಾ ಒಂದು ವಿಚಾರವಾಗಿ ದೈವಾರಾಧನೆ ಸುದ್ದಿಯಾಗುತ್ತಲೇ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

6 minutes ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

8 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

9 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

9 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

16 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

21 hours ago