Advertisement
ಸುದ್ದಿಗಳು

#Karnataka | ಅಧಿವೇಶನದಲ್ಲಿ ಪ್ರತಿಧ್ವನಿಸಿದ ದೈವಾರಾಧನೆ ವಿಚಾರ | ದೈವಾರಾಧನೆ ಪ್ರದರ್ಶನದ ವಸ್ತು ಅಲ್ಲ- ಗುಡುಗಿದ ಸುನೀಲ್‌ ಕುಮಾರ್‌ |

Share

ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ದೈವಾರಾಧನೆ, ಕೋಲ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿದ್ದ ಕುರಿತು ಇಂದು ವಿಧಾನಸಭೆಯ ಅಧಿವೇಶನದಲ್ಲೂ ದೈವಾರಾಧನೆ ವಿಚಾರ ಸದ್ದು ಮಾಡಿದೆ.  ಶಿಕ್ಷಣ ಇಲಾಖೆ ವಿರುದ್ಧ ಶಾಸಕ ಸುನೀಲ್‌ ಕುಮಾರ್‌  ಈ ಸಂಬಂಧ ಗರಂ ಆದರು.

ಅಧಿವೇಶನದ ಶೂನ್ಯ ವೇಳೆಯಲ್ಲಿ ದೈವಾರಾಧನೆ ಬಗ್ಗೆ ಪ್ರಸ್ತಾಪಿಸಿದ ಸುನೀಲ್‌ ಕುಮಾರ್‌, ದಕ್ಷಿಣ ಕನ್ನಡ ಸೇರಿದಂತೆ ಮೂರ್ನಾಲ್ಕು ಜಿಲ್ಲೆಗಳಲ್ಲಿ ದೈವಾರಾಧನೆ ಪದ್ಧತಿ ಇದೆ. ಶಿಕ್ಷಣ ಇಲಾಖೆಯು ಪ್ರತಿಭಾ ಕಾರಂಜಿಯಲ್ಲಿ ದೈವಾರಾಧನೆ, ಕೋಲ ಪ್ರದರ್ಶನ ಮಾಡುವುದಕ್ಕೆ ಅವಕಾಶ ಮಾಡಿಕೊಟ್ಟಿದೆ. ಜನಪದ ನೃತ್ಯಗಳ ಜೊತೆಗೆ ದೈವಾರಾಧನೆ ಕೂಡ ಸೇರಿಸಲಾಗಿದೆ. ದೈವಾರಾಧನೆ ಪ್ರದರ್ಶನದ ವಸ್ತು ಅಲ್ಲ ಎಂದು ಗುಡುಗಿದರು.

ಶಿಕ್ಷಣ ಇಲಾಖೆ ಕೂಡಲೇ ಈ ಆದೇಶದಲ್ಲಿ ದೈವಾರಾಧನೆ, ಕೋಲ ಕೈಬಿಡಬೇಕು ಎಂದು ಒತ್ತಾಯ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಆದೇಶದಲ್ಲಿ ಬದಲಾವಣೆ ಮಾಡುವುದಾಗಿ ಭರವಸೆ ನೀಡಿದರು.

ದೈವಾರಾಧನೆಯು ತುಳುನಾಡಿನ ಆರಾಧನೆಯಲ್ಲಿ ಪ್ರಮುಖವಾದದ್ದು. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ದೈವಾರಾಧನೆ ಸಂಪ್ರದಾಯ ಆಚರಣೆಯಲ್ಲಿದೆ. ರಿಷಬ್‌ ಶೆಟ್ಟಿಯ ‘ಕಾಂತಾರ’ ಸಿನಿಮಾ ಬಂದ ನಂತರ ದೈವಾರಾಧನೆ ಸಂಸ್ಕೃತಿ ದೇಶ-ವಿದೇಶಗಳಲ್ಲಿ ಹೆಚ್ಚು ಚಿರಪರಿಚಿತವಾಯಿತು.

ಸಿನಿಮಾದಿಂದ ಪ್ರೇರೇಪಿತರಾದ ಅನೇಕರು ದೈವಾರಾಧನೆಯನ್ನು ಅನುಕರಿಸಲು ಶುರು ಮಾಡಿದ್ದರು. ಕೆಲವರು ಇದನ್ನೇ ಧಂದೆ ಮಾಡಿಕೊಂಡಿದ್ದರು. ದೈವಾರಾಧನೆ ಮಹತ್ವದ ಬಗ್ಗೆ ತಿಳಿಸಿದ ಬಳಿಕ ಅನುಕರಣೆ, ಧಂದೆ ನಿಯಂತ್ರಣಕ್ಕೆ ಬಂತು. ಆದರೂ ಒಂದಲ್ಲಾ ಒಂದು ವಿಚಾರವಾಗಿ ದೈವಾರಾಧನೆ ಸುದ್ದಿಯಾಗುತ್ತಲೇ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

8 hours ago

ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ

ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…

9 hours ago

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

14 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

20 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

20 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

1 day ago