Advertisement
ಸುದ್ದಿಗಳು

#Karnataka | ಅಧಿವೇಶನದಲ್ಲಿ ಪ್ರತಿಧ್ವನಿಸಿದ ದೈವಾರಾಧನೆ ವಿಚಾರ | ದೈವಾರಾಧನೆ ಪ್ರದರ್ಶನದ ವಸ್ತು ಅಲ್ಲ- ಗುಡುಗಿದ ಸುನೀಲ್‌ ಕುಮಾರ್‌ |

Share

ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ದೈವಾರಾಧನೆ, ಕೋಲ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿದ್ದ ಕುರಿತು ಇಂದು ವಿಧಾನಸಭೆಯ ಅಧಿವೇಶನದಲ್ಲೂ ದೈವಾರಾಧನೆ ವಿಚಾರ ಸದ್ದು ಮಾಡಿದೆ.  ಶಿಕ್ಷಣ ಇಲಾಖೆ ವಿರುದ್ಧ ಶಾಸಕ ಸುನೀಲ್‌ ಕುಮಾರ್‌  ಈ ಸಂಬಂಧ ಗರಂ ಆದರು.

ಅಧಿವೇಶನದ ಶೂನ್ಯ ವೇಳೆಯಲ್ಲಿ ದೈವಾರಾಧನೆ ಬಗ್ಗೆ ಪ್ರಸ್ತಾಪಿಸಿದ ಸುನೀಲ್‌ ಕುಮಾರ್‌, ದಕ್ಷಿಣ ಕನ್ನಡ ಸೇರಿದಂತೆ ಮೂರ್ನಾಲ್ಕು ಜಿಲ್ಲೆಗಳಲ್ಲಿ ದೈವಾರಾಧನೆ ಪದ್ಧತಿ ಇದೆ. ಶಿಕ್ಷಣ ಇಲಾಖೆಯು ಪ್ರತಿಭಾ ಕಾರಂಜಿಯಲ್ಲಿ ದೈವಾರಾಧನೆ, ಕೋಲ ಪ್ರದರ್ಶನ ಮಾಡುವುದಕ್ಕೆ ಅವಕಾಶ ಮಾಡಿಕೊಟ್ಟಿದೆ. ಜನಪದ ನೃತ್ಯಗಳ ಜೊತೆಗೆ ದೈವಾರಾಧನೆ ಕೂಡ ಸೇರಿಸಲಾಗಿದೆ. ದೈವಾರಾಧನೆ ಪ್ರದರ್ಶನದ ವಸ್ತು ಅಲ್ಲ ಎಂದು ಗುಡುಗಿದರು.

ಶಿಕ್ಷಣ ಇಲಾಖೆ ಕೂಡಲೇ ಈ ಆದೇಶದಲ್ಲಿ ದೈವಾರಾಧನೆ, ಕೋಲ ಕೈಬಿಡಬೇಕು ಎಂದು ಒತ್ತಾಯ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಆದೇಶದಲ್ಲಿ ಬದಲಾವಣೆ ಮಾಡುವುದಾಗಿ ಭರವಸೆ ನೀಡಿದರು.

ದೈವಾರಾಧನೆಯು ತುಳುನಾಡಿನ ಆರಾಧನೆಯಲ್ಲಿ ಪ್ರಮುಖವಾದದ್ದು. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ದೈವಾರಾಧನೆ ಸಂಪ್ರದಾಯ ಆಚರಣೆಯಲ್ಲಿದೆ. ರಿಷಬ್‌ ಶೆಟ್ಟಿಯ ‘ಕಾಂತಾರ’ ಸಿನಿಮಾ ಬಂದ ನಂತರ ದೈವಾರಾಧನೆ ಸಂಸ್ಕೃತಿ ದೇಶ-ವಿದೇಶಗಳಲ್ಲಿ ಹೆಚ್ಚು ಚಿರಪರಿಚಿತವಾಯಿತು.

ಸಿನಿಮಾದಿಂದ ಪ್ರೇರೇಪಿತರಾದ ಅನೇಕರು ದೈವಾರಾಧನೆಯನ್ನು ಅನುಕರಿಸಲು ಶುರು ಮಾಡಿದ್ದರು. ಕೆಲವರು ಇದನ್ನೇ ಧಂದೆ ಮಾಡಿಕೊಂಡಿದ್ದರು. ದೈವಾರಾಧನೆ ಮಹತ್ವದ ಬಗ್ಗೆ ತಿಳಿಸಿದ ಬಳಿಕ ಅನುಕರಣೆ, ಧಂದೆ ನಿಯಂತ್ರಣಕ್ಕೆ ಬಂತು. ಆದರೂ ಒಂದಲ್ಲಾ ಒಂದು ವಿಚಾರವಾಗಿ ದೈವಾರಾಧನೆ ಸುದ್ದಿಯಾಗುತ್ತಲೇ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

11 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

17 hours ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

18 hours ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

18 hours ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

18 hours ago

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…

18 hours ago