Advertisement
ಕಿಟಕಿ

ಅಳತೆ ಬಲ್ಲವ ಅಡುಗೆಯ ನಳಮಹಾರಾಜ…..

Share

ಅಡುಗೆ ಮನೆಯಲ್ಲಿ ಕೈಗೆ ಸಿಗುವಂತಿರುವ ಸಾಮಾನುಗಳು ಹಲವಿವೆ. ಬೆಂಕಿ ಪೆಟ್ಟಿಗೆಯ ಸ್ಥಾನಕ್ಕೆ ಲೈಟರ್ ಬಂದಿದೆ, ಸ್ವಿಚ್ ಹಾಕಿದರೆ ಹೊತ್ತಿಕೊಳ್ಳುವ ಸ್ಟೌವು ಕೂಡ ಇವೆ. ಆದರೆ ಜೋಪಾನವಾಗಿ ತೆಗೆದಿಟ್ಟಿರುವ ಬೆಂಕಿ ಪೊಟ್ಟಣ ಅಗತ್ಯವಾಗಿ ಬೇಕಾಗುತ್ತದೆ. ಕರೆಂಟ್ ಇಲ್ಲವಾದರೆ ಸ್ವಿಚ್ ಹಾಕಿದರೂ ಸ್ಟೌವು ಕೆಲಸ ಮಾಡದು, ಲೈಟರ್ ಕೂಡ ಕೆಲವೊಮ್ಮೆ ಬ್ಯಾಟರಿ ಮುಗಿದು ಕೈ ಕೊಡುತ್ತದೆ. ಅದೇ ಸಮಯಕ್ಕೆ ಬೆಂಕಿ ಪೊಟ್ಟಣ ತಂಡಾಸು ಬಂದು ಉರಿಯದೇ ಇದ್ದರೆ ದೇವರೇ ಗತಿ. ಎಷ್ಟೇ ತಂತ್ರಜ್ಞಾನ ಮುಂದುವರಿದರೂ, ನಮ್ಮ ಪ್ರಾಥಮಿಕ ಅವಶ್ಯಕತೆಗಳು ಹಾಗೆಯೇ ಇರುತ್ತವೆ. ಸ್ವಲ್ಪ ಬದಲಾವಣೆಗಳು ಕಾಲಕ್ಕೆ ತಕ್ಕಂತೆ ಆಗಿರ ಬಹುದು. ಅಷ್ಟೇ ವ್ಯತ್ಯಾಸ.

ನಾವು ಅಡುಗೆ ಮಾಡುವ ಸಮಯದಲ್ಲಿ ಹಲವು ರೀತಿಯ ಅಳತೆಗಳನ್ನು ಬಳಸುತ್ತೇವೆ. ಪ್ರಾಥಮಿಕವಾಗಿ ನೀರಿನ ಅಳತೆಗೆ ಚಮಚ, ಸೌಟು,ಗ್ಲಾಸು, ಪಾಟೆ, ಚೆಂಬು ಇತ್ಯಾದಿ. ಹಾಲು, ಎಣ್ಣೆ ,ತುಪ್ಪ ಮೊದಲಾದವುಗಳನ್ನು ಕುಡ್ತೆ , ಲೀಟರ್ ಲೆಕ್ಕದಲ್ಲಿ ಹೇಳುತ್ತೇವೆ. ಅಕ್ಕಿ ,ಸಕ್ಕರೆ ಬೇಳೆ ಕಾಳುಗಳನ್ನು ಗ್ರಾಮ್, ಪಾವು, ಸೇರು ,ಕೇಜಿಗಳಲ್ಲಿ ಅಂದಾಜು ಮಾಡುತ್ತೇವೆ.

ಅಡುಗೆಯ ಮಾಪಕಗಳು ಒಂದೊಂದು ಮನೆಗೆ ಒಂದೊಂದು ರೀತಿ ಇರುತ್ತವೆ. ಕುಡ್ತೆ, ಪಾವು ,ಸೇರುಗಳು ಎಲ್ಲಿಹೋದರೂ ಒಂದೇ ರೀತಿ. ಆದರೆ ಈ ಗ್ಲಾಸು, ಚಿಟಿಕೆ, ಚಮಚ ಎಂದಾಗ ಎದುರಾಗುವ ಸಮಸ್ಯೆಗಳು ಒಂದೆರಡಲ್ಲ. ಎಷ್ಟು ದೊಡ್ಡ ಗ್ಲಾಸು? ಎಷ್ಟು ದೊಡ್ಡ ಚಮಚ …….. ಅಳತೆಯ ಚಮಚಗಳಲ್ಲಿ ಎಷ್ಟೊಂದು ವಿಧಗಳಿವೆ. ನಮ್ಮಲ್ಲಿ ಚಮಚ ಅಂದರೆ ಚಮಚ. ಅದರಲ್ಲಿ ಸ್ವಲ್ಪ ದೊಡ್ಡದು, ಉದ್ದ ಹಿಡಿಯದ್ದು …ಅಷ್ಟೇ ಆದರೆ ಹಾಗಿಲ್ಲ, ಅದರಲ್ಲಿ ಹಲವು ಇವೆ. ನೋಡಿದರೆ ದಂಗಾಗುವಿರಿ. ( ಯೂ ಟ್ಯೂಬ್ ಗಳಲ್ಲಿ ಬರುವ ಅಡುಗೆ ಚಾನಲ್ ಗಳನ್ನು ನೋಡಿದರೆ ಅಳತೆಗಿರುವ ಅಗಾಧ ಸಾಮಗ್ರಿಗಳು ದಂಗು ಬಡಿಸುವುದು ಖಂಡಿತ. ) ನಮ್ಮ ಸಾಂಪ್ರದಾಯಿಕ ಅಡುಗೆಗಳಿಗೆ ಅಷ್ಟೆಲ್ಲಾ ಅಗತ್ಯವಿಲ್ಲವೆಂದು ನನ್ನ ಅನಿಸಿಕೆ.( ಉಪ್ಪಿನಕಾಯಿ, ಮೈಸೂರ್ ಪಾಕ್ ಗಳಂತಹವುಗಳ ಹೊರತಾಗಿ).

1/4 ಟೀ ಚಮಚ, 1/2 ಟೀ ಚಮಚ, 1ಟೀ ಚಮಚ ಮತ್ತು1 ಚಮಚ ಅಳತೆಯ ಚಮಚಗಳು .(ಮಸಾಲೆಗಳು, ಉಪ್ಪು, ಸಕ್ಕರೆ, ಸೋಡ, ಬೇಕಿಂಗ್ ಪೌಡರ್, ಸಾಸ್,ಕೆಚಪ್ ಮೊದಲಾದವುಗಳನ್ನು ಬಳಸುವಾಗ ಉಪಯೋಗಕ್ಕೆ ಬರುತ್ತದೆ).

ಅಡುಗೆ ಮಾಡಲು ಅನುಕೂಲವಾಗಿರುವ ವಿವಿಧ ನಮೂನೆಯ ಚಮಚಗಳು ಮಾರುಕಟ್ಟೆಯಲ್ಲಿ ದೊರೆಯುತ್ತವೆ. ಅದರ ಬಗ್ಗೆ ವಿಚಾರಿಸಿದರೆ ಗಂಟೆಗಟ್ಟಲೆ ಮಾತನಾಡುವವರಿದ್ದಾರೆ. ಒಂದು ಚಮಚಕ್ಕೆ ಇಷ್ಟೊಂದು ವಿವರಣೆಯ ಅಗತ್ಯವಿದೆಯಾ ಎಂದು ತಲೆಗೆಡಿಸಿ ಕೊಳ್ಳುವ ಸರದಿ ಖಂಡಿತವಾಗಿಯೂ ನಿಮ್ಮದೇ!.

ಸಾರು ,ಸಾಂಬಾರು , ಪಲ್ಯ ಮಾಡುವಾಗ ಉಪ್ಪು , ಹುಳಿ ಖಾರ ನಿಶ್ಚಿತ ಪ್ರಮಾಣದಲ್ಲಿ ಬಳಸಲು ಅರಿತಿರ ಬೇಕು. ಕೆಲವೊಂದು ಪದಾರ್ಥಗಳು ಹುಳಿ ಖಾರ ಜಾಸ್ತಿ ಇದ್ದರೆ ರುಚಿ . ಇನ್ನು ಕೆಲವು ಸಿಹಿ, ಖಾರ ಇದ್ದರೆ ವಾವ್ ಅನ್ನಿಸುತ್ತದೆ,(ಮಾವಿನಕಾಯಿ ಮೆಣಸ್ಕಾಯಿ ಹುಳಿ , ಸಿಹಿ, ಖಾರ ಸಮ ಪ್ರಮಾಣದಲ್ಲಿ ಇದ್ದರಷ್ಟೇ ರುಚಿಯಾಗುವುದು). ಬದನೆ ಪಲ್ಯ ಸುಲಭ ಮಾಡಲಿಕ್ಕೆ. ಆದರೆ ಹುಳಿ , ಉಪ್ಪು, ಖಾರ ಕಮ್ಮಿಯಾದರೆ ಬಾಯಿಗಿಡಲಿಕ್ಕೆ ಸಾಧ್ಯವಿಲ್ಲ. ಉಪ್ಪು ಖಾರಕ್ಕಾದರೂ ಚೂರು ರಿಯಾಯಿತಿ ಸಿಗ ಬಹುದು ಆದರೆ ಹುಳಿ ಹಾಕಲು ಮರೆತರೆ!.(ಊಟವೇ ಹಾಳು)

ಇನ್ನು ಮೈಸೂರ್ ಪಾಕ್ ಮಾಡಲು ಹೊರಟರೆ ನೀವು ಖಂಡಿತ ಲೆಕ್ಕದ ಮಾಸ್ಟರ್ ಆಗಲೇ ಬೇಕು . 1 ಅಳತೆಯ ಕಡ್ಲೆಹುಡಿಗೆ 2 ಅಳತೆಯ ಸಕ್ಕರೆ ಅದಕ್ಕೆ ಸರಿಯಾಗಿ ತುಪ್ಪ ಇರಲೇ ಬೇಕು. ಸಕ್ಕರೆ ಪಾಕಕ್ಕೆ ಪ್ರಮಾಣಬದ್ಧ ನೀರು ಹಾಕ ಬೇಕು. ಸಕ್ಕರೆಯ ಪಾಕ ಸರಿಯಾಗಿ ಬರಬೇಕು( ಪಾಕದಲ್ಲೂ ಒಂದೆಳೆ, ಎರಡೆಳೆ, ಏರುಪಾಕ, ಎಳೆಪಾಕ ಅಂತೆಲ್ಲಾ ಇದೆ) ಮೈಸೂರುಪಾಕ್ ಪ್ರವೀಣರು ಕಣ್ಣಳತೆಯಲ್ಲೇ ನೀರು , ಸಕ್ಕರೆ, ಕಡ್ಲೆಹುಡಿ ಬಳಸುತ್ತಾರೆ. ಆದರೆ ಅದು ಕೆಲವೊಮ್ಮೆ ಕೈ ಕೊಟ್ಟು ಬಿಡುತ್ತದೆ. ಅದಕ್ಕೆ ಅಳತೆಯ ಸಾಮಾನು ಮೊದಲೇ ತೆಗೆದಿಟ್ಟುಕೊಂಡು ಯಾವುದೇ ಅಡುಗೆ ಆರಂಭಿಸುವುದು ಒಳ್ಳೆಯ ಅನುಸರಿಸ ಬೇಕಾದ ಕ್ರಮ. ಒಂದೆರಡು ಬಾರಿ ಸರಿಯಾದ ರೀತಿಯಲ್ಲಿ ಮಾಡಿದ ಮಾತ್ರಕ್ಕೆ ಪರಿಣತಿ ದೊರೆಯುವುದಿಲ್ಲ. ಸಣ್ಣದಿರಬಹುದು, ಸುಲಭದ್ದಿರಬಹುದು. ಸತತ ಅಭ್ಯಾಸ ಮುಖ್ಯ. ಅದರೊಂದಿಗೆ ಯಾವುದೇ ಅಡುಗೆಯನ್ನು ಮನಸಿಟ್ಟು ಪ್ರೀತಿಯಿಂದ , ದೇವರಿಗೆ ಸಮರ್ಪಿತ ಭಾವನೆಯಿಂದ ಮಾಡಿದಾಗ ಸರ್ವವೂ ಶ್ರೇಷ್ಠವಾಗುವುದರಲ್ಲಿ ಸಂಶಯವೇ ಇಲ್ಲ……

ಬರಹ :
ಅಶ್ವಿನಿಮೂರ್ತಿ ಅಯ್ಯನಕಟ್ಟೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

3 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

3 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

4 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

4 days ago