ಪ್ರಮುಖ

ಅಮೆರಿಕದಲ್ಲಿ ತಲೆಎತ್ತಿದ ಅತಿ ದೊಡ್ಡ ಹಿಂದೂ ದೇವಾಲಯ | ನ್ಯೂ ಜೆರ್ಸಿಯಲ್ಲಿ ಬಿಎಪಿಎಸ್‌ ಸ್ವಾಮಿನಾರಾಯಣ ಅಕ್ಷರಧಾಮ ಉದ್ಘಾಟನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹಿಂದೂಗಳು ಅತೀ ಹೆಚ್ಚು ಇರುವ ದೇಶ ಅಂದ್ರೆ ಅದು ನಮ್ಮ ಭಾರತ. ಹೆಚ್ಚಾಗಿ ಹಿಂದೂ ಸಂಪ್ರದಾಯ ಇಲ್ಲಿ ಆಚರಿಸಲ್ಪಡುತ್ತದೆ. ಹಾಗೆ ಇನ್ನುಳಿದ ಬೇರೆ ಬೇರೆ ಧರ್ಮ, ಮತ, ಜಾತಿಗಳಿಗೂ ಅಷ್ಟೇ ಸ್ವಾತಂತ್ರ್ಯ, ಗೌರವವನ್ನು‌ ನಮ್ಮ ದೇಶ ನೀಡುತ್ತದೆ. ಅದೇ ರೀತಿ ಇತರ ದೇಶಗಳಲ್ಲಿಯೂ ನಮ್ಮ ಧಾರ್ಮಿಕ ಕೇಂದ್ರ ಸ್ಥಾಪನೆ‌ ಮಾಡಿ, ಪೂಜಿಸುವವರಿದ್ದಾರೆ. ಇದೀಗ ಭಾರತದ ಹೊರಗಿನ ಅತಿ ದೊಡ್ಡ ಹಿಂದೂ ದೇವಾಲಯ ಅಮೆರಿಕದಲ್ಲಿ ಉದ್ಘಾಟನೆಗೊಂಡಿದೆ.

Advertisement
Advertisement

ಸ್ವಾಮಿನಾರಾಯಣ ಅಕ್ಷರಧಾಮ ದೇವಾಲಯವು ಅಮೆರಿಕದ ನ್ಯೂಜೆರ್ಸಿಯಲ್ಲಿ  ಭಕ್ತಾದಿಗಳಿಗಾಗಿ ದೇವರ ದರ್ಶನಕ್ಕೆ ಬಾಗಿಲು ತೆರೆಯಿತು. ನ್ಯೂಜೆರ್ಸಿಯ ರಾಬಿನ್ಸ್‌ವಿಲ್ಲೆ ನಗರದಲ್ಲಿರುವ ಈ ದೇವಾಲಯವು ಆಧುನಿಕ ಯುಗದಲ್ಲಿ ಭಾರತದ ಹೊರಗಿನ ಅತಿದೊಡ್ಡ ಹಿಂದೂ ದೇವಾಲಯವಾಗಿದೆ ಎಂದು ಹೇಳಲಾಗುತ್ತದೆ. ಬಿಎಪಿಎಸ್‌ ಸ್ವಾಮಿನಾರಾಯಣ ಅಕ್ಷರಧಾಮಕ್ಕೆ ಪ್ರಧಾನಿ ನರೇಂದ್ರ ಮೋದಿ ಪತ್ರ ಬರೆದು ಅಭಿನಂದನೆ ಸಲ್ಲಿಸಿದ್ದಾರೆ. ‘ವಿಶ್ವದಾದ್ಯಂತ ಅಪಾರ ಸಂಖ್ಯೆಯ ಭಕ್ತರಿಗೆ ಇದು ಆಧ್ಯಾತ್ಮಿಕ ಮಹತ್ವದ ಸಂದರ್ಭವಾಗಿದೆ’ ಎಂದು ಮೋದಿ ಬಣ್ಣಿಸಿದ್ದಾರೆ.

ಈ ದೇವಾಲಯವನ್ನು ಇಟಲಿ ಮತ್ತು ಬಲ್ಗೇರಿಯಾದ ವಿಧದ ಅಮೃತಶಿಲೆಯಿಂದ ರಚಿಸಲಾಗಿದೆ. ಈ ವಾಸ್ತುಶಿಲ್ಪದ ದೇವಾಲಯವು ವಿಶಾಲವಾದ 126 ಎಕರೆ ಪ್ರದೇಶದಲ್ಲಿ ವ್ಯಾಪಿಸಿದೆ. ದೇವಾಲಯದ ಗೋಡೆಗಳಲ್ಲಿ ಮಾರ್ಟಿನ್ ಲೂಥರ್ ಕಿಂಗ್ ಮತ್ತು ಅಬ್ರಹಾಂ ಲಿಂಕನ್ ಸೇರಿದಂತೆ ಐತಿಹಾಸಿಕ ವ್ಯಕ್ತಿಗಳ ಪ್ರತಿರೂಪವನ್ನು ಕೆತ್ತನೆ ಮಾಡಲಾಗಿದೆ ಎಂದು ದೇವಾಲಯದ ಸ್ವಯಂಸೇವಕ ಮತ್ತು ಕೊಲಂಬಿಯಾ ವಿಶ್ವವಿದ್ಯಾನಿಲಯದ ಧಾರ್ಮಿಕ ವಿದ್ವಾಂಸ ಯೋಗಿ ತ್ರಿವೇದಿ ತಿಳಿಸಿದ್ದಾರೆ.

2011 ರಲ್ಲಿ ಅಕ್ಷರಧಾಮ ದೇವಾಲಯ ನಿರ್ಮಾಣ ಕಾರ್ಯ ಪ್ರಾರಂಭವಾಯಿತು. ಪ್ರಪಂಚದಾದ್ಯಂತದ 12,500 ಸ್ವಯಂಸೇವಕರು ಈ ದೇವಾಲಯವನ್ನು ನಿರ್ಮಿಸಿದ್ದಾರೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಲೆ ಮಹದೇಶ್ವರ ಅರಣ್ಯದಲ್ಲಿ 4 ಹುಲಿಗಳ ಅಸಹಜ ಸಾವು | ತನಿಖೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ

ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು…

2 hours ago

ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆ | ರಾಜ್ಯದ ಪ್ರಮುಖ ನದಿ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಳ

ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ…

2 hours ago

ಕೃಷಿ ಮತ್ತು ಆಹಾರೋತ್ಪನ್ನ ವಲಯದಲ್ಲಿ ಹೂಡಿಕೆಗೆ ಅವಕಾಶ

ಉತ್ತರ ಪ್ರದೇಶದ ಆಗ್ರಾ ಬಳಿಯ ಸಿಂಗ್ನಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ದಕ್ಷಿಣ ಏಷ್ಯಾ ಪ್ರಾದೇಶಿಕ…

2 hours ago

ರಾಜ್ಯದಲ್ಲಿ 15 ಬಗೆಯ ಔಷಧಗಳು, ಸೌಂದರ್ಯ ವರ್ಧಕಗಳ ಬಳಕೆಗೆ ನಿಷೇಧ

ರಾಜ್ಯದಲ್ಲಿ ಮಾರಾಟವಾಗುವ 15 ಬಗೆಯ ಔಷಧಗಳು ಹಾಗೂ ಸೌಂದರ್ಯ ವರ್ಧಕಗಳು ಪ್ರಾಮಾಣಿಕೃತ ಗುಣಮಟ್ಟದಲ್ಲಿ…

11 hours ago

ಬಾಹ್ಯಾಕಾಶ ಕೇಂದ್ರ ತಲುಪಿದ ಶುಭಾಂಶು ಶುಕ್ಲ | ಬಾಹ್ಯಾಕಾಶದಲ್ಲಿ ಧಾರವಾಡದ ಹೆಸರು, ಮೆಂತೆಕಾಳು

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಆಕ್ಸಿಯಮ್-4 ಮಿಷನ್…

11 hours ago

ರಾಜ್ಯದ ವಿವಿಧೆಡೆ ಧಾರಾಕಾರ ಮಳೆ | ಕೊಡಗಿನಲ್ಲಿ ವ್ಯಾಪಕ ಮಳೆ | ಕೆ ಆರ್ ಎಸ್ ಅಣೆಕಟ್ಟು ಭರ್ತಿ | ಶಿರಾಡಿ ಸಂಚಾರ ಸಂಕಷ್ಟ |

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕೊಡಗಿನಲ್ಲಿ…

11 hours ago