ಕನ್ನಡಿಗರಾದ(Kannadigas) ನಾವು ವಿಶಾಲ ಹೃದಯದವರು. ಒಂದು ವೇಳೆ ನಮ್ಮದನ್ನು ನಮ್ಮದು ಎಂದು ಹೇಳುವ ಹಕ್ಕು ಇಲ್ಲ. ನಮ್ಮ ಭಾಷೆಗಾಗಿ(Language) ನಾವು ಏನು ಮಾಡುವಂತಿಲ್ಲ. ನಮ್ಮ ನೆಲೆ ಜಲದ ಉಪಯೋಗ ಮಾಡಿದ್ರು ಅದಕ್ಕೆ ಹೊರ ರಾಜ್ಯಗಳ ಖ್ಯಾತೆ. ಈಗ ನೋಡಿ ಕನ್ನಡ ನಾಮಫಲಕ (Kannada Nameplate) ವಿಚಾರವಾಗಿ ಕರ್ನಾಟಕದೊಂದಿಗೆ(Karnataka) ಮಹಾರಾಷ್ಟ್ರ ಸರ್ಕಾರ(Maharashtra Govt) ಮತ್ತೊಮ್ಮೆ ಕ್ಯಾತೆಗೆ ಮುಂದಾಗಿದೆ.
ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಮಾಡಿದ ರಾಜ್ಯ ಸರ್ಕಾರದ ತೀರ್ಮಾನವನ್ನು ಸುಪ್ರೀಂ ಕೋರ್ಟ್ನಲ್ಲಿ (Supreme Court) ಪ್ರಶ್ನಿಸಲು ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಸರ್ಕಾರ ಸಜ್ಜಾಗ್ತಿದೆ. ವಿಧಾನ ಪರಿಷತ್ನಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ಮಸೂದೆ ಅಂಗೀಕರಿಸಿದ ಮರುದಿನವೇ ಅಂದ್ರೆ ಮುಂಬೈನಲ್ಲಿ ಸಭೆ ನಡೆಸಿದ ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವ, ಸುಪ್ರೀಂ ಕೋರ್ಟ್ ಮೊರೆ ಹೋಗಲು ತೀರ್ಮಾನಿಸಿದ್ದಾರೆ.
ಇದಕ್ಕೆ ಕನ್ನಡ ಸಂಸ್ಕೃತಿ ಸಚಿವರು ಪ್ರತಿಕ್ರಿಯಿಸಿ, ನಾವೇನು ಮಹಾರಾಷ್ಟ್ರದಲ್ಲಿ (Maharashtra) ಕನ್ನಡ ಬೋರ್ಡ್ ಹಾಕಿ ಅಂತಾ ಹೇಳಿಲ್ವಲ್ಲ ಎಂದಿದ್ದಾರೆ. ಮಹಾರಾಷ್ಟ್ರದವರು ಏನೇ ಕ್ಯಾತೆ ತೆಗೆದರೂ, ನಾಡು ನುಡಿ ಜಲದ ವಿಚಾರದಲ್ಲಿ ರಾಜೀ ಇಲ್ಲ, ನಮ್ಮ ರಾಜ್ಯದ ತಂಟೆಗೆ ಬಂದ್ರೆ ಹುಷಾರ್ ಎಂದು ಎಚ್ಚರಿಕೆ ನೀಡಿದ್ದಾರೆ. ಇನ್ನೂ, ವಿಧೇಯಕಕ್ಕೆ ರಾಜ್ಯಪಾಲರು ಸಹಿ ಹಾಕಿದ ತಕ್ಷಣವೇ ನಾಮಫಲಕದಲ್ಲಿ ಕನ್ನಡ ಕಡ್ಡಾಯ ನಿಯಮವನ್ನು ಬೆಂಗಳೂರಲ್ಲಿ ಜಾರಿ ಮಾಡುವಂತೆ ಬಿಬಿಎಂಪಿಗೆ ಶಿವರಾಜ್ ತಂಗಡಗಿ ಸೂಚಿಸಿದ್ದಾರೆ.
Why Maharashtra is upset about our nadu nudi: Maharashtra government is ready to approach the Supreme Court to make Kannada mandatory in Karnataka.
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…