ನೇಪಾಳದಲ್ಲಿ ಎಡೆಬಿಡದೆ ಸುರಿದ ಮಳೆ | ಭಾರೀ ಪ್ರವಾಹಕ್ಕೆ 217 ಮಂದಿ ಬಲಿ |

October 1, 2024
10:16 PM

ನೇಪಾಳದಲ್ಲಿ ಇತ್ತೀಚಿಗೆ ಎಡೆಬಿಡದೆ ಸುರಿದ ಮಳೆಯಿಂದ ಉಂಟಾದ ಭೂಕುಸಿತ ಮತ್ತು ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 217 ಕ್ಕೆ ಏರಿಕೆಯಾಗಿದೆ. 28 ಜನರು ಇನ್ನೂ ಕಾಣೆಯಾಗಿದ್ದಾರೆ ಮತ್ತು 143 ಜನರು ಗಾಯಗೊಂಡಿದ್ದಾರೆ.

ನೆರೆಪೀಡಿತ ಪ್ರದೇಶಗಳಾದ್ಯಂತ ಹುಡುಕಾಟ ಹಾಗೂ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಹೆಚ್ಚಿಸಲಾಗಿದೆ. ಗಾಯಾಳುಗಳು ವಿವಿಧ ಆರೋಗ್ಯ ಕೇಂದ್ರಗಳಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭೂಕುಸಿತದಿಂದ ಮುಚ್ಚಿಹೋಗಿರುವ ಪ್ರಮುಖ ರಸ್ತೆಗಳನ್ನು ಮತ್ತೆ ತೆರೆಯುವ ಪ್ರಯತ್ನಗಳು ನಡೆಯುತ್ತಿವೆ.  ಕಠ್ಮಂಡುವಿನಿಂದ ಹೊರಡುವ ಹೆಚ್ಚಿನ ಹೆದ್ದಾರಿಗಳು ಮಣ್ಣು ಹಾಗೂ ಮರಗಳಿಂದ ಮುಚ್ಚಿದೆ. ತೆರವು ಕಾರ್ಯ ನಡೆಯುತ್ತಿದೆ. ಸೆಪ್ಟೆಂಬರ್ 27 ಮತ್ತು 28 ರಂದು ಸಂಭವಿಸಿದ ಪ್ರವಾಹ ಮತ್ತು ಭೂಕುಸಿತದಲ್ಲಿ ಮೃತಪಟ್ಟವರಿಗಾಗಿ  ಸರ್ಕಾರವು ಮೂರು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ.

ನೇಪಾಳದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ವಿವಿಧ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಭಾರತೀಯ ನಾಗರಿಕರ ಬಗ್ಗೆ ಮಾಹಿತಿ ಪಡೆದಿದೆ ಎಂದು ವರದಿ ಮಾಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ
June 5, 2026
7:04 AM
by: ದ ರೂರಲ್ ಮಿರರ್.ಕಾಂ
ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು
June 5, 2026
6:57 AM
by: ದ ರೂರಲ್ ಮಿರರ್.ಕಾಂ
ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…
June 4, 2026
10:30 PM
by: ಮಿರರ್‌ ಡೆಸ್ಕ್
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ
June 4, 2026
9:15 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror