ನೇಪಾಳದಲ್ಲಿ ಇತ್ತೀಚಿಗೆ ಎಡೆಬಿಡದೆ ಸುರಿದ ಮಳೆಯಿಂದ ಉಂಟಾದ ಭೂಕುಸಿತ ಮತ್ತು ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 217 ಕ್ಕೆ ಏರಿಕೆಯಾಗಿದೆ. 28 ಜನರು ಇನ್ನೂ ಕಾಣೆಯಾಗಿದ್ದಾರೆ ಮತ್ತು 143 ಜನರು ಗಾಯಗೊಂಡಿದ್ದಾರೆ.
ನೆರೆಪೀಡಿತ ಪ್ರದೇಶಗಳಾದ್ಯಂತ ಹುಡುಕಾಟ ಹಾಗೂ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಹೆಚ್ಚಿಸಲಾಗಿದೆ. ಗಾಯಾಳುಗಳು ವಿವಿಧ ಆರೋಗ್ಯ ಕೇಂದ್ರಗಳಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ.
ಭೂಕುಸಿತದಿಂದ ಮುಚ್ಚಿಹೋಗಿರುವ ಪ್ರಮುಖ ರಸ್ತೆಗಳನ್ನು ಮತ್ತೆ ತೆರೆಯುವ ಪ್ರಯತ್ನಗಳು ನಡೆಯುತ್ತಿವೆ. ಕಠ್ಮಂಡುವಿನಿಂದ ಹೊರಡುವ ಹೆಚ್ಚಿನ ಹೆದ್ದಾರಿಗಳು ಮಣ್ಣು ಹಾಗೂ ಮರಗಳಿಂದ ಮುಚ್ಚಿದೆ. ತೆರವು ಕಾರ್ಯ ನಡೆಯುತ್ತಿದೆ. ಸೆಪ್ಟೆಂಬರ್ 27 ಮತ್ತು 28 ರಂದು ಸಂಭವಿಸಿದ ಪ್ರವಾಹ ಮತ್ತು ಭೂಕುಸಿತದಲ್ಲಿ ಮೃತಪಟ್ಟವರಿಗಾಗಿ ಸರ್ಕಾರವು ಮೂರು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ.
ನೇಪಾಳದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ವಿವಿಧ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಭಾರತೀಯ ನಾಗರಿಕರ ಬಗ್ಗೆ ಮಾಹಿತಿ ಪಡೆದಿದೆ ಎಂದು ವರದಿ ಮಾಡಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…