ಜೇನಿನಂತ ಹಲಸಿನ ಹಣ್ಣು ಸವಿದ ಮೈಸೂರು ಜನತೆ | ಮೈಸೂರಿನ ಹಲಸಿನ ಹಬ್ಬದಲ್ಲಿ ಹಲವು ಹಲಸುಗಳ ಸವಿ

June 17, 2024
2:07 PM

ಮಳೆಗಾಲ(Rain season) ಆರಂಭವಾಗುತ್ತಿದ್ದಂತೆ ಹಲಸಿನ ಹಣ್ಣಿನದ್ದೇ(Jack fruit) ಕಾರುಬಾರು. ವರ್ಷಕ್ಕೆ ಒಮ್ಮೆ ಸಿಗುವ ಈ ಹಣ್ಣನ್ನು ಸವಿಯದೆ ಬಿಡುವವರು ಕಮ್ಮಿಯೇ. ಇತ್ತೀಚೆಗೆಂತು ಹಲಸಿನ ಮೇಳಗಳು(Jack fruit festival) ಹಲಸಿನ ಹಣ್ಣಿನ ಪ್ರಿಯರಿಗೆ ನಗರಗಳಲ್ಲೂ ವಿವಿಧ ಬಗೆಯ ಹಲಸಿನ ಹಣ್ಣು ಸವಿಯುವ ಭಾಗ್ಯ ಒದಗಿಸಿದೆ. ಇಂತಹ ಹಲಸಿನ ಹಬ್ಬ (Mysuru Jackfruit Festival) ಮೈಸೂರಿನ ಸಹಜ ಸಮೃದ್ದ ಮತ್ತು ರೋಟರಿ ಕ್ಲಬ್(Rotary Club) ಮೈಸೂರು(Mysore) ಜೊತೆಗೂಡಿ ಮೈಸೂರಿನ ನಂಜರಾಜ ಬಹದ್ದೂರು ಛತ್ರದಲ್ಲಿ 2 ದಿನಗಳ ಕಾಲ ಏರ್ಪಡಿಸಲಾಯಿತು.

Advertisement
Advertisement

ಹಲಸಿನ ವೆರೈಟಿಗಳು! : ಹಲಸಿನ ಮಹತ್ವ ಸಾರುವ ಮೇಳದಲ್ಲಿ ಕೆಂಪು, ಹಳದಿ ಮತ್ತು ಬಿಳಿ ಹಲಸಿನ ತಳಿ ಹಣ್ಣುಗಳು ತಿನ್ನಲು ಸಿಗಲಿವೆ. ಹಲಸಿನ ಐಸ್ ಕ್ರೀಂ, ಚಿಪ್ಸ, ಚಾಕಲೇಟ್, ಹಪ್ಪಳ, ಹಲ್ವ, ಕಬಾಬ್, ಹೋಳಿಗೆ, ವಡೆ, ದೋಸೆ , ಪಲ್ಯ , ಬಿರಿಯಾನಿಯ ಮಳಿಗೆಗಳು ಸಹ ಇದ್ದವು. ಚಿಕ್ಕನಾಯಕನಹಳ್ಳಿ, ನಾಗರಹೊಳೆ ಕಾಡು, ಕೊಳ್ಳೇಗಾಲ, ತಮಿಳುನಾಡಿನ ಪನ್ನರ್ತಿಯ ಗುಣಮಟ್ಟದ ಹಲಸಿನ ಹಣ್ಣುಗಳು ಮಾರಾಟಕ್ಕೆ ಇಲ್ಲಿಗೆ ಬಂದಿದ್ದವು. ತುಮಕೂರಿನ ಕೆಂಪು ಹಲಸು ಸಹ ಬಂದಿದ್ದವು. ತುಮಕೂರಿನ ಹಿರೇಹಳ್ಳಿಯ ತೋಟಗಾರಿಕಾ ಸಂಶೋಧನಾ ಕೇಂದ್ರದವರು ವಿವಿಧ ರೀತಿಯ ಕೆಂಪು ಹಲಸಿನ ತಳಿಗಳನ್ನು ಪ್ರದರ್ಶನಕ್ಕೆ ತಂದಿದ್ದರು. ಹಲಸಿನ ಸಾಗುವಳಿ ಮತ್ತು ಮೌಲ್ಯವರ್ಧನೆ ಕುರಿತು ಮಾಹಿತಿ ನೀಡಲಾಯಿತು.

ವಿವಿಧ ತಳಿ :ಶಂಕರ ಹಲಸು, ರುದ್ರಾಕ್ಷಿ ಬಕ್ಕೆ, ತೂಬಗೆರೆ, ಬೈರಸಂದ್ರ,ಸರ್ವ ಋತು,ಲಾಲ್ ಬಾಗ್ ಮಧುರ, ಥಾಯ್ ರೆಡ್, ವಿಯಟ್ನಾಂ ಸೂಪರ್ ಹರ್ಲಿ, ಗಮ್ ಲೆಸ್, ನಾಗಚಂದ್ರ, ರಾಮಚಂದ್ರ ಮೊದಲಾದ ಕರ್ನಾಟಕದ ಹೆಸರಾಂತ ಹಲಸಿನ ತಳಿ ಗಿಡಗಳು ಮಾರಾಟಕ್ಕೆ ಲಭ್ಯವಿದ್ದವು. ಸಸ್ಯ ತಳಿ ಸಂರಕ್ಷಣೆ ಮತ್ತು ರೈತರ ಹಕ್ಕು ಪ್ರಾಧಿಕಾರದಲ್ಲಿ ನೊಂದಣಿಯಾಗಿರುವ ಕರ್ನಾಟಕ ರಾಜ್ಯದ ಮೊದಲ ಕೆಂಪು ಹಲಸಿನ ತಳಿ ಸಿದ್ದು ಹಲಸು ಗಿಡಗಳು ಮಾರಾಟಕ್ಕೆ ಇದ್ದವು.

  • ಅಂತರ್ಜಾಲ ಮಾಹಿತಿ

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 02-06-2025 | ಸಾಮಾನ್ಯ ಮಳೆ ಮುಂದುವರಿಕೆ | ಜೂನ್ ತಿಂಗಳಲ್ಲಿ ದುರ್ಬಲ ಮುಂಗಾರು ಸಾಧ್ಯತೆ |
June 2, 2025
2:15 PM
by: The Rural Mirror ಸುದ್ದಿಜಾಲ
ಕೊರೊನಾ ಬಗ್ಗೆ ಮುನ್ನೆಚ್ಚರಿಕೆಯ ಹೊರತು ಭಯಭೀತರಾಗುವ ಅವಶ್ಯಕತೆಯಿಲ್ಲ
June 2, 2025
11:20 AM
by: The Rural Mirror ಸುದ್ದಿಜಾಲ
ಭೂಕುಸಿತ ಹಿನ್ನೆಲೆ | ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ  ಈಶ್ವರ್ ಖಂಡ್ರೆ ಸೂಚನೆ
June 2, 2025
7:33 AM
by: The Rural Mirror ಸುದ್ದಿಜಾಲ
ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆ ಸಾಧ್ಯತೆ | ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ
June 2, 2025
7:26 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group