MIRROR FOCUS

ಜೇನಿನಂತ ಹಲಸಿನ ಹಣ್ಣು ಸವಿದ ಮೈಸೂರು ಜನತೆ | ಮೈಸೂರಿನ ಹಲಸಿನ ಹಬ್ಬದಲ್ಲಿ ಹಲವು ಹಲಸುಗಳ ಸವಿ

Share

ಮಳೆಗಾಲ(Rain season) ಆರಂಭವಾಗುತ್ತಿದ್ದಂತೆ ಹಲಸಿನ ಹಣ್ಣಿನದ್ದೇ(Jack fruit) ಕಾರುಬಾರು. ವರ್ಷಕ್ಕೆ ಒಮ್ಮೆ ಸಿಗುವ ಈ ಹಣ್ಣನ್ನು ಸವಿಯದೆ ಬಿಡುವವರು ಕಮ್ಮಿಯೇ. ಇತ್ತೀಚೆಗೆಂತು ಹಲಸಿನ ಮೇಳಗಳು(Jack fruit festival) ಹಲಸಿನ ಹಣ್ಣಿನ ಪ್ರಿಯರಿಗೆ ನಗರಗಳಲ್ಲೂ ವಿವಿಧ ಬಗೆಯ ಹಲಸಿನ ಹಣ್ಣು ಸವಿಯುವ ಭಾಗ್ಯ ಒದಗಿಸಿದೆ. ಇಂತಹ ಹಲಸಿನ ಹಬ್ಬ (Mysuru Jackfruit Festival) ಮೈಸೂರಿನ ಸಹಜ ಸಮೃದ್ದ ಮತ್ತು ರೋಟರಿ ಕ್ಲಬ್(Rotary Club) ಮೈಸೂರು(Mysore) ಜೊತೆಗೂಡಿ ಮೈಸೂರಿನ ನಂಜರಾಜ ಬಹದ್ದೂರು ಛತ್ರದಲ್ಲಿ 2 ದಿನಗಳ ಕಾಲ ಏರ್ಪಡಿಸಲಾಯಿತು.

Advertisement

ಹಲಸಿನ ವೆರೈಟಿಗಳು! : ಹಲಸಿನ ಮಹತ್ವ ಸಾರುವ ಮೇಳದಲ್ಲಿ ಕೆಂಪು, ಹಳದಿ ಮತ್ತು ಬಿಳಿ ಹಲಸಿನ ತಳಿ ಹಣ್ಣುಗಳು ತಿನ್ನಲು ಸಿಗಲಿವೆ. ಹಲಸಿನ ಐಸ್ ಕ್ರೀಂ, ಚಿಪ್ಸ, ಚಾಕಲೇಟ್, ಹಪ್ಪಳ, ಹಲ್ವ, ಕಬಾಬ್, ಹೋಳಿಗೆ, ವಡೆ, ದೋಸೆ , ಪಲ್ಯ , ಬಿರಿಯಾನಿಯ ಮಳಿಗೆಗಳು ಸಹ ಇದ್ದವು. ಚಿಕ್ಕನಾಯಕನಹಳ್ಳಿ, ನಾಗರಹೊಳೆ ಕಾಡು, ಕೊಳ್ಳೇಗಾಲ, ತಮಿಳುನಾಡಿನ ಪನ್ನರ್ತಿಯ ಗುಣಮಟ್ಟದ ಹಲಸಿನ ಹಣ್ಣುಗಳು ಮಾರಾಟಕ್ಕೆ ಇಲ್ಲಿಗೆ ಬಂದಿದ್ದವು. ತುಮಕೂರಿನ ಕೆಂಪು ಹಲಸು ಸಹ ಬಂದಿದ್ದವು. ತುಮಕೂರಿನ ಹಿರೇಹಳ್ಳಿಯ ತೋಟಗಾರಿಕಾ ಸಂಶೋಧನಾ ಕೇಂದ್ರದವರು ವಿವಿಧ ರೀತಿಯ ಕೆಂಪು ಹಲಸಿನ ತಳಿಗಳನ್ನು ಪ್ರದರ್ಶನಕ್ಕೆ ತಂದಿದ್ದರು. ಹಲಸಿನ ಸಾಗುವಳಿ ಮತ್ತು ಮೌಲ್ಯವರ್ಧನೆ ಕುರಿತು ಮಾಹಿತಿ ನೀಡಲಾಯಿತು.

ವಿವಿಧ ತಳಿ :ಶಂಕರ ಹಲಸು, ರುದ್ರಾಕ್ಷಿ ಬಕ್ಕೆ, ತೂಬಗೆರೆ, ಬೈರಸಂದ್ರ,ಸರ್ವ ಋತು,ಲಾಲ್ ಬಾಗ್ ಮಧುರ, ಥಾಯ್ ರೆಡ್, ವಿಯಟ್ನಾಂ ಸೂಪರ್ ಹರ್ಲಿ, ಗಮ್ ಲೆಸ್, ನಾಗಚಂದ್ರ, ರಾಮಚಂದ್ರ ಮೊದಲಾದ ಕರ್ನಾಟಕದ ಹೆಸರಾಂತ ಹಲಸಿನ ತಳಿ ಗಿಡಗಳು ಮಾರಾಟಕ್ಕೆ ಲಭ್ಯವಿದ್ದವು. ಸಸ್ಯ ತಳಿ ಸಂರಕ್ಷಣೆ ಮತ್ತು ರೈತರ ಹಕ್ಕು ಪ್ರಾಧಿಕಾರದಲ್ಲಿ ನೊಂದಣಿಯಾಗಿರುವ ಕರ್ನಾಟಕ ರಾಜ್ಯದ ಮೊದಲ ಕೆಂಪು ಹಲಸಿನ ತಳಿ ಸಿದ್ದು ಹಲಸು ಗಿಡಗಳು ಮಾರಾಟಕ್ಕೆ ಇದ್ದವು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ |14.04.2025 | ಕರಾವಳಿ ಕೆಲವು ಕಡೆ ಗುಡುಗು ಸಹಿತ ಮಳೆ | ಎ.19ರ ನಂತರ ಮಳೆಯ ಪ್ರಮಾಣ ತೀರಾ ಕಡಿಮೆ |

15.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

24 minutes ago

ಅನುಭವದ ಕೃಷಿಯಿಂದ ಡಾಟಾ ಆಧಾರಿತ “ಸ್ಮಾರ್ಟ್ ಫಾರ್ಮಿಂಗ್ “‌ ಕಡೆಗೆ ಆಧುನಿಕ ಕೃಷಿ

ಸ್ಮಾರ್ಟ್ ಕೃಷಿಯು ಕೃಷಿ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರುತ್ತಿದೆ. ತಂತ್ರಜ್ಞಾನ, ಯಾಂತ್ರೀಕರಣ ಮತ್ತು…

6 hours ago

ಜೂ.30 ರಿಂದ ಮಂಡ್ಯ ಮೈಶುಗರ್ ಕಾರ್ಖಾನೆಯಲ್ಲಿ  ಕಬ್ಬು ಅರೆಯುವ ಪ್ರಕ್ರಿಯೆ ಆರಂಭ

ಮಂಡ್ಯ ಮೈಷುಗರ್ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಪ್ರಕ್ರಿಯೆ ಜೂನ್ 30ರಿಂದ…

7 hours ago

ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿ | ಸಚಿವ ಅಮಿತ್‌ ಶಾ ಹೇಳಿಕೆ

ಇಂದು ಸಹಕಾರ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿಯಾಗುತ್ತಿದೆ. 8 ಲಕ್ಷಕ್ಕೂ ಅಧಿಕ ಸಹಕಾರಿ ಸಂಘಗಳು…

7 hours ago

ಈ 5 ವಸ್ತು ಮನೆಯ ದಕ್ಷಿಣ ದಿಕ್ಕಿನಲ್ಲಿ ಇಟ್ಟರೆ ಶ್ರೀಮಂತರಾಗುವುದು ಗ್ಯಾರಂಟಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

7 hours ago

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಂಭವ | ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು, ಶಿವಮೊಗ್ಗ, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ…

14 hours ago