Advertisement
MIRROR FOCUS

ಜೇನಿನಂತ ಹಲಸಿನ ಹಣ್ಣು ಸವಿದ ಮೈಸೂರು ಜನತೆ | ಮೈಸೂರಿನ ಹಲಸಿನ ಹಬ್ಬದಲ್ಲಿ ಹಲವು ಹಲಸುಗಳ ಸವಿ

Share

ಮಳೆಗಾಲ(Rain season) ಆರಂಭವಾಗುತ್ತಿದ್ದಂತೆ ಹಲಸಿನ ಹಣ್ಣಿನದ್ದೇ(Jack fruit) ಕಾರುಬಾರು. ವರ್ಷಕ್ಕೆ ಒಮ್ಮೆ ಸಿಗುವ ಈ ಹಣ್ಣನ್ನು ಸವಿಯದೆ ಬಿಡುವವರು ಕಮ್ಮಿಯೇ. ಇತ್ತೀಚೆಗೆಂತು ಹಲಸಿನ ಮೇಳಗಳು(Jack fruit festival) ಹಲಸಿನ ಹಣ್ಣಿನ ಪ್ರಿಯರಿಗೆ ನಗರಗಳಲ್ಲೂ ವಿವಿಧ ಬಗೆಯ ಹಲಸಿನ ಹಣ್ಣು ಸವಿಯುವ ಭಾಗ್ಯ ಒದಗಿಸಿದೆ. ಇಂತಹ ಹಲಸಿನ ಹಬ್ಬ (Mysuru Jackfruit Festival) ಮೈಸೂರಿನ ಸಹಜ ಸಮೃದ್ದ ಮತ್ತು ರೋಟರಿ ಕ್ಲಬ್(Rotary Club) ಮೈಸೂರು(Mysore) ಜೊತೆಗೂಡಿ ಮೈಸೂರಿನ ನಂಜರಾಜ ಬಹದ್ದೂರು ಛತ್ರದಲ್ಲಿ 2 ದಿನಗಳ ಕಾಲ ಏರ್ಪಡಿಸಲಾಯಿತು.

ಹಲಸಿನ ವೆರೈಟಿಗಳು! : ಹಲಸಿನ ಮಹತ್ವ ಸಾರುವ ಮೇಳದಲ್ಲಿ ಕೆಂಪು, ಹಳದಿ ಮತ್ತು ಬಿಳಿ ಹಲಸಿನ ತಳಿ ಹಣ್ಣುಗಳು ತಿನ್ನಲು ಸಿಗಲಿವೆ. ಹಲಸಿನ ಐಸ್ ಕ್ರೀಂ, ಚಿಪ್ಸ, ಚಾಕಲೇಟ್, ಹಪ್ಪಳ, ಹಲ್ವ, ಕಬಾಬ್, ಹೋಳಿಗೆ, ವಡೆ, ದೋಸೆ , ಪಲ್ಯ , ಬಿರಿಯಾನಿಯ ಮಳಿಗೆಗಳು ಸಹ ಇದ್ದವು. ಚಿಕ್ಕನಾಯಕನಹಳ್ಳಿ, ನಾಗರಹೊಳೆ ಕಾಡು, ಕೊಳ್ಳೇಗಾಲ, ತಮಿಳುನಾಡಿನ ಪನ್ನರ್ತಿಯ ಗುಣಮಟ್ಟದ ಹಲಸಿನ ಹಣ್ಣುಗಳು ಮಾರಾಟಕ್ಕೆ ಇಲ್ಲಿಗೆ ಬಂದಿದ್ದವು. ತುಮಕೂರಿನ ಕೆಂಪು ಹಲಸು ಸಹ ಬಂದಿದ್ದವು. ತುಮಕೂರಿನ ಹಿರೇಹಳ್ಳಿಯ ತೋಟಗಾರಿಕಾ ಸಂಶೋಧನಾ ಕೇಂದ್ರದವರು ವಿವಿಧ ರೀತಿಯ ಕೆಂಪು ಹಲಸಿನ ತಳಿಗಳನ್ನು ಪ್ರದರ್ಶನಕ್ಕೆ ತಂದಿದ್ದರು. ಹಲಸಿನ ಸಾಗುವಳಿ ಮತ್ತು ಮೌಲ್ಯವರ್ಧನೆ ಕುರಿತು ಮಾಹಿತಿ ನೀಡಲಾಯಿತು.

ವಿವಿಧ ತಳಿ :ಶಂಕರ ಹಲಸು, ರುದ್ರಾಕ್ಷಿ ಬಕ್ಕೆ, ತೂಬಗೆರೆ, ಬೈರಸಂದ್ರ,ಸರ್ವ ಋತು,ಲಾಲ್ ಬಾಗ್ ಮಧುರ, ಥಾಯ್ ರೆಡ್, ವಿಯಟ್ನಾಂ ಸೂಪರ್ ಹರ್ಲಿ, ಗಮ್ ಲೆಸ್, ನಾಗಚಂದ್ರ, ರಾಮಚಂದ್ರ ಮೊದಲಾದ ಕರ್ನಾಟಕದ ಹೆಸರಾಂತ ಹಲಸಿನ ತಳಿ ಗಿಡಗಳು ಮಾರಾಟಕ್ಕೆ ಲಭ್ಯವಿದ್ದವು. ಸಸ್ಯ ತಳಿ ಸಂರಕ್ಷಣೆ ಮತ್ತು ರೈತರ ಹಕ್ಕು ಪ್ರಾಧಿಕಾರದಲ್ಲಿ ನೊಂದಣಿಯಾಗಿರುವ ಕರ್ನಾಟಕ ರಾಜ್ಯದ ಮೊದಲ ಕೆಂಪು ಹಲಸಿನ ತಳಿ ಸಿದ್ದು ಹಲಸು ಗಿಡಗಳು ಮಾರಾಟಕ್ಕೆ ಇದ್ದವು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

7 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

13 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

21 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago