Advertisement
MIRROR FOCUS

ಜೇನಿನಂತ ಹಲಸಿನ ಹಣ್ಣು ಸವಿದ ಮೈಸೂರು ಜನತೆ | ಮೈಸೂರಿನ ಹಲಸಿನ ಹಬ್ಬದಲ್ಲಿ ಹಲವು ಹಲಸುಗಳ ಸವಿ

Share

ಮಳೆಗಾಲ(Rain season) ಆರಂಭವಾಗುತ್ತಿದ್ದಂತೆ ಹಲಸಿನ ಹಣ್ಣಿನದ್ದೇ(Jack fruit) ಕಾರುಬಾರು. ವರ್ಷಕ್ಕೆ ಒಮ್ಮೆ ಸಿಗುವ ಈ ಹಣ್ಣನ್ನು ಸವಿಯದೆ ಬಿಡುವವರು ಕಮ್ಮಿಯೇ. ಇತ್ತೀಚೆಗೆಂತು ಹಲಸಿನ ಮೇಳಗಳು(Jack fruit festival) ಹಲಸಿನ ಹಣ್ಣಿನ ಪ್ರಿಯರಿಗೆ ನಗರಗಳಲ್ಲೂ ವಿವಿಧ ಬಗೆಯ ಹಲಸಿನ ಹಣ್ಣು ಸವಿಯುವ ಭಾಗ್ಯ ಒದಗಿಸಿದೆ. ಇಂತಹ ಹಲಸಿನ ಹಬ್ಬ (Mysuru Jackfruit Festival) ಮೈಸೂರಿನ ಸಹಜ ಸಮೃದ್ದ ಮತ್ತು ರೋಟರಿ ಕ್ಲಬ್(Rotary Club) ಮೈಸೂರು(Mysore) ಜೊತೆಗೂಡಿ ಮೈಸೂರಿನ ನಂಜರಾಜ ಬಹದ್ದೂರು ಛತ್ರದಲ್ಲಿ 2 ದಿನಗಳ ಕಾಲ ಏರ್ಪಡಿಸಲಾಯಿತು.

ಹಲಸಿನ ವೆರೈಟಿಗಳು! : ಹಲಸಿನ ಮಹತ್ವ ಸಾರುವ ಮೇಳದಲ್ಲಿ ಕೆಂಪು, ಹಳದಿ ಮತ್ತು ಬಿಳಿ ಹಲಸಿನ ತಳಿ ಹಣ್ಣುಗಳು ತಿನ್ನಲು ಸಿಗಲಿವೆ. ಹಲಸಿನ ಐಸ್ ಕ್ರೀಂ, ಚಿಪ್ಸ, ಚಾಕಲೇಟ್, ಹಪ್ಪಳ, ಹಲ್ವ, ಕಬಾಬ್, ಹೋಳಿಗೆ, ವಡೆ, ದೋಸೆ , ಪಲ್ಯ , ಬಿರಿಯಾನಿಯ ಮಳಿಗೆಗಳು ಸಹ ಇದ್ದವು. ಚಿಕ್ಕನಾಯಕನಹಳ್ಳಿ, ನಾಗರಹೊಳೆ ಕಾಡು, ಕೊಳ್ಳೇಗಾಲ, ತಮಿಳುನಾಡಿನ ಪನ್ನರ್ತಿಯ ಗುಣಮಟ್ಟದ ಹಲಸಿನ ಹಣ್ಣುಗಳು ಮಾರಾಟಕ್ಕೆ ಇಲ್ಲಿಗೆ ಬಂದಿದ್ದವು. ತುಮಕೂರಿನ ಕೆಂಪು ಹಲಸು ಸಹ ಬಂದಿದ್ದವು. ತುಮಕೂರಿನ ಹಿರೇಹಳ್ಳಿಯ ತೋಟಗಾರಿಕಾ ಸಂಶೋಧನಾ ಕೇಂದ್ರದವರು ವಿವಿಧ ರೀತಿಯ ಕೆಂಪು ಹಲಸಿನ ತಳಿಗಳನ್ನು ಪ್ರದರ್ಶನಕ್ಕೆ ತಂದಿದ್ದರು. ಹಲಸಿನ ಸಾಗುವಳಿ ಮತ್ತು ಮೌಲ್ಯವರ್ಧನೆ ಕುರಿತು ಮಾಹಿತಿ ನೀಡಲಾಯಿತು.

ವಿವಿಧ ತಳಿ :ಶಂಕರ ಹಲಸು, ರುದ್ರಾಕ್ಷಿ ಬಕ್ಕೆ, ತೂಬಗೆರೆ, ಬೈರಸಂದ್ರ,ಸರ್ವ ಋತು,ಲಾಲ್ ಬಾಗ್ ಮಧುರ, ಥಾಯ್ ರೆಡ್, ವಿಯಟ್ನಾಂ ಸೂಪರ್ ಹರ್ಲಿ, ಗಮ್ ಲೆಸ್, ನಾಗಚಂದ್ರ, ರಾಮಚಂದ್ರ ಮೊದಲಾದ ಕರ್ನಾಟಕದ ಹೆಸರಾಂತ ಹಲಸಿನ ತಳಿ ಗಿಡಗಳು ಮಾರಾಟಕ್ಕೆ ಲಭ್ಯವಿದ್ದವು. ಸಸ್ಯ ತಳಿ ಸಂರಕ್ಷಣೆ ಮತ್ತು ರೈತರ ಹಕ್ಕು ಪ್ರಾಧಿಕಾರದಲ್ಲಿ ನೊಂದಣಿಯಾಗಿರುವ ಕರ್ನಾಟಕ ರಾಜ್ಯದ ಮೊದಲ ಕೆಂಪು ಹಲಸಿನ ತಳಿ ಸಿದ್ದು ಹಲಸು ಗಿಡಗಳು ಮಾರಾಟಕ್ಕೆ ಇದ್ದವು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

2 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

3 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

16 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

20 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

1 day ago