ಇತ್ತೀಚಿನ ದಿನಗಳಲ್ಲಿ ಬಹುಕಷ್ಟದ ಕೆಲಸ ಅಂದ್ರೆ ಕೃಷಿಗೆ ಸಹಾಯಕರು ಸಿಗೋದು. ಜಮೀನು ಕೆಲಸಕ್ಕೆ ಸಹಾಯಕರು ಸಿಗದೆ ರೈತರು ಕಂಗಾಲಾಗಿದ್ದಾರೆ. ಜನ ಬಂದ್ರೆ ಬಂದ್ರು.. ಇಲ್ಲಾಂದ್ರೆ ಇಲ್ಲ. ಅದ್ರಲ್ಲೂ ಭತ್ತದ ನಾಟಿಗೆ ಜನ ಸಿಗೋದೆ ಅಪರೂಪವಾಗಿದೆ. ಆದರೆ ಇಲ್ಲಿ ಒಂದೇ ಗದ್ದೆಯಲ್ಲಿ ಸಾವಿರಾರು ಮಂದಿ ಸಾಂಪ್ರದಾಯಿಕ ಶೈಲಿಯಲ್ಲಿ ನಾಟಿಗೆ ಇಳಿದಿದ್ದಾರೆ. ಈ ಅಪರೂಪದ ಸನ್ನಿವೇಶ ಇಲ್ಲಿದೆ..
ಗದ್ದೆ ನಾಟಿ ವಿಡಿಯೋ :
ಈ ಬಾರಿ ತಡವಾಗಿಯಾದರು ಮುಂಗಾರು ಮಲೆನಾಡು, ಕರಾವಳಿಯಲ್ಲಿ ಭರ್ಜರಿಯಾಗಿ ಆಗಿದೆ. ಇದೇ ಸಂಭ್ರಮದಲ್ಲಿ ಭತ್ತ ನಾಟಿಗೆ ರೈತರು ಮುಂದಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಗ್ರಾಮದಲ್ಲಿ ಉಚಿತ ಸಾಮೂಹಿಕ ಗದ್ದೆ ನಾಟಿ ಮಾಡಲಾಯಿತು. ಈಗಷ್ಟೇ ಮಳೆಯಲ್ಲಿ ನೆನೆದ ಗಿಡಮರಗಳು, ಉಳುಮೆ ಮಾಡಿ ಹಸಿ ಹಸಿಯಾದ ಕೆಸರು ಗದ್ದೆ. ಕೈಯಲ್ಲಿ ಭತ್ತದ ಸಸಿ ಹಿಡಿದು ಒಂದೇ ಗದ್ದೆಯಲ್ಲಿ ಕೆಸರು ಕಾಲಲ್ಲಿ ಸಾಲಾಗಿ ಸಾವಿರಾರು ಮಹಿಳೆಯರು ನಾಟಿ ಮಾಡುತ್ತಿದ್ದಾರೆ.
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…
ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…
ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…
ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…