ಇತ್ತೀಚಿನ ದಿನಗಳಲ್ಲಿ ಬಹುಕಷ್ಟದ ಕೆಲಸ ಅಂದ್ರೆ ಕೃಷಿಗೆ ಸಹಾಯಕರು ಸಿಗೋದು. ಜಮೀನು ಕೆಲಸಕ್ಕೆ ಸಹಾಯಕರು ಸಿಗದೆ ರೈತರು ಕಂಗಾಲಾಗಿದ್ದಾರೆ. ಜನ ಬಂದ್ರೆ ಬಂದ್ರು.. ಇಲ್ಲಾಂದ್ರೆ ಇಲ್ಲ. ಅದ್ರಲ್ಲೂ ಭತ್ತದ ನಾಟಿಗೆ ಜನ ಸಿಗೋದೆ ಅಪರೂಪವಾಗಿದೆ. ಆದರೆ ಇಲ್ಲಿ ಒಂದೇ ಗದ್ದೆಯಲ್ಲಿ ಸಾವಿರಾರು ಮಂದಿ ಸಾಂಪ್ರದಾಯಿಕ ಶೈಲಿಯಲ್ಲಿ ನಾಟಿಗೆ ಇಳಿದಿದ್ದಾರೆ. ಈ ಅಪರೂಪದ ಸನ್ನಿವೇಶ ಇಲ್ಲಿದೆ..
ಗದ್ದೆ ನಾಟಿ ವಿಡಿಯೋ :
ಈ ಬಾರಿ ತಡವಾಗಿಯಾದರು ಮುಂಗಾರು ಮಲೆನಾಡು, ಕರಾವಳಿಯಲ್ಲಿ ಭರ್ಜರಿಯಾಗಿ ಆಗಿದೆ. ಇದೇ ಸಂಭ್ರಮದಲ್ಲಿ ಭತ್ತ ನಾಟಿಗೆ ರೈತರು ಮುಂದಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಗ್ರಾಮದಲ್ಲಿ ಉಚಿತ ಸಾಮೂಹಿಕ ಗದ್ದೆ ನಾಟಿ ಮಾಡಲಾಯಿತು. ಈಗಷ್ಟೇ ಮಳೆಯಲ್ಲಿ ನೆನೆದ ಗಿಡಮರಗಳು, ಉಳುಮೆ ಮಾಡಿ ಹಸಿ ಹಸಿಯಾದ ಕೆಸರು ಗದ್ದೆ. ಕೈಯಲ್ಲಿ ಭತ್ತದ ಸಸಿ ಹಿಡಿದು ಒಂದೇ ಗದ್ದೆಯಲ್ಲಿ ಕೆಸರು ಕಾಲಲ್ಲಿ ಸಾಲಾಗಿ ಸಾವಿರಾರು ಮಹಿಳೆಯರು ನಾಟಿ ಮಾಡುತ್ತಿದ್ದಾರೆ.
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…