Advertisement
ಕೃಷಿ

#Paddy | ಆಧುನಿಕ ಯುಗದಲ್ಲೂ ಸಂಪ್ರದಾಯ ಬಿಡದ ಊರ ಜನ | ಒಂದೇ ಗದ್ದೆಯಲ್ಲಿ ಸಾವಿರಾರು ಮಂದಿಯಿಂದ ಭತ್ತ ನಾಟಿ |

Share

ಇತ್ತೀಚಿನ ದಿನಗಳಲ್ಲಿ ಬಹುಕಷ್ಟದ ಕೆಲಸ ಅಂದ್ರೆ  ಕೃಷಿಗೆ ಸಹಾಯಕರು ಸಿಗೋದು. ಜಮೀನು ಕೆಲಸಕ್ಕೆ ಸಹಾಯಕರು ಸಿಗದೆ ರೈತರು ಕಂಗಾಲಾಗಿದ್ದಾರೆ. ಜನ ಬಂದ್ರೆ ಬಂದ್ರು.. ಇಲ್ಲಾಂದ್ರೆ ಇಲ್ಲ. ಅದ್ರಲ್ಲೂ ಭತ್ತದ ನಾಟಿಗೆ ಜನ ಸಿಗೋದೆ ಅಪರೂಪವಾಗಿದೆ. ಆದರೆ ಇಲ್ಲಿ ಒಂದೇ ಗದ್ದೆಯಲ್ಲಿ ಸಾವಿರಾರು ಮಂದಿ ಸಾಂಪ್ರದಾಯಿಕ ಶೈಲಿಯಲ್ಲಿ ನಾಟಿಗೆ ಇಳಿದಿದ್ದಾರೆ. ಈ ಅಪರೂಪದ ಸನ್ನಿವೇಶ ಇಲ್ಲಿದೆ..

 

ಗದ್ದೆ ನಾಟಿ ವಿಡಿಯೋ :

ಈ ಬಾರಿ ತಡವಾಗಿಯಾದರು ಮುಂಗಾರು ಮಲೆನಾಡು, ಕರಾವಳಿಯಲ್ಲಿ ಭರ್ಜರಿಯಾಗಿ ಆಗಿದೆ. ಇದೇ ಸಂಭ್ರಮದಲ್ಲಿ ಭತ್ತ ನಾಟಿಗೆ ರೈತರು ಮುಂದಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಗ್ರಾಮದಲ್ಲಿ ಉಚಿತ ಸಾಮೂಹಿಕ ಗದ್ದೆ ನಾಟಿ ಮಾಡಲಾಯಿತು.  ಈಗಷ್ಟೇ ಮಳೆಯಲ್ಲಿ ನೆನೆದ ಗಿಡಮರಗಳು, ಉಳುಮೆ ಮಾಡಿ ಹಸಿ ಹಸಿಯಾದ ಕೆಸರು ಗದ್ದೆ. ಕೈಯಲ್ಲಿ ಭತ್ತದ ಸಸಿ ಹಿಡಿದು ಒಂದೇ ಗದ್ದೆಯಲ್ಲಿ ಕೆಸರು ಕಾಲಲ್ಲಿ ಸಾಲಾಗಿ ಸಾವಿರಾರು ಮಹಿಳೆಯರು ನಾಟಿ ಮಾಡುತ್ತಿದ್ದಾರೆ.

ಹೊರನಾಡಿನ ದೊಡ್ಮನೆಯ ರಾಜೇಂದ್ರ ಹೆಗ್ಗಡೆಯವರ ದೇವರಗದ್ದೆಯಲ್ಲಿ ಜನಪದ ಗೀತೆ ಹಾಡುತ್ತಾ ಸಾಮೂಹಿಕ ನಾಟಿ ನಡೆಯಿತು. ಒಂದೇ ಗದ್ದೆಯಲ್ಲಿ ಸುಮಾರು 1000 ಜನರಿಂದ ನಾಟಿ ಕಾರ್ಯವು ಸಾಂಪ್ರಾದಾಯಿಕ ಶೈಲಿಯಲ್ಲಿ ಜನಪದ ಗೀತೆ ಹಾಡುತ್ತಾ ಗದ್ದೆ ನಾಟಿ ಮಾಡಿದರು. ಮೂಡಿಗೆರೆ, ಬೇಲೂರು, ಜಯಪುರ, ಕೊಪ್ಪ, ಶೃಂಗೇರಿ, ಬಲಿಗೆ, ಬಸರೀಕಟ್ಟೆಯಿಂದಲು ನೂರಾರು ಜನರು ನಾಟಿ ಮಾಡಲೆಂದು ಆಗಮಿಸಿದ್ದರು. ಎಲ್ಲರೂ ಬಂದು ಉಚಿತವಾಗಿ ಸಾಂಪ್ರದಾಯಿಕ ಶೈಲಿಯಲ್ಲಿ ನಾಟಿ ಮಾಡಿ ಸಂಭ್ರಮಿಸಿದರು. ಇಲ್ಲಿ ನಾಟಿ ಮಾಡಿದ ಬಳಿಕವೇ ತಮ್ಮ ಗದ್ದೆಯಲ್ಲಿ ರೈತರು ನಾಟಿ ಮಾಡೋದು ಇಲ್ಲಿನ ವಿಶೇಷ. ಹಾಗಾಗಿ ಈ ಊರಿನ ಸುತ್ತಮುತ್ತಲ ರೈತರು ಮೊದಲು ಇಲ್ಲಿ ಬಂದು ನಾಟಿ ಕಾರ್ಯ ಮಾಡುತ್ತಾರೆ. ನಂತರ ತಮ್ಮ ತಮ್ಮ ಹೊಲದ ಕೆಲಸ ಆರಂಭಿಸುತ್ತಾರೆ. ಇದು ಅನಾದಿ ಕಾಲದಿಂದ ನಡೆದುಕೊಂಡು ಬಂದ ಪದ್ಧತಿ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ನೇಪಾಳದಿಂದ ಭಾರತೀಯ ಮಾವಿನ ಹಣ್ಣಿಗೆ ನಿರ್ಬಂಧ – ಕೀಟನಾಶಕ ಅಂಶಗಳು ಪತ್ತೆ ಹಿನ್ನೆಲೆ ಕ್ರಮ

ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…

3 minutes ago

ಅಡಿಕೆ ಹಳದಿ ಎಲೆ, ಎಲೆ ಚುಕ್ಕಿ ರೋಗಕ್ಕೆ ತುರ್ತು ಪರಿಹಾರಕ್ಕೆ ಒತ್ತಾಯ – ಕೇಂದ್ರ ಕೃಷಿ ಸಚಿವರಿಗೆ ಸಂಸದ ಬ್ರಿಜೇಶ್ ಚೌಟ ಮನವಿ

ಅಡಿಕೆಗೆ ವ್ಯಾಪಕವಾಗಿ ಹರಡಿರುವ ಹಳದಿ ಎಲೆ ಹಾಗೂ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ…

27 minutes ago

ಅಡಿಕೆ ಆಮದು ಬೆಲೆ ಹೆಚ್ಚಳಕ್ಕೆ ಒತ್ತಾಯ – ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಭೇಟಿ ಮಾಡಿದ ನಿಯೋಗ

ಅಡಿಕೆಯ ಕನಿಷ್ಠ ಆಮದು ಬೆಲೆ ಹೆಚ್ಚಳ ಹಾಗೂ ಅಕ್ರಮ ಆಮದು ತಡೆಗೆ ಕ್ರಮ…

36 minutes ago

ಹವಾಮಾನ ವರದಿ | 09-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗುತ್ತಿದೆಯೇ..? – ಜೂನ್ 15 ಬಳಿಕ ಹಲವು ಭಾಗಗಳಲ್ಲಿ ಮಳೆ ಇಳಿಮುಖ ಸಾಧ್ಯತೆ

ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…

10 hours ago

ಭಾರತದಲ್ಲಿ ಬಯೋ-ಕಾಂಪೋಸಿಟ್ ಕ್ರಾಂತಿ – ಅರಣ್ಯ ನಾಶವಿಲ್ಲದೇ ಕಟ್ಟಡ ನಿರ್ಮಾಣಕ್ಕೆ ಹೊಸ ದಾರಿ

ಕೃಷಿ ತ್ಯಾಜ್ಯ ಮತ್ತು ನೈಸರ್ಗಿಕ ನಾರುಗಳಿಂದ ತಯಾರಾಗುವ ಬಯೋ-ಕಾಂಪೋಸಿಟ್ ಉತ್ಪನ್ನಗಳು ಮರದ ಪರ್ಯಾಯವಾಗಿ…

12 hours ago

ಅಡಿಕೆಯಿಂದ ಸಾಂಸ್ಕೃತಿಕ ಉದ್ಯಮದವರೆಗೆ – ವಿಯೆಟ್ನಾಂನ ಹೊಸ ಪ್ರಯೋಗ ರೈತರಿಗೆ ಮಾದರಿಯಾಗಬಹುದೇ..?

ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ…

16 hours ago