ಇತ್ತೀಚಿನ ದಿನಗಳಲ್ಲಿ ಬಹುಕಷ್ಟದ ಕೆಲಸ ಅಂದ್ರೆ ಕೃಷಿಗೆ ಸಹಾಯಕರು ಸಿಗೋದು. ಜಮೀನು ಕೆಲಸಕ್ಕೆ ಸಹಾಯಕರು ಸಿಗದೆ ರೈತರು ಕಂಗಾಲಾಗಿದ್ದಾರೆ. ಜನ ಬಂದ್ರೆ ಬಂದ್ರು.. ಇಲ್ಲಾಂದ್ರೆ ಇಲ್ಲ. ಅದ್ರಲ್ಲೂ ಭತ್ತದ ನಾಟಿಗೆ ಜನ ಸಿಗೋದೆ ಅಪರೂಪವಾಗಿದೆ. ಆದರೆ ಇಲ್ಲಿ ಒಂದೇ ಗದ್ದೆಯಲ್ಲಿ ಸಾವಿರಾರು ಮಂದಿ ಸಾಂಪ್ರದಾಯಿಕ ಶೈಲಿಯಲ್ಲಿ ನಾಟಿಗೆ ಇಳಿದಿದ್ದಾರೆ. ಈ ಅಪರೂಪದ ಸನ್ನಿವೇಶ ಇಲ್ಲಿದೆ..
ಗದ್ದೆ ನಾಟಿ ವಿಡಿಯೋ :
ಈ ಬಾರಿ ತಡವಾಗಿಯಾದರು ಮುಂಗಾರು ಮಲೆನಾಡು, ಕರಾವಳಿಯಲ್ಲಿ ಭರ್ಜರಿಯಾಗಿ ಆಗಿದೆ. ಇದೇ ಸಂಭ್ರಮದಲ್ಲಿ ಭತ್ತ ನಾಟಿಗೆ ರೈತರು ಮುಂದಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಗ್ರಾಮದಲ್ಲಿ ಉಚಿತ ಸಾಮೂಹಿಕ ಗದ್ದೆ ನಾಟಿ ಮಾಡಲಾಯಿತು. ಈಗಷ್ಟೇ ಮಳೆಯಲ್ಲಿ ನೆನೆದ ಗಿಡಮರಗಳು, ಉಳುಮೆ ಮಾಡಿ ಹಸಿ ಹಸಿಯಾದ ಕೆಸರು ಗದ್ದೆ. ಕೈಯಲ್ಲಿ ಭತ್ತದ ಸಸಿ ಹಿಡಿದು ಒಂದೇ ಗದ್ದೆಯಲ್ಲಿ ಕೆಸರು ಕಾಲಲ್ಲಿ ಸಾಲಾಗಿ ಸಾವಿರಾರು ಮಹಿಳೆಯರು ನಾಟಿ ಮಾಡುತ್ತಿದ್ದಾರೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…