Advertisement
ಕೃಷಿ

#Paddy | ಆಧುನಿಕ ಯುಗದಲ್ಲೂ ಸಂಪ್ರದಾಯ ಬಿಡದ ಊರ ಜನ | ಒಂದೇ ಗದ್ದೆಯಲ್ಲಿ ಸಾವಿರಾರು ಮಂದಿಯಿಂದ ಭತ್ತ ನಾಟಿ |

Share

ಇತ್ತೀಚಿನ ದಿನಗಳಲ್ಲಿ ಬಹುಕಷ್ಟದ ಕೆಲಸ ಅಂದ್ರೆ  ಕೃಷಿಗೆ ಸಹಾಯಕರು ಸಿಗೋದು. ಜಮೀನು ಕೆಲಸಕ್ಕೆ ಸಹಾಯಕರು ಸಿಗದೆ ರೈತರು ಕಂಗಾಲಾಗಿದ್ದಾರೆ. ಜನ ಬಂದ್ರೆ ಬಂದ್ರು.. ಇಲ್ಲಾಂದ್ರೆ ಇಲ್ಲ. ಅದ್ರಲ್ಲೂ ಭತ್ತದ ನಾಟಿಗೆ ಜನ ಸಿಗೋದೆ ಅಪರೂಪವಾಗಿದೆ. ಆದರೆ ಇಲ್ಲಿ ಒಂದೇ ಗದ್ದೆಯಲ್ಲಿ ಸಾವಿರಾರು ಮಂದಿ ಸಾಂಪ್ರದಾಯಿಕ ಶೈಲಿಯಲ್ಲಿ ನಾಟಿಗೆ ಇಳಿದಿದ್ದಾರೆ. ಈ ಅಪರೂಪದ ಸನ್ನಿವೇಶ ಇಲ್ಲಿದೆ..

 

ಗದ್ದೆ ನಾಟಿ ವಿಡಿಯೋ :

ಈ ಬಾರಿ ತಡವಾಗಿಯಾದರು ಮುಂಗಾರು ಮಲೆನಾಡು, ಕರಾವಳಿಯಲ್ಲಿ ಭರ್ಜರಿಯಾಗಿ ಆಗಿದೆ. ಇದೇ ಸಂಭ್ರಮದಲ್ಲಿ ಭತ್ತ ನಾಟಿಗೆ ರೈತರು ಮುಂದಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಗ್ರಾಮದಲ್ಲಿ ಉಚಿತ ಸಾಮೂಹಿಕ ಗದ್ದೆ ನಾಟಿ ಮಾಡಲಾಯಿತು.  ಈಗಷ್ಟೇ ಮಳೆಯಲ್ಲಿ ನೆನೆದ ಗಿಡಮರಗಳು, ಉಳುಮೆ ಮಾಡಿ ಹಸಿ ಹಸಿಯಾದ ಕೆಸರು ಗದ್ದೆ. ಕೈಯಲ್ಲಿ ಭತ್ತದ ಸಸಿ ಹಿಡಿದು ಒಂದೇ ಗದ್ದೆಯಲ್ಲಿ ಕೆಸರು ಕಾಲಲ್ಲಿ ಸಾಲಾಗಿ ಸಾವಿರಾರು ಮಹಿಳೆಯರು ನಾಟಿ ಮಾಡುತ್ತಿದ್ದಾರೆ.

ಹೊರನಾಡಿನ ದೊಡ್ಮನೆಯ ರಾಜೇಂದ್ರ ಹೆಗ್ಗಡೆಯವರ ದೇವರಗದ್ದೆಯಲ್ಲಿ ಜನಪದ ಗೀತೆ ಹಾಡುತ್ತಾ ಸಾಮೂಹಿಕ ನಾಟಿ ನಡೆಯಿತು. ಒಂದೇ ಗದ್ದೆಯಲ್ಲಿ ಸುಮಾರು 1000 ಜನರಿಂದ ನಾಟಿ ಕಾರ್ಯವು ಸಾಂಪ್ರಾದಾಯಿಕ ಶೈಲಿಯಲ್ಲಿ ಜನಪದ ಗೀತೆ ಹಾಡುತ್ತಾ ಗದ್ದೆ ನಾಟಿ ಮಾಡಿದರು. ಮೂಡಿಗೆರೆ, ಬೇಲೂರು, ಜಯಪುರ, ಕೊಪ್ಪ, ಶೃಂಗೇರಿ, ಬಲಿಗೆ, ಬಸರೀಕಟ್ಟೆಯಿಂದಲು ನೂರಾರು ಜನರು ನಾಟಿ ಮಾಡಲೆಂದು ಆಗಮಿಸಿದ್ದರು. ಎಲ್ಲರೂ ಬಂದು ಉಚಿತವಾಗಿ ಸಾಂಪ್ರದಾಯಿಕ ಶೈಲಿಯಲ್ಲಿ ನಾಟಿ ಮಾಡಿ ಸಂಭ್ರಮಿಸಿದರು. ಇಲ್ಲಿ ನಾಟಿ ಮಾಡಿದ ಬಳಿಕವೇ ತಮ್ಮ ಗದ್ದೆಯಲ್ಲಿ ರೈತರು ನಾಟಿ ಮಾಡೋದು ಇಲ್ಲಿನ ವಿಶೇಷ. ಹಾಗಾಗಿ ಈ ಊರಿನ ಸುತ್ತಮುತ್ತಲ ರೈತರು ಮೊದಲು ಇಲ್ಲಿ ಬಂದು ನಾಟಿ ಕಾರ್ಯ ಮಾಡುತ್ತಾರೆ. ನಂತರ ತಮ್ಮ ತಮ್ಮ ಹೊಲದ ಕೆಲಸ ಆರಂಭಿಸುತ್ತಾರೆ. ಇದು ಅನಾದಿ ಕಾಲದಿಂದ ನಡೆದುಕೊಂಡು ಬಂದ ಪದ್ಧತಿ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

6 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

24 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

2 days ago