ಇತ್ತೀಚಿನ ದಿನಗಳಲ್ಲಿ ಬಹುಕಷ್ಟದ ಕೆಲಸ ಅಂದ್ರೆ ಕೃಷಿಗೆ ಸಹಾಯಕರು ಸಿಗೋದು. ಜಮೀನು ಕೆಲಸಕ್ಕೆ ಸಹಾಯಕರು ಸಿಗದೆ ರೈತರು ಕಂಗಾಲಾಗಿದ್ದಾರೆ. ಜನ ಬಂದ್ರೆ ಬಂದ್ರು.. ಇಲ್ಲಾಂದ್ರೆ ಇಲ್ಲ. ಅದ್ರಲ್ಲೂ ಭತ್ತದ ನಾಟಿಗೆ ಜನ ಸಿಗೋದೆ ಅಪರೂಪವಾಗಿದೆ. ಆದರೆ ಇಲ್ಲಿ ಒಂದೇ ಗದ್ದೆಯಲ್ಲಿ ಸಾವಿರಾರು ಮಂದಿ ಸಾಂಪ್ರದಾಯಿಕ ಶೈಲಿಯಲ್ಲಿ ನಾಟಿಗೆ ಇಳಿದಿದ್ದಾರೆ. ಈ ಅಪರೂಪದ ಸನ್ನಿವೇಶ ಇಲ್ಲಿದೆ..
ಗದ್ದೆ ನಾಟಿ ವಿಡಿಯೋ :
ಈ ಬಾರಿ ತಡವಾಗಿಯಾದರು ಮುಂಗಾರು ಮಲೆನಾಡು, ಕರಾವಳಿಯಲ್ಲಿ ಭರ್ಜರಿಯಾಗಿ ಆಗಿದೆ. ಇದೇ ಸಂಭ್ರಮದಲ್ಲಿ ಭತ್ತ ನಾಟಿಗೆ ರೈತರು ಮುಂದಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಗ್ರಾಮದಲ್ಲಿ ಉಚಿತ ಸಾಮೂಹಿಕ ಗದ್ದೆ ನಾಟಿ ಮಾಡಲಾಯಿತು. ಈಗಷ್ಟೇ ಮಳೆಯಲ್ಲಿ ನೆನೆದ ಗಿಡಮರಗಳು, ಉಳುಮೆ ಮಾಡಿ ಹಸಿ ಹಸಿಯಾದ ಕೆಸರು ಗದ್ದೆ. ಕೈಯಲ್ಲಿ ಭತ್ತದ ಸಸಿ ಹಿಡಿದು ಒಂದೇ ಗದ್ದೆಯಲ್ಲಿ ಕೆಸರು ಕಾಲಲ್ಲಿ ಸಾಲಾಗಿ ಸಾವಿರಾರು ಮಹಿಳೆಯರು ನಾಟಿ ಮಾಡುತ್ತಿದ್ದಾರೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…