ಆಯುಧ ಪೂಜೆಯ ಹಿನ್ನೆಲೆಯಲ್ಲಿ ಹೂವು, ಹಣ್ಣು ಮತ್ತಿತರ ಅಗತ್ಯ ವಸ್ತುಗಳ ಖರೀದಿ ಜೋರಾಗಿದೆ ನಡೆದಿದೆ. ರಾಜ್ಯದ ಬಹುತೇಕ ಕಡೆಗಳಲ್ಲಿ ಆಯುಧ ಪೂಜೆಯು ಸಡಗರದಿಂದ ನಡೆಯುತ್ತದೆ. ನಗರ ಪ್ರದೇಶಗಳಲ್ಲಿ ಹೂವು ಸೇರಿದಂತೆ ಎಲ್ಲವೂ ದುಬಾರಿಯಾದರೆ ಗ್ರಾಮೀಣ ಭಾಗದಲ್ಲಿ ಸಾಮೂಹಿಕವಾದ ಆಚರಣೆಗಳು ನಡೆಯುತ್ತದೆ.
ಆಯುಧ ಪೂಜೆ ಹಾಗೂ ವಿಜಯದಶಮಿ ಆಚರಣೆ ನಡೆಸಲು ಬೆಂಗಳೂರಿನ ಕೆ ಆರ್ ಮಾರುಕಟ್ಟೆ, ಮಲ್ಲೇಶ್ವರ, ಯಶವಂತಪುರ, ವಿಜಯನಗರ, ಗಾಂಧಿಬಜಾರ್, ಜಯನಗರದಲ್ಲಿ ವ್ಯಾಪಾರ ವಹಿವಾಟು ಬಹಳ ಜೋರಾಗಿದೆ. ಹೂವು, ಹಣ್ಣು, ತರಕಾರಿ, ಬೂದುಗುಂಬಳ, ಬೆಲೆ ಬಹಳ ಹೆಚ್ಚಾಗಿದ್ದು ಜನರು ಅನಿವಾರ್ಯವಾಗಿ ಹೇಳಿದಷ್ಟು ಹಣ ನೀಡಿ ಕೊಂಡುಕೊಳ್ಳುತ್ತಿದ್ದಾರೆ. ಮಳೆ ಹಿನ್ನೆಲೆಯಲ್ಲಿ ಹೂವಿನ ದರ ಏರಿಕೆಯಾಗಿದೆ. ಕೆ.ಆರ್. ಮಾರುಕಟ್ಟೆಯಲ್ಲಿ ಸೇವಂತಿಗೆ ಹೂವು ಕೆ.ಜಿ.ಗೆ 150-300 ರೂ. ಚೆಂಡುಹೂವು ಕೆಜಿಗೆ 80 ರಿಂದ 120 ರೂ. ಕನಕಾಂಬರ 700 ರೂ. ಕಾಕಡ 700, ಮಲ್ಲಿಗೆ ಮೊಗ್ಗು 600 ರೂ. ಸುಗಂಧರಾಜ ಕೆಜಿ 500 ರೂಪಾಯಿಗೆ ತಲುಪಿದೆ. ಕಡ್ಲೆಪುರಿ ಲೀಟರ್ ಗೆ, 30/40 ರೂಪಾಯಿ , ಬಾಳೆಕಂಬ 100 ರೂಪಾಯಿ, ಮಾವಿನ ತೋರಣ 30 ರೂಪಾಯಿ, ವೀಳ್ಯದೆಲೆ 100 ರೂಪಾಯಿ, ಗರಿಕೆ ಕಟ್ಟು 30 ರುಪಾಯಿಗೆ ವ್ಯಾಪಾರ ನಡೆದಿದೆ.
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.