ಆಯುಧ ಪೂಜೆಯ ಹಿನ್ನೆಲೆಯಲ್ಲಿ ಹೂವು, ಹಣ್ಣು ಮತ್ತಿತರ ಅಗತ್ಯ ವಸ್ತುಗಳ ಖರೀದಿ ಜೋರಾಗಿದೆ ನಡೆದಿದೆ. ರಾಜ್ಯದ ಬಹುತೇಕ ಕಡೆಗಳಲ್ಲಿ ಆಯುಧ ಪೂಜೆಯು ಸಡಗರದಿಂದ ನಡೆಯುತ್ತದೆ. ನಗರ ಪ್ರದೇಶಗಳಲ್ಲಿ ಹೂವು ಸೇರಿದಂತೆ ಎಲ್ಲವೂ ದುಬಾರಿಯಾದರೆ ಗ್ರಾಮೀಣ ಭಾಗದಲ್ಲಿ ಸಾಮೂಹಿಕವಾದ ಆಚರಣೆಗಳು ನಡೆಯುತ್ತದೆ.
ಆಯುಧ ಪೂಜೆ ಹಾಗೂ ವಿಜಯದಶಮಿ ಆಚರಣೆ ನಡೆಸಲು ಬೆಂಗಳೂರಿನ ಕೆ ಆರ್ ಮಾರುಕಟ್ಟೆ, ಮಲ್ಲೇಶ್ವರ, ಯಶವಂತಪುರ, ವಿಜಯನಗರ, ಗಾಂಧಿಬಜಾರ್, ಜಯನಗರದಲ್ಲಿ ವ್ಯಾಪಾರ ವಹಿವಾಟು ಬಹಳ ಜೋರಾಗಿದೆ. ಹೂವು, ಹಣ್ಣು, ತರಕಾರಿ, ಬೂದುಗುಂಬಳ, ಬೆಲೆ ಬಹಳ ಹೆಚ್ಚಾಗಿದ್ದು ಜನರು ಅನಿವಾರ್ಯವಾಗಿ ಹೇಳಿದಷ್ಟು ಹಣ ನೀಡಿ ಕೊಂಡುಕೊಳ್ಳುತ್ತಿದ್ದಾರೆ. ಮಳೆ ಹಿನ್ನೆಲೆಯಲ್ಲಿ ಹೂವಿನ ದರ ಏರಿಕೆಯಾಗಿದೆ. ಕೆ.ಆರ್. ಮಾರುಕಟ್ಟೆಯಲ್ಲಿ ಸೇವಂತಿಗೆ ಹೂವು ಕೆ.ಜಿ.ಗೆ 150-300 ರೂ. ಚೆಂಡುಹೂವು ಕೆಜಿಗೆ 80 ರಿಂದ 120 ರೂ. ಕನಕಾಂಬರ 700 ರೂ. ಕಾಕಡ 700, ಮಲ್ಲಿಗೆ ಮೊಗ್ಗು 600 ರೂ. ಸುಗಂಧರಾಜ ಕೆಜಿ 500 ರೂಪಾಯಿಗೆ ತಲುಪಿದೆ. ಕಡ್ಲೆಪುರಿ ಲೀಟರ್ ಗೆ, 30/40 ರೂಪಾಯಿ , ಬಾಳೆಕಂಬ 100 ರೂಪಾಯಿ, ಮಾವಿನ ತೋರಣ 30 ರೂಪಾಯಿ, ವೀಳ್ಯದೆಲೆ 100 ರೂಪಾಯಿ, ಗರಿಕೆ ಕಟ್ಟು 30 ರುಪಾಯಿಗೆ ವ್ಯಾಪಾರ ನಡೆದಿದೆ.
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…
Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…
ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…