ಆಯುಧ ಪೂಜೆಯ ಹಿನ್ನೆಲೆಯಲ್ಲಿ ಹೂವು, ಹಣ್ಣು ಮತ್ತಿತರ ಅಗತ್ಯ ವಸ್ತುಗಳ ಖರೀದಿ ಜೋರಾಗಿದೆ ನಡೆದಿದೆ. ರಾಜ್ಯದ ಬಹುತೇಕ ಕಡೆಗಳಲ್ಲಿ ಆಯುಧ ಪೂಜೆಯು ಸಡಗರದಿಂದ ನಡೆಯುತ್ತದೆ. ನಗರ ಪ್ರದೇಶಗಳಲ್ಲಿ ಹೂವು ಸೇರಿದಂತೆ ಎಲ್ಲವೂ ದುಬಾರಿಯಾದರೆ ಗ್ರಾಮೀಣ ಭಾಗದಲ್ಲಿ ಸಾಮೂಹಿಕವಾದ ಆಚರಣೆಗಳು ನಡೆಯುತ್ತದೆ.
ಆಯುಧ ಪೂಜೆ ಹಾಗೂ ವಿಜಯದಶಮಿ ಆಚರಣೆ ನಡೆಸಲು ಬೆಂಗಳೂರಿನ ಕೆ ಆರ್ ಮಾರುಕಟ್ಟೆ, ಮಲ್ಲೇಶ್ವರ, ಯಶವಂತಪುರ, ವಿಜಯನಗರ, ಗಾಂಧಿಬಜಾರ್, ಜಯನಗರದಲ್ಲಿ ವ್ಯಾಪಾರ ವಹಿವಾಟು ಬಹಳ ಜೋರಾಗಿದೆ. ಹೂವು, ಹಣ್ಣು, ತರಕಾರಿ, ಬೂದುಗುಂಬಳ, ಬೆಲೆ ಬಹಳ ಹೆಚ್ಚಾಗಿದ್ದು ಜನರು ಅನಿವಾರ್ಯವಾಗಿ ಹೇಳಿದಷ್ಟು ಹಣ ನೀಡಿ ಕೊಂಡುಕೊಳ್ಳುತ್ತಿದ್ದಾರೆ. ಮಳೆ ಹಿನ್ನೆಲೆಯಲ್ಲಿ ಹೂವಿನ ದರ ಏರಿಕೆಯಾಗಿದೆ. ಕೆ.ಆರ್. ಮಾರುಕಟ್ಟೆಯಲ್ಲಿ ಸೇವಂತಿಗೆ ಹೂವು ಕೆ.ಜಿ.ಗೆ 150-300 ರೂ. ಚೆಂಡುಹೂವು ಕೆಜಿಗೆ 80 ರಿಂದ 120 ರೂ. ಕನಕಾಂಬರ 700 ರೂ. ಕಾಕಡ 700, ಮಲ್ಲಿಗೆ ಮೊಗ್ಗು 600 ರೂ. ಸುಗಂಧರಾಜ ಕೆಜಿ 500 ರೂಪಾಯಿಗೆ ತಲುಪಿದೆ. ಕಡ್ಲೆಪುರಿ ಲೀಟರ್ ಗೆ, 30/40 ರೂಪಾಯಿ , ಬಾಳೆಕಂಬ 100 ರೂಪಾಯಿ, ಮಾವಿನ ತೋರಣ 30 ರೂಪಾಯಿ, ವೀಳ್ಯದೆಲೆ 100 ರೂಪಾಯಿ, ಗರಿಕೆ ಕಟ್ಟು 30 ರುಪಾಯಿಗೆ ವ್ಯಾಪಾರ ನಡೆದಿದೆ.
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…