ಆಯುಧ ಪೂಜೆಯ ಹಿನ್ನೆಲೆಯಲ್ಲಿ ಹೂವು, ಹಣ್ಣು ಮತ್ತಿತರ ಅಗತ್ಯ ವಸ್ತುಗಳ ಖರೀದಿ ಜೋರಾಗಿದೆ ನಡೆದಿದೆ. ರಾಜ್ಯದ ಬಹುತೇಕ ಕಡೆಗಳಲ್ಲಿ ಆಯುಧ ಪೂಜೆಯು ಸಡಗರದಿಂದ ನಡೆಯುತ್ತದೆ. ನಗರ ಪ್ರದೇಶಗಳಲ್ಲಿ ಹೂವು ಸೇರಿದಂತೆ ಎಲ್ಲವೂ ದುಬಾರಿಯಾದರೆ ಗ್ರಾಮೀಣ ಭಾಗದಲ್ಲಿ ಸಾಮೂಹಿಕವಾದ ಆಚರಣೆಗಳು ನಡೆಯುತ್ತದೆ.
ಆಯುಧ ಪೂಜೆ ಹಾಗೂ ವಿಜಯದಶಮಿ ಆಚರಣೆ ನಡೆಸಲು ಬೆಂಗಳೂರಿನ ಕೆ ಆರ್ ಮಾರುಕಟ್ಟೆ, ಮಲ್ಲೇಶ್ವರ, ಯಶವಂತಪುರ, ವಿಜಯನಗರ, ಗಾಂಧಿಬಜಾರ್, ಜಯನಗರದಲ್ಲಿ ವ್ಯಾಪಾರ ವಹಿವಾಟು ಬಹಳ ಜೋರಾಗಿದೆ. ಹೂವು, ಹಣ್ಣು, ತರಕಾರಿ, ಬೂದುಗುಂಬಳ, ಬೆಲೆ ಬಹಳ ಹೆಚ್ಚಾಗಿದ್ದು ಜನರು ಅನಿವಾರ್ಯವಾಗಿ ಹೇಳಿದಷ್ಟು ಹಣ ನೀಡಿ ಕೊಂಡುಕೊಳ್ಳುತ್ತಿದ್ದಾರೆ. ಮಳೆ ಹಿನ್ನೆಲೆಯಲ್ಲಿ ಹೂವಿನ ದರ ಏರಿಕೆಯಾಗಿದೆ. ಕೆ.ಆರ್. ಮಾರುಕಟ್ಟೆಯಲ್ಲಿ ಸೇವಂತಿಗೆ ಹೂವು ಕೆ.ಜಿ.ಗೆ 150-300 ರೂ. ಚೆಂಡುಹೂವು ಕೆಜಿಗೆ 80 ರಿಂದ 120 ರೂ. ಕನಕಾಂಬರ 700 ರೂ. ಕಾಕಡ 700, ಮಲ್ಲಿಗೆ ಮೊಗ್ಗು 600 ರೂ. ಸುಗಂಧರಾಜ ಕೆಜಿ 500 ರೂಪಾಯಿಗೆ ತಲುಪಿದೆ. ಕಡ್ಲೆಪುರಿ ಲೀಟರ್ ಗೆ, 30/40 ರೂಪಾಯಿ , ಬಾಳೆಕಂಬ 100 ರೂಪಾಯಿ, ಮಾವಿನ ತೋರಣ 30 ರೂಪಾಯಿ, ವೀಳ್ಯದೆಲೆ 100 ರೂಪಾಯಿ, ಗರಿಕೆ ಕಟ್ಟು 30 ರುಪಾಯಿಗೆ ವ್ಯಾಪಾರ ನಡೆದಿದೆ.
ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…