ಆಯುಧ ಪೂಜೆಯ ಹಿನ್ನೆಲೆಯಲ್ಲಿ ಹೂವು, ಹಣ್ಣು ಮತ್ತಿತರ ಅಗತ್ಯ ವಸ್ತುಗಳ ಖರೀದಿ ಜೋರಾಗಿದೆ ನಡೆದಿದೆ. ರಾಜ್ಯದ ಬಹುತೇಕ ಕಡೆಗಳಲ್ಲಿ ಆಯುಧ ಪೂಜೆಯು ಸಡಗರದಿಂದ ನಡೆಯುತ್ತದೆ. ನಗರ ಪ್ರದೇಶಗಳಲ್ಲಿ ಹೂವು ಸೇರಿದಂತೆ ಎಲ್ಲವೂ ದುಬಾರಿಯಾದರೆ ಗ್ರಾಮೀಣ ಭಾಗದಲ್ಲಿ ಸಾಮೂಹಿಕವಾದ ಆಚರಣೆಗಳು ನಡೆಯುತ್ತದೆ.
ಆಯುಧ ಪೂಜೆ ಹಾಗೂ ವಿಜಯದಶಮಿ ಆಚರಣೆ ನಡೆಸಲು ಬೆಂಗಳೂರಿನ ಕೆ ಆರ್ ಮಾರುಕಟ್ಟೆ, ಮಲ್ಲೇಶ್ವರ, ಯಶವಂತಪುರ, ವಿಜಯನಗರ, ಗಾಂಧಿಬಜಾರ್, ಜಯನಗರದಲ್ಲಿ ವ್ಯಾಪಾರ ವಹಿವಾಟು ಬಹಳ ಜೋರಾಗಿದೆ. ಹೂವು, ಹಣ್ಣು, ತರಕಾರಿ, ಬೂದುಗುಂಬಳ, ಬೆಲೆ ಬಹಳ ಹೆಚ್ಚಾಗಿದ್ದು ಜನರು ಅನಿವಾರ್ಯವಾಗಿ ಹೇಳಿದಷ್ಟು ಹಣ ನೀಡಿ ಕೊಂಡುಕೊಳ್ಳುತ್ತಿದ್ದಾರೆ. ಮಳೆ ಹಿನ್ನೆಲೆಯಲ್ಲಿ ಹೂವಿನ ದರ ಏರಿಕೆಯಾಗಿದೆ. ಕೆ.ಆರ್. ಮಾರುಕಟ್ಟೆಯಲ್ಲಿ ಸೇವಂತಿಗೆ ಹೂವು ಕೆ.ಜಿ.ಗೆ 150-300 ರೂ. ಚೆಂಡುಹೂವು ಕೆಜಿಗೆ 80 ರಿಂದ 120 ರೂ. ಕನಕಾಂಬರ 700 ರೂ. ಕಾಕಡ 700, ಮಲ್ಲಿಗೆ ಮೊಗ್ಗು 600 ರೂ. ಸುಗಂಧರಾಜ ಕೆಜಿ 500 ರೂಪಾಯಿಗೆ ತಲುಪಿದೆ. ಕಡ್ಲೆಪುರಿ ಲೀಟರ್ ಗೆ, 30/40 ರೂಪಾಯಿ , ಬಾಳೆಕಂಬ 100 ರೂಪಾಯಿ, ಮಾವಿನ ತೋರಣ 30 ರೂಪಾಯಿ, ವೀಳ್ಯದೆಲೆ 100 ರೂಪಾಯಿ, ಗರಿಕೆ ಕಟ್ಟು 30 ರುಪಾಯಿಗೆ ವ್ಯಾಪಾರ ನಡೆದಿದೆ.
ಕರ್ನಾಟಕ–ತಮಿಳುನಾಡು ಗಡಿಯಲ್ಲಿ ಆನೆಗಳ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ತಮಿಳುನಾಡು ಮೂರು ಹೊಸ ಆನೆ…
ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿ ಭಾಗದಲ್ಲಿ ಮಧ್ಯಮ ಸ್ತರದ ತಿರುವಿಕೆ ಉಂಟಾಗಿದ್ದು, ಇದರ ಪ್ರಭಾವದಿಂದ…
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…
ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…
ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…