ಆಯುಧ ಪೂಜೆಯ ಹಿನ್ನೆಲೆಯಲ್ಲಿ ಹೂವು, ಹಣ್ಣು ಮತ್ತಿತರ ಅಗತ್ಯ ವಸ್ತುಗಳ ಖರೀದಿ ಜೋರಾಗಿದೆ ನಡೆದಿದೆ. ರಾಜ್ಯದ ಬಹುತೇಕ ಕಡೆಗಳಲ್ಲಿ ಆಯುಧ ಪೂಜೆಯು ಸಡಗರದಿಂದ ನಡೆಯುತ್ತದೆ. ನಗರ ಪ್ರದೇಶಗಳಲ್ಲಿ ಹೂವು ಸೇರಿದಂತೆ ಎಲ್ಲವೂ ದುಬಾರಿಯಾದರೆ ಗ್ರಾಮೀಣ ಭಾಗದಲ್ಲಿ ಸಾಮೂಹಿಕವಾದ ಆಚರಣೆಗಳು ನಡೆಯುತ್ತದೆ.
ಆಯುಧ ಪೂಜೆ ಹಾಗೂ ವಿಜಯದಶಮಿ ಆಚರಣೆ ನಡೆಸಲು ಬೆಂಗಳೂರಿನ ಕೆ ಆರ್ ಮಾರುಕಟ್ಟೆ, ಮಲ್ಲೇಶ್ವರ, ಯಶವಂತಪುರ, ವಿಜಯನಗರ, ಗಾಂಧಿಬಜಾರ್, ಜಯನಗರದಲ್ಲಿ ವ್ಯಾಪಾರ ವಹಿವಾಟು ಬಹಳ ಜೋರಾಗಿದೆ. ಹೂವು, ಹಣ್ಣು, ತರಕಾರಿ, ಬೂದುಗುಂಬಳ, ಬೆಲೆ ಬಹಳ ಹೆಚ್ಚಾಗಿದ್ದು ಜನರು ಅನಿವಾರ್ಯವಾಗಿ ಹೇಳಿದಷ್ಟು ಹಣ ನೀಡಿ ಕೊಂಡುಕೊಳ್ಳುತ್ತಿದ್ದಾರೆ. ಮಳೆ ಹಿನ್ನೆಲೆಯಲ್ಲಿ ಹೂವಿನ ದರ ಏರಿಕೆಯಾಗಿದೆ. ಕೆ.ಆರ್. ಮಾರುಕಟ್ಟೆಯಲ್ಲಿ ಸೇವಂತಿಗೆ ಹೂವು ಕೆ.ಜಿ.ಗೆ 150-300 ರೂ. ಚೆಂಡುಹೂವು ಕೆಜಿಗೆ 80 ರಿಂದ 120 ರೂ. ಕನಕಾಂಬರ 700 ರೂ. ಕಾಕಡ 700, ಮಲ್ಲಿಗೆ ಮೊಗ್ಗು 600 ರೂ. ಸುಗಂಧರಾಜ ಕೆಜಿ 500 ರೂಪಾಯಿಗೆ ತಲುಪಿದೆ. ಕಡ್ಲೆಪುರಿ ಲೀಟರ್ ಗೆ, 30/40 ರೂಪಾಯಿ , ಬಾಳೆಕಂಬ 100 ರೂಪಾಯಿ, ಮಾವಿನ ತೋರಣ 30 ರೂಪಾಯಿ, ವೀಳ್ಯದೆಲೆ 100 ರೂಪಾಯಿ, ಗರಿಕೆ ಕಟ್ಟು 30 ರುಪಾಯಿಗೆ ವ್ಯಾಪಾರ ನಡೆದಿದೆ.
ಸಿರಿಧಾನ್ಯಗಳ ಬೇಡಿಕೆ ಹೆಚ್ಚಿದರೂ, ರೈತರಿಗೆ ಅದರ ಸಂಪೂರ್ಣ ಆರ್ಥಿಕ ಲಾಭ ಇನ್ನೂ ತಲುಪಿಲ್ಲ…
ಚಂಡಮಾರುತದ ಗಾಳಿಗೆ ಮುರಿಯದೆ ಬಾಗಿಕೊಂಡು ಉಳಿಯುವ ಮೊಹಿತ್ನಗರ ಅಡಿಕೆ ತಳಿಗೆ ಒಡಿಶಾ ಸೇರಿದಂತೆ…
ಭಾರೀ ಮಳೆಯ ಹಿನ್ನೆಲೆಯಲ್ಲಿ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಶಾಲಾ-ಕಾಲೇಜುಗಳಿಗೆ…
ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ಪ್ರಮುಖ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ನಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಬಳಸದಂತೆ…
ಮಂಗಳೂರು, ಉಡುಪಿ ಹಾಗೂ ಪುತ್ತೂರಿನಲ್ಲಿ ವಿವಿಧ ಹುದ್ದೆಗಳಿಗೆ ಒಟ್ಟು 22 ಉದ್ಯೋಗಾವಕಾಶಗಳಿದ್ದು, ಆಗಸ್ಟ್…
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…