Advertisement
MIRROR FOCUS

#Tomato Price| ದಿಢೀರ್ ಪಾತಾಳಕ್ಕೆ ಕುಸಿದ ಟೊಮೆಟೊ ದರ : ಗಗನಕ್ಕೇರಿದ್ದ ಟೊಮೆಟೋ ಬೆಲೆ ಈಗ ಎಷ್ಟಿದೆ?

Share

ಒಂದೆರಡು ತಿಂಗಳು ರೈತನ ಜೇಬು ತುಂಬಿಸಿ, ಗ್ರಾಹಕ ಜೇಬಿಗೆ ಕತ್ತರಿ ಹಾಕಿದ್ದ ಟೊಮೆಟೋ ಬೆಲೆ, ಇದೀಗ ಉಲ್ಟಾ ಆಗಿದೆ. ಗಗನಕ್ಕೇರಿದ ಟೊಮೆಟೋ ಬೆಲೆ ಈಗ ಪಾತಾಳಕ್ಕೆ ಕುಸಿದಿದೆ. ರೈತ ಬೇಜಾರು ಮಾಡಿಕೊಂಡ್ರೆ ಗ್ರಾಹಕ ನಿರಾಳನಾಗಿದ್ದಾನೆ.

ಕಳೆದೊಂದು ತಿಂಗಳಲ್ಲಿ 2700 ರೂಪಾಯಿ ವರೆಗೆ ಏರಿಕೆ‌‌ ಕಂಡಿದ್ದ ಟೊಮೆಟೊ ಬೆಲೆ ಈಗ ಕುಸಿದಿದೆ. ಉತ್ತರ ಭಾರತ ಹಾಗೂ ಹೊರ ರಾಜ್ಯಗಳಿಂದ ಟೊಮೆಟೊ ಬೇಡಿಕೆ ಕಡಿಮೆಯಾಗಿದೆ. ಸ್ಥಳೀಯವಾಗಿ ಎಪಿಎಂಸಿ ಮಾರುಕಟ್ಟೆಗೆ ಟೊಮೆಟೊ ಪೂರೈಕೆ ಹೆಚ್ಚಾದ ಹಿನ್ನಲೆ ಟೊಮೆಟೊ ಬೆಲೆ ಕುಸಿದಿದೆ. ಒಂದು ಕೆಜಿ ಟೊಮೆಟೊ 15- 25 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ.

ಒಂದು ತಿಂಗಳ ಹಿಂದೆ ಬೆಲೆಯನ್ನು ಗಗನಕ್ಕೇರಿ ರೈತರ ಬಾಳು ಹಸನಾಗಿಸಿದ್ದ ಟೊಮೆಟೊ ಸದ್ಯ ಪಾತಾಳಕ್ಕೆ ಕುಸಿದಿದೆ. ಕೋಲಾರ ಎಪಿಎಂಸಿಯಲ್ಲಿ ಟೊಮೆಟೊ ಬೆಲೆ‌ ಮತ್ತಷ್ಟು ಕುಸಿದಿದೆ. ಹದಿನೈದು ಕೆಜಿ ಬಾಕ್ಸ್ ಟೊಮೆಟೊ ಕೇವಲ 200- 400 ರೂಪಾಯಿಗೆ ಹರಾಜಾಗುತ್ತಿದೆ. ಒಂದು ಕೆಜಿ ಟೊಮೆಟೊ 15- 25 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ.

ಕಳೆದೊಂದು ತಿಂಗಳಲ್ಲಿ 2700 ರೂಪಾಯಿ ವರೆಗೆ ಏರಿಕೆ‌‌ ಕಂಡಿದ್ದ ಟೊಮೆಟೊ ಬೆಲೆ ಈಗ ಕುಸಿದಿದೆ. ಉತ್ತರ ಭಾರತ ಹಾಗೂ ಹೊರ ರಾಜ್ಯಗಳಿಂದ ಟೊಮೆಟೊ ಬೇಡಿಕೆ ಕಡಿಮೆಯಾಗಿದೆ. ಸ್ಥಳೀಯವಾಗಿ ಎಪಿಎಂಸಿ ಮಾರುಕಟ್ಟೆಗೆ ಟೊಮೆಟೊ ಪೂರೈಕೆ ಹೆಚ್ಚಾದ ಹಿನ್ನಲೆ ಟೊಮೆಟೊ ಬೆಲೆ ಕುಸಿದಿದೆ. ಮೂರು ತಿಂಗಳಿಂದ ಗ್ರಾಹಕರ ಜೇಬಿಗೆ ಕತ್ತರಿ ಹಾಕಿದ್ದ, ನೂರಾರು ಜನ ರೈತರ ಅದೃಷ್ಟವನ್ನೇ ಬದಲಿಸಿದ್ದ ಟೊಮೆಟೊ ಬೆಲೆ ಕುಸಿತದಿಂದ ಗ್ರಾಹಕರು ನಿಟ್ಟುಸಿರು ಬಿಟ್ಟಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

3 hours ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

14 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

19 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

1 day ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

1 day ago