Advertisement
MIRROR FOCUS

ಅಡಿಕೆ ಬೆಳೆ ಸಮಸ್ಯೆ ನಮ್ಮಲ್ಲಿ ಮಾತ್ರವಲ್ಲ.. ಭೂತಾನ್‌ನಲ್ಲೂ ಇದೆ..! ಕಳೆದ 3 ವರ್ಷಗಳಿಂದ ಅಲ್ಲಿ ಏನಾಗುತ್ತಿದೆ..?

Share

ಅಡಿಕೆ ಬೆಳೆಯುವ ನಾಡುಗಳಲ್ಲಿ ಈಗ ವಿವಿಧ ರೋಗಗಳದ್ದೇ ಚರ್ಚೆ. ಎಲೆಚುಕ್ಕಿ, ಹಳದಿ ಎಲೆರೋಗ ಸೇರಿದಂತೆ ಎಳೆ ಅಡಿಕೆ ಬೀಳುವುದು ಚರ್ಚೆಯ ವಿಷಯ. ಕಳೆದ ಮೂರು ವರ್ಷಗಳಿಂದ ಎಲೆಚುಕ್ಕಿ ಜೋರಾಗಿ ಸದ್ದು ಮಾಡುತ್ತಿದೆ. ಈಗ ಎರಡು ವರ್ಷಗಳಿಂದ ವಿಪರೀತ ಎಳೆ ಅಡಿಕೆ ಬೀಳುವುದು ಸಮಸ್ಯೆ. ಅಡಿಕೆ ಬೆಳೆ ವಿಸ್ತರಣೆಯ ನಡುವೆ ಈ ಸಮಸ್ಯೆಗಳು ಸವಾಲಾಗಿದೆ. ಈ ನಡುವೆ ಅಡಿಕೆ ಬೆಳೆಯ ಸಮಸ್ಯೆ ಇಲ್ಲಿ ಮಾತ್ರವಲ್ಲ ಚೀನಾದಲ್ಲಿ, ಭೂತಾನ್‌ನಲ್ಲೂ ಇದೆ. ಕಳೆದ ಮೂರು ವರ್ಷಗಳಲ್ಲಿ ಭೂತಾನ್‌ ನಲ್ಲಿ ಅಡಿಕೆ ಉತ್ಪಾದನೆ ತೀರಾ ಇಳಿಮುಖವಾಗುತ್ತಿದೆ, ಅಡಿಕೆ ಮರಗಳು ಇದ್ದಕ್ಕಿದ್ದಂತೆ ಒಣಗುತ್ತಿದೆ.ಅಡಿಕೆ ಉತ್ಪಾದನೆ ತೀವ್ರವಾಗಿ ಕುಸಿದಿದೆ ಎಂದು ಅಲ್ಲಿನ ಮಾಧ್ಯಮ ವರದಿ ಮಾಡಿದೆ …… ಮುಂದೆ ಓದಿ……

ಭೂತಾನ್‌ನಲ್ಲಿ ಕಳೆದ ಮೂರು ವರ್ಷಗಳಲ್ಲಿ ನೆಟ್ಟ ಮರಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದರೂ ಅಡಿಕೆ ಉತ್ಪಾದನೆ ತೀವ್ರವಾಗಿ ಕುಸಿದಿದೆ ಎಂದು ಅಲ್ಲಿನ ಮಾಧ್ಯಮ ವರದಿ ಮಾಡಿದೆ. 2021 ರಲ್ಲಿ 21,400 ಮೆಟ್ರಿಕ್ ಟನ್  ಇದ್ದ ಅಡಿಕೆ ಇಳುವರಿ 2022 ರಲ್ಲಿ 11,100 ಮೆಟ್ರಿಕ್ ಟನ್ ಗೆ ಇಳಿದಿದೆ.ಇದಕ್ಕೆ ಪ್ರಮುಖವಾಗಿ ದೀರ್ಘಕಾಲದ ಚಳಿಗಾಲ, ಕೀಟಗಳ ಬಾಧೆ ಮತ್ತು ಅಡಿಕೆ ಮರ-ಗಿಡಗಳಲ್ಲಿ ರೋಗ ಬಾಧೆ  ಇಳುವರಿ ಕುಸಿಯಲು ಮತ್ತು ಮರಗಳು ಸಾಯಲು ಕಾರಣ ಎಂದು ರೈತರು ಹೇಳಿದ್ದಾರೆ.ಅಲ್ಲಿನ ಅಂಕಿಅಂಶದ ಪ್ರಕಾರ ಶೇ.50 ಅಡಿಕೆ ಫಸಲು ಮೂರು ವರ್ಷಗಳಿಂದ ಇಳಿಕೆಯಾಗಿದೆ.ಅಲ್ಲಿನ ರಾಷ್ಟ್ರೀಯ ಸರಾಸರಿಯು 2021 ರಲ್ಲಿ ಪ್ರತಿ ಮರಕ್ಕೆ 12 ಕಿಲೋಗ್ರಾಂಗಳಷ್ಟು ಇದ್ದದ್ದು 2022 ರಲ್ಲಿ 8 ಕೆಜಿ ಮತ್ತು 2023 ರಲ್ಲಿ 6 ಕೆಜಿಗೆ ಇಳಿದಿದೆ  ಅಂದರೆ ಉತ್ಪಾದಕತೆ ಕಡಿಮೆಯಾಗಿದೆ.

ಭೂತಾನ್‌ನಲ್ಲಿ ಪ್ರಮುಖವಾಗಿ ಅಡಿಕೆ ಉತ್ಪಾದನೆ ಮಾಡುವ ಜಿಲ್ಲೆ ಸ್ಯಾಮ್ಟೆ. ಇಲ್ಲಿ ಕೂಡಾ ಅಡಿಕೆಗೆ ವಿಪರೀತವಾದ ರೋಗ ಬಾಧೆ ಕಂಡುಬಂದಿದೆ. ಅಲ್ಲಿನ ಅಂಕಿ ಅಂಶದ ಪ್ರಕಾರ  ಆ ಜಿಲ್ಲೆಯಲ್ಲಿ  2021 ರಲ್ಲಿ 1.75 ಮಿಲಿಯನ್ ಇದ್ದ ಒಟ್ಟು ಮರಗಳ ಸಂಖ್ಯೆ 2023 ರ ವೇಳೆಗೆ 1.34 ಮಿಲಿಯನ್‌ಗೆ ಇಳಿದಿದೆ. ಪ್ರತಿ ಮರದ ಇಳುವರಿ 2021 ರಲ್ಲಿ 16 ಕೆಜಿಯಿಂದ 2022 ರಲ್ಲಿ 8 ಕೆಜಿಗೆ ಮತ್ತು 2023 ರಲ್ಲಿ 7 ಕೆಜಿಗೆ ಇಳಿದಿದೆ. ಇದೆಲ್ಲದರ ಕಾರಣದಿಂದ ರೈತರು ಆರ್ಥಿಕ ಸಂಕಷ್ಟಕ್ಕೂ ಒಳಗಾಗಿದ್ದಾರೆ. ಹವಾಮಾನವೇ ಪ್ರಮುಖವಾದ ಕಾರಣ ಎಂದು ರೈತರು ಹೇಳುತ್ತಾರೆ. ಹವಾಮಾನದಿಂದಾಗಿ, ಹೂಬಿಡುವ ಅವಧಿಯಲ್ಲಿ ಕೀಟಗಳು ವೃದ್ಧಿಯಾಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕೃಷಿ ಅಧಿಕಾರಿಗಳು ಹೇಳುತ್ತಾರೆ. ಅಡಿಕೆ ಹೂಬಿಡುವಿಕೆಯ ವೇಳೆ ತೇವಾಂಶಕ್ಕೆ ಬಹುಬೇಗನೆ ಹೊಂದಿಕೊಳ್ಳಬೇಕಾಗುತ್ತದೆ , ಆದರೆ ಪ್ರಸ್ತುತ ಹವಾಮಾನ ಅಡಿಕೆ ಬೆಳೆಗೆ ಪೂರಕವಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸುದ್ದಿಯ ಮೂಲ : kuensel online

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

13 hours ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

13 hours ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

22 hours ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

1 day ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

2 days ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

2 days ago