Advertisement
ಪ್ರಮುಖ

ಬಸ್ಸು ಚಾಲಕನಿಗೆ ಹಲಸಿನ ಊಟ ತಂದ ಸಂಕಷ್ಟ…!

Share

ಹಲಸಿನಹಣ್ಣು ತಿಂದು ಉಸಿರಾಟದ ಮೂಲಕ ಆಲ್ಕೋಹಾಲ್‌ ಪತ್ತೆ ಮಾಡುವ ವೇಳೆ ಯಂತ್ರಕ್ಕೆ ಒಳಪಟ್ಟ ಬಸ್‌ ಚಾಲಕ ವರದಿಯಲ್ಲಿ ಏರುಪೇರಾದ ಘಟನೆ ಕೇರಳದ ಕೊಟ್ಟಾಯಂನಲ್ಲಿ ನಡೆದಿದೆ.

ಪತ್ತನಂತಿಟ್ಟದಲ್ಲಿರುವ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮದ ಡಿಪೋದಲ್ಲಿ ಬ್ರೀತ್‌ಅಲೈಜರ್‌ ಮೂಲಕ ನಡೆಸಲಾದ  ಪರೀಕ್ಷೆಯಲ್ಲಿ ಬಸ್ ಚಾಲಕ ವಿಫಲನಾದ ಘಟನೆ ನಡೆಯಿತು. ಆದರೆ ಬಸ್‌ ಚಾಲಕ, ತಾನು ಅಮಲು ಪದಾರ್ಥ ಸೇವಿಸಿಲ್ಲ ಎಂದು ಅಧಿಕಾರಿಗಳಿಗೆ ಸವಾಲು ಹಾಕಿದರು. ಈ ಸಂದರ್ಭ ರಕ್ತದ ಸ್ಯಾಂಪಲ್‌ ಕೂಡಾ ತೆಗೆಯಲಾಯಿತು. ಅದರಲ್ಲಿ ನೆಗೆಟಿವ್‌ ವರದಿ ಬಂದಿತ್ತು. ತಕ್ಷಣವೇ ಬ್ರೀತ್‌ ಅಲೈಸರ್‌ ಪರೀಕ್ಷೆಗೆ ಒಳಪಡಿಸಲಾಯಿತು, ಇತರರನ್ನೂ ಪರೀಕ್ಷೆ ಒಳಪಡಿಸಲಾಯಿತು. ಹಾಗಿದ್ದರೆ ಬ್ರೀತ್‌ಅಲೈಜರ್‌ ಮೂಲಕ ನಡೆಸಲಾದ  ಪರೀಕ್ಷೆಯಲ್ಲಿ ಬಸ್ ಚಾಲಕ ವಿಫಲನಾದದ್ದು ಹೇಗೆ ಎಂದು ಪತ್ತೆ ಮಾಡುವ ಪ್ರಯತ್ನ ನಡೆಯಿತು.

ಈ ಸಂದರ್ಭ ಬೆಳಕಿಗೆ ಬಂದ ಅಂಶ, ಬಸ್‌ ಚಾಲಕರೊಬ್ಬರು ತನ್ನ ಮನೆಯಿಂದ ಹಲಸಿನ ಹಣ್ಣುಗಳನ್ನು ಡಿಪೋಗೆ ತಂದು ತನ್ನ ಸಹೋದ್ಯೋಗಿಗಳೊಂದಿಗೆ ಹಂಚಿಕೊಂಡಿದ್ದರು. ಈ ಬಸ್ ಚಾಲಕ ಸಾಕಷ್ಟು ಪ್ರಮಾಣದಲ್ಲಿ‌ ಹಲಸಿನ ಹಣ್ಣನ್ನು ಸೇವಿಸಿದ್ದರು.  ಬಸ್‌ ಚಾಲನೆಗೆ ಮುನ್ನ ಇಲಾಖೆಯ ನಿಯಮದಂತೆ ಅವರು ನಂತರ ಬ್ರೀತ್‌ ಅಲೈಜರ್ ಪರೀಕ್ಷೆಗೆ ಒಳಗಾದರು. ಆ ಮೀಟರ್ ತಕ್ಷಣ 10 ಕ್ಕೆ ಏರಿತು. ಕೊನೆಗೆ ಇದು ಹಲಸಿನ ಹಣ್ಣಿನ ಪ್ರಭಾವ ಎಂಬಲ್ಲಿಗೆ ಘಟನೆ ತಿಳಿಯಾಯಿತು.

ಕೆಲವು  ವರದಿಗಳ ಪ್ರಕಾರ, ಹಲಸಿನ ಹಣ್ಣು ತಿನ್ನುವುದರಿಂದ , ವಿಶೇಷವಾಗಿ ಅದು ಹಣ್ಣಾದಾಗ ಅಥವಾ ಅತಿಯಾಗಿ ಹಣ್ಣಾದಾಗ  ಬಾಯಿಯಲ್ಲಿ ಎಥೆನಾಲ್ ಉಳಿಯಬಹುದು, ಇದು ಬ್ರೀತ್‌ ಅಲೈಜರ್ ಮೂಲಕ ತಪ್ಪು  ಫಲಿತಾಂಶವನ್ನು ನೀಡಲು ಸಾಧ್ಯವಿದೆ.

ಸಾಮಾನ್ಯವಾಗಿ ಬ್ರೀತ್‌ ಅಲೈಜರ್‌ ಉಸಿರಾಟದಲ್ಲಿನ ಆಲ್ಕೋಹಾಲ್ ಆವಿಯನ್ನು ಅಳೆಯುತ್ತವೆ ಮತ್ತು ಶ್ವಾಸಕೋಶದಿಂದ ಹೊರಹಾಕಲ್ಪಟ್ಟ ಆಲ್ಕೋಹಾಲ್ ಅನ್ನು ಪತ್ತೆಹಚ್ಚಲು ವಿನ್ಯಾಸಗೊಳಿಸಲಾಗಿದೆ. ಆದರೆ ಹಲಸು ಹಣ್ಣು ತಿಂದಾಗಲೂ ಉಳಿದಿರಬಹುದಾದ ಅಥವಾ ರಾಸಾಯನಿಕ ಕ್ರಿಯೆಗಳಿಂದ ಕಂಡುಬರುವ ಆಲ್ಕೋಹಾಲ್‌ ಅಥವಾ ಎಥೆನಾಲ್‌ ವಾಸನೆಯನ್ನು ಯಂತ್ರವು ಗ್ರಹಿಸುವ ಸಾಧ್ಯತೆ ಹೆಚ್ಚಿದೆ.  ಆದರೆ ಹಣ್ಣು ತಿಂದು ಲಾಲಾರಸದ ಮೂಲಕ ಸ್ವಲ್ಪ ಹೊತ್ತು ಕಳೆದರೆ ಅಥವಾ ಬಾಯಿ ತೊಳೆದರೆ ಈ ಫಲಿತಾಂಶ ಬರಲು ಸಾಧ್ಯವಿಲ್ಲ. ಅಂದರೆ ಸಾಮಾನ್ಯವಾಗಿ 15-20 ನಿಮಿಷಗಳಲ್ಲಿ ಈ ಅಂಶಗಳು ನಿವಾರಣೆಯಾಗುತ್ತದೆ.  ತೀರಾ ಮಾಗಿದ ಯಾವುದೇ ಹಣ್ಣು ಸೇವಿಸಿದರೂ ಇಂತಹ ಫಲಿತಾಂಶ ಬರಲು ಸಾಧ್ಯತೆ ಇದೆ ಎಂದು ವರದಿಗಳು ಹೇಳುತ್ತವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

7 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

7 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

8 hours ago

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

17 hours ago

ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ

ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್‌ ಮತ್ತು ಆಹಾರ ವಿತರಣೆ…

17 hours ago

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ

ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…

21 hours ago