Advertisement
MIRROR FOCUS

ಜಾತಿ ಗಣತಿ ವರದಿ ಜಾರಿ ಭರವಸೆ ಬೆನ್ನಲ್ಲೇ ಹೊಸ ಶಾಕ್‌ | ಜಾತಿ ಗಣತಿಯ ಮೂಲ ಪ್ರತಿ ನಾಪತ್ತೆ..!

Share

ರಾಜ್ಯದ ಜಾತಿ ಗಣತಿ(caste census report) ಬಿಡುಗಡೆ ಮಾಡಬೇಕು ಅನ್ನೋದು ಒಂದು ಪಕ್ಷದ ನಿಲುವಾದರೆ ಬೇಡ ಎನ್ನುವುದು ಇನ್ನು ಕೆಲವು ಪಕಜ್ಷಗಳ ಅಂಬೋಣ. ಆದರೆ ಇದರ ಲಾಭ ಪಡೆಯಲು ರಾಜಕೀಯ ಪಕ್ಷಗಳು(Political Party) ಗುದ್ದಾಡುತ್ತಿರುವುದು ಶೋಚನೀಯ. ಇದೀಗ ಸಿಎಂ ಸಿದ್ದರಾಮಯ್ಯ(CM Siddaramahia,) ಸರ್ಕಾರ(Govt) ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡುವುದಾಗಿ ಹೇಳಿದ ಬೆನ್ನಲ್ಲೇ ಆಶ್ಚರ್ಯಕರ ಬೆಳವಣಿಗೆಯೊಂದು ಬೆಳಕಿಗೆ ಬಂದಿದೆ.

ಎಚ್.ಕಾಂತರಾಜು ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ನಡೆಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ)ಯ(Social and educational) ದತ್ತಾಂಶ ಆಧರಿಸಿ ಸಿದ್ದಪಡಿಸಿದ್ದ ವರದಿಯ ಮೂಲ ಪ್ರತಿ (ಹಸ್ತಪ್ರತಿ) ಆಯೋಗದ ಕಚೇರಿಯಿಂದ ನಾಪತ್ತೆಯಾಗಿದೆ ಎಂಬ ವಿಚಾರ ಚರ್ಚೆಗೆ ಕಾರಣವಾಗಿದೆ.

ಮೂಲ ಪ್ರತಿ ನಾಪತ್ತೆ ಮತ್ತು ಮುದ್ರಿತ ಮುಖ್ಯ ವರದಿಯಲ್ಲಿ ಸದಸ್ಯ ಕಾರ್ಯದರ್ಶಿಯ ಸಹಿ ಇಲ್ಲದಿರುವ ಬಗ್ಗೆ 5 ಅಕ್ಟೋಬರ್‌ 2021ರಂದು ಆಯೋಗದ ಹಾಲಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸರ್ಕಾರಕ್ಕೆ ಪತ್ರ ಬರೆದಿದ್ದರು. ಸೀಲ್ಡ್ ಬಾಕ್ಸ್‌ನಲ್ಲಿ ಇದ್ದ ಹಸ್ತಪ್ರತಿ ಕಾಣೆಯಾಗಿದೆ ಎಂದು ಹೇಳಿದ್ದರು.

ನಿನ್ನೆ( ನ.23) ಈ ವಿಚಾರವಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಜಯಪ್ರಕಾಶ್‌ ಹೆಗ್ಡೆಯವರಿಗೆ ಪತ್ರ ಬರೆದಿದ್ದು, “2015 ರಲ್ಲಿ ಕರ್ನಾಟಕ ಸರ್ಕಾರ 180 ಕೋಟಿ ಖರ್ಚು ಮಾಡಿ ಮಾಡಿದ ಸಮೀಕ್ಷೆಯ ಮೂಲ ಪ್ರತಿಯೇ ಕಳೆದುಹೋಗಿರುವುದು ಹಾಗು ಲಭ್ಯವಿರುವ ವರದಿಯಲ್ಲಿ ಸದಸ್ಯ ಕಾರ್ಯದರ್ಶಿಯ ಸಹಿ ಇಲ್ಲದೆ ಇರುವುದು ಆಯೋಗದ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ” ಎಂದಿದ್ದಾರೆ.

“ಹಿಂದುಳಿದ ವರ್ಗಗಳ ಆಯೋಗದ ಹಿಂದಿನ ಅಧ್ಯಕ್ಷರ ಆಪ್ತ ಕಾರ್ಯದರ್ಶಿಯವರಿಗೆ ನೋಟಿಸ್ ನೀಡಿ ನಂತರ ರಾಜಕೀಯ ಒತ್ತಡಕ್ಕೆ ಮಣಿದು ತನಿಖೆಯನ್ನೇ ಅರ್ಧಕ್ಕೆ ಕೈಬಿಟ್ಟಿರುವುದು ಆಶ್ಚರ್ಯದ ಸಂಗತಿ. ಈ ಕೂಡಲೇ ವರದಿ ನೈಜತೆಯ ಬಗ್ಗೆ ತನಿಖೆ ಮಾಡಬೇಕು ಹಾಗು ನಿರ್ಲಕ್ಷ್ಯಕ್ಕೆ ಕಾರಣರಾದ ಅಧಿಕಾರಿ ವಿರುದ್ಧ ಕ್ರಮಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ಮೂಲ ಪ್ರತಿ ಕಳೆದು ಹೋದರೆ ಯಾವ ಠಾಣೆಯಲ್ಲಿ ದೂರು ದಾಖಲಾಗಿದೆ? ಈ ಲೋಪಕ್ಕೆ ಕಾರಣರಾದ ಅಧಿಕಾರಿಯ ವಿರುದ್ಧ ಯಾವ ಶಿಸ್ತಿನ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ? ಈ ಲೋಪ ಕುರಿತು ಸರಕಾರ ಕೂಡಲೇ ಸ್ಪಷ್ಟನೆ ನೀಡಬೇಕು” ಒತ್ತಾಯಿಸಿದ್ದಾರೆ. ಯತ್ನಾಳ್ ಅವರು ತನ್ನ ಪತ್ರದ ಪ್ರತಿಯನ್ನು ಎಕ್ಸ್‌ನಲ್ಲಿ (ಟ್ವಿಟ್ಟರ್‌) ಪೋಸ್ಟ್‌ ಮಾಡಿದ್ದಾರೆ. ಇದರಿಂದ ವರದಿಯ ಮೂಲ ಪ್ರತಿ ನಾಪತ್ತೆ ವಿಚಾರ ಮುನ್ನೆಲೆಗೆ ಬಂದು ಚರ್ಚಾ ವಿಷಯವಾಗಿ ಮಾರ್ಪಟ್ಟಿದೆ.

ಕಾಂತರಾಜು ಆಯೋಗ ಸಿದ್ದಪಡಿಸಿದ್ದ ವರದಿಯನ್ನು ಆಯೋಗದ ಕಚೇರಿಯಲ್ಲಿ ನಾಲ್ಕು ಪೆಟ್ಟಿಗಳಲ್ಲಿ ಭದ್ರವಾಗಿ ಇಟ್ಟಿತ್ತು. ಈ ವರದಿಯ ಮೂಲ ಪ್ರತಿ ನಾಪತ್ತೆಯಾಗಿದೆ. ಲಭ್ಯವಿರುವ ಮೂಲ ಪ್ರತಿಯ ನಕಲು ಪ್ರತಿಯಲ್ಲಿ ಕಾಂತರಾಜು ಮತ್ತು ಎಲ್ಲಾ ಸದಸ್ಯರ ಸಹಿಯಿದೆ. ಆದರೆ, ಅಂದಿನ ಸದಸ್ಯ ಕಾರ್ಯದರ್ಶಿ ಎನ್‌.ವಿ ಪ್ರಸಾದ್ ಅವರ ಹೆಸರಷ್ಟೇ ನಮೂದಿಸಲಾಗಿದ್ದು, ಸಹಿ ಇಲ್ಲ ಎಂದು ವರದಿಗಳು ಹೇಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

4 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

21 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

1 day ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 day ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

1 day ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago