ಆನ್ಲೈನ್ ಆರ್ಥಿಕ ವಂಚನೆ ಅಪರಾಧಗಳನ್ನು ತಪ್ಪಿಸುವ ದೃಷ್ಟಿಯಿಂದ ಸಾರ್ವಜನಿಕ ವೈಫೈ ಅನ್ನು ಬಳಸದಂತೆ ಹಾಗೂ ಅಸುರಕ್ಷಿತ ಜಾಲತಾಣಗಳಲ್ಲಿ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡುಗಳ ವಹಿವಾಟು ನಡೆಸದಂತೆ ಸಾರ್ವಜನಿಕರು ಎಚ್ವರವಾಗಿರಬೇಕೆಂದು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಮನವಿ ಮಾಡಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಅವರು, ಇತ್ತೀಚಿನ ದಿನಗಳಲ್ಲಿ ಆನ್ಲೈನ್ ಮೂಲಕ ಸಾರ್ವಜನಿಕರನ್ನು ವಂಚಿಸಿ ಆರ್ಥಿಕವಾಗಿ ನಷ್ಟ ಹೊಂದುವಂತೆ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಯಾರೊಂದಿಗೂ ತಮ್ಮ ಎಟಿಎಂ ಡೆಬಿಟ್ ಕಾರ್ಡ್ ಮತ್ತು ಕ್ರೆಡಿಟ್ ವಿವರಗಳು, ಪಿನ್ ಸಂಖ್ಯೆ, ಪಾಸ್ವರ್ಡ್ಗಳನ್ನು ಹಂಚಿಕೊಳ್ಳಬಾರದು ಎಂದರು. ಸಾರ್ವಜನಿಕರು, ಬ್ಯಾಂಕ್ಗಳ ಗ್ರಾಹಕರು ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡುಗಳ ವಂಚನೆ ಕುರಿತು ಸದಾ ಜಾಗೃತರಾಗಿರಬೇಕು. ಬ್ಯಾಂಕ್ ಖಾತೆ, ಎಟಿಎಂ ಕಾರ್ಡ್, ಪಿನ್ ಸಂಖ್ಯೆ, ಪಾಸ್ವರ್ಡ್ ಸೇರಿದಂತೆ ಯಾವುದೇ ಮಾಹಿತಿ ವಿವರಗಳನ್ನು ಯಾರೊಂದಿಗೂ ಮೊಬೈಲ್ನಲ್ಲಿ ಹಂಚಿಕೊಳ್ಳಬಾರದು. ಸಹಾಯಕ್ಕಾಗಿ 1930 ಉಚಿತ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬೇಕು ಎಂದು ಹೇಳಿದರು.
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…