ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ನಂತರ ತರಕಾರಿ ಸರದಿ | ಶತಕ ಬಾರಿಸಿದ ಟೊಮ್ಯಾಟೋ, ಬೀನ್ಸ್ ದ್ವಿಶತಕ, ಬೆಳ್ಳುಳ್ಳಿ ತ್ರಿಶತಕ..! |

June 21, 2024
1:10 PM

ಕಳೆದ ಕೆಲವು ದಿನಗಳಿಂದ ಬೆಲೆ ಏರಿಕೆಯ(Price Hike) ಪರ್ವ ಆರಂಭವಾಗಿದೆ. ಪೆಟ್ರೋಲ್(Petrol), ಡಿಸೇಲ್(Descale) ಬಳಿಕ ರಾಜ್ಯದ ಜನತೆಗೆ ಈಗ ದಿನನಿತ್ಯ ಬಳಕೆಯ ತರಕಾರಿಗಳ ಬೆಲೆ ದಿಢೀರನೆ (Vegetable Price Hike) ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಟೊಮ್ಯಾಟೋ(Tomato) ರೇಟ್ ಶತಕ ದಾಟಿದ್ರೆ, ಬೀನ್ಸ್(Beans) ಬೆಲೆ ಇನ್ನೂರು ರೂಪಾಯಿ ದಾಟಿದೆ. ಕಳೆದ ವಾರಕ್ಕಿಂತ ಈ ವಾರ ಬಹುತೇಕ ತರಕಾರಿ(Vegetable) ದರ ದುಪ್ಪಟ್ಟು, ಮೂರು ಪಟ್ಟು ಜಾಸ್ತಿಯಾಗಿದೆ. 

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾದ ಬೆನ್ನಲ್ಲೇ ನಗರದ ಮಾರುಕಟ್ಟೆಗಳಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ. ಟೊಮ್ಯಾಟೋ ನೂರರ ಗಡಿ ದಾಟಿದ್ರೆ, ಬೀನ್ಸ್ ಇನ್ನೂರು ಹಾಗೂ ಬೆಳ್ಳುಳ್ಳಿ ಮುನ್ನೂರು ರೂಪಾಯಿ ದಾಟಿದೆ. ಬೆಂಗಳೂರಿನ ಕೆಆರ್ ಮಾರುಕಟ್ಟೆ, ಮಲ್ಲೇಶ್ವರ, ಗಾಂಧಿ ಬಜಾರ್, ಹೆಬ್ಬಾಳ ಮಾರುಕಟ್ಟೆ ಸೇರಿದಂತೆ ಎಲ್ಲಾ ಕಡೆಗಳಲ್ಲೂ ತರಕಾರಿ ಬಲು ತುಟ್ಟಿಯಾಗಿದೆ. ಇದರಿಂದ ಜನ ಸಾಮಾನ್ಯರು ಹೈರಾಣಾಗಿದ್ದಾರೆ.

ರಾಜ್ಯದಲ್ಲಿ ಕುಸಿತ ಕಂಡ ಟೊಮ್ಯಾಟೊ ಇಳುವರಿ : ರಾಜ್ಯದಲ್ಲಿ ಟೊಮ್ಯಾಟೋ ಉತ್ಪಾದನೆ ಕುಸಿತ ಕಂಡ ಹಿನ್ನೆಲೆ ಬೆಲೆ ಏರಿಕೆಯಾಗಿದೆ ಅನ್ನೋದು ವರ್ತಕರ ಮಾತು. ಮಂಡ್ಯ, ಕೋಲಾರ, ಕನಕಪುರ, ಕಡೂರು, ಮದ್ದೂರು ಕಡೆಗಳಲ್ಲಿ ಟೊಮ್ಯಾಟೋ ಇಳುವರಿ ಕುಸಿತವಾಗಿದೆ. ಸದ್ಯ ಮಹಾರಾಷ್ಟ್ರದಿಂದ ಆಮದಾಗುವ ಟೊಮ್ಯಾಟೋ ನೆಚ್ಚಿಕೊಂಡಿವೆ ಬೆಂಗಳೂರಿನ ಮಾರುಕಟ್ಟೆಗಳು. ಟೊಮ್ಯಾಟೋ ಜೊತೆಗೆ ಬೀನ್ಸ್, ಬೆಳ್ಳುಳ್ಳಿ ಸೇರಿದಂತೆ ಇತರೆ ತರಕಾರಿ ದರವೂ ತುಟ್ಟಿಯಾಗಿದೆ. ಮುಂದಿನ ಒಂದು ತಿಂಗಳ‌ ಕಾಲ ದರ ಇದೇ ರೀತಿ ಏರಿಕೆಯಾಗಲಿದೆ ಎನ್ನುವುದು ಮಾರುಕಟ್ಟೆ ವರದಿ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು
April 29, 2026
10:45 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ
April 29, 2026
10:05 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
April 28, 2026
2:11 PM
by: ಸಾಯಿಶೇಖರ್ ಕರಿಕಳ
ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ
April 27, 2026
9:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror