ಕಳೆದ ಕೆಲವು ದಿನಗಳಿಂದ ಬೆಲೆ ಏರಿಕೆಯ(Price Hike) ಪರ್ವ ಆರಂಭವಾಗಿದೆ. ಪೆಟ್ರೋಲ್(Petrol), ಡಿಸೇಲ್(Descale) ಬಳಿಕ ರಾಜ್ಯದ ಜನತೆಗೆ ಈಗ ದಿನನಿತ್ಯ ಬಳಕೆಯ ತರಕಾರಿಗಳ ಬೆಲೆ ದಿಢೀರನೆ (Vegetable Price Hike) ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಟೊಮ್ಯಾಟೋ(Tomato) ರೇಟ್ ಶತಕ ದಾಟಿದ್ರೆ, ಬೀನ್ಸ್(Beans) ಬೆಲೆ ಇನ್ನೂರು ರೂಪಾಯಿ ದಾಟಿದೆ. ಕಳೆದ ವಾರಕ್ಕಿಂತ ಈ ವಾರ ಬಹುತೇಕ ತರಕಾರಿ(Vegetable) ದರ ದುಪ್ಪಟ್ಟು, ಮೂರು ಪಟ್ಟು ಜಾಸ್ತಿಯಾಗಿದೆ.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾದ ಬೆನ್ನಲ್ಲೇ ನಗರದ ಮಾರುಕಟ್ಟೆಗಳಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ. ಟೊಮ್ಯಾಟೋ ನೂರರ ಗಡಿ ದಾಟಿದ್ರೆ, ಬೀನ್ಸ್ ಇನ್ನೂರು ಹಾಗೂ ಬೆಳ್ಳುಳ್ಳಿ ಮುನ್ನೂರು ರೂಪಾಯಿ ದಾಟಿದೆ. ಬೆಂಗಳೂರಿನ ಕೆಆರ್ ಮಾರುಕಟ್ಟೆ, ಮಲ್ಲೇಶ್ವರ, ಗಾಂಧಿ ಬಜಾರ್, ಹೆಬ್ಬಾಳ ಮಾರುಕಟ್ಟೆ ಸೇರಿದಂತೆ ಎಲ್ಲಾ ಕಡೆಗಳಲ್ಲೂ ತರಕಾರಿ ಬಲು ತುಟ್ಟಿಯಾಗಿದೆ. ಇದರಿಂದ ಜನ ಸಾಮಾನ್ಯರು ಹೈರಾಣಾಗಿದ್ದಾರೆ.
ರಾಜ್ಯದಲ್ಲಿ ಕುಸಿತ ಕಂಡ ಟೊಮ್ಯಾಟೊ ಇಳುವರಿ : ರಾಜ್ಯದಲ್ಲಿ ಟೊಮ್ಯಾಟೋ ಉತ್ಪಾದನೆ ಕುಸಿತ ಕಂಡ ಹಿನ್ನೆಲೆ ಬೆಲೆ ಏರಿಕೆಯಾಗಿದೆ ಅನ್ನೋದು ವರ್ತಕರ ಮಾತು. ಮಂಡ್ಯ, ಕೋಲಾರ, ಕನಕಪುರ, ಕಡೂರು, ಮದ್ದೂರು ಕಡೆಗಳಲ್ಲಿ ಟೊಮ್ಯಾಟೋ ಇಳುವರಿ ಕುಸಿತವಾಗಿದೆ. ಸದ್ಯ ಮಹಾರಾಷ್ಟ್ರದಿಂದ ಆಮದಾಗುವ ಟೊಮ್ಯಾಟೋ ನೆಚ್ಚಿಕೊಂಡಿವೆ ಬೆಂಗಳೂರಿನ ಮಾರುಕಟ್ಟೆಗಳು. ಟೊಮ್ಯಾಟೋ ಜೊತೆಗೆ ಬೀನ್ಸ್, ಬೆಳ್ಳುಳ್ಳಿ ಸೇರಿದಂತೆ ಇತರೆ ತರಕಾರಿ ದರವೂ ತುಟ್ಟಿಯಾಗಿದೆ. ಮುಂದಿನ ಒಂದು ತಿಂಗಳ ಕಾಲ ದರ ಇದೇ ರೀತಿ ಏರಿಕೆಯಾಗಲಿದೆ ಎನ್ನುವುದು ಮಾರುಕಟ್ಟೆ ವರದಿ.
ಜುಲೈ 5ರ ನಂತರ ದುರ್ಬಲಗೊಂಡು ಸಾಂಪ್ರದಾಯಿಕ ಮುಂಗಾರು ಮಾರುತಗಳು ಬಲಗೊಳ್ಳುವ ಲಕ್ಷಣಗಳಿವೆ. ಜುಲೈ…
ಭತ್ತ ಬೆಳೆಯುವವರ(Paddy crop) ಸಂಖ್ಯೆ ಕಡಿಮೆಯಾಗಿದೆ. ಅಕ್ಕಿ ರೇಟ್(Rice rate) ಗಗನಕ್ಕೇರಿದೆ. ಹೀಗೆ…
ಬಂದರು ನಗರಿ ಮಂಗಳೂರು. ರಾಜ್ಯದ ಮಾತ್ರವಲ್ಲ ದೇಶದ ಎಲ್ಲಾ ಕಡೆಗೂ ಸಂಪರ್ಕ ಅಗತ್ಯ…
ಹಿಂದೂ ಧರ್ಮದ ನಾಲ್ಕನೇಯ ಮಾಸವನ್ನು ಆಷಾಢ ಮಾಸ(Ashada Masa) ಎಂದು ಕರೆಯಲಾಗುತ್ತದೆ. ಈ…
ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕೆಲವು ತಾಲೂಕುಗಳಲ್ಲಿ ಶಾಲೆಗೆ ರಜೆ ನೀಡಲಾಗಿದೆ.
ಪಕ್ಷಿ ಸಂಕುಲಗಳ ಉಳಿವಿಗೆ ಸಸ್ಯರಾಶಿಗಳ ಮಹತ್ವ ಜಾಗೃತಿ ಕಾರ್ಯಾಗಾರವನ್ನು ಕಳೆದ ಹಲವಾರು ಸಮಯಗಳಿಂದ…