Advertisement
MIRROR FOCUS

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ನಂತರ ತರಕಾರಿ ಸರದಿ | ಶತಕ ಬಾರಿಸಿದ ಟೊಮ್ಯಾಟೋ, ಬೀನ್ಸ್ ದ್ವಿಶತಕ, ಬೆಳ್ಳುಳ್ಳಿ ತ್ರಿಶತಕ..! |

Share

ಕಳೆದ ಕೆಲವು ದಿನಗಳಿಂದ ಬೆಲೆ ಏರಿಕೆಯ(Price Hike) ಪರ್ವ ಆರಂಭವಾಗಿದೆ. ಪೆಟ್ರೋಲ್(Petrol), ಡಿಸೇಲ್(Descale) ಬಳಿಕ ರಾಜ್ಯದ ಜನತೆಗೆ ಈಗ ದಿನನಿತ್ಯ ಬಳಕೆಯ ತರಕಾರಿಗಳ ಬೆಲೆ ದಿಢೀರನೆ (Vegetable Price Hike) ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಟೊಮ್ಯಾಟೋ(Tomato) ರೇಟ್ ಶತಕ ದಾಟಿದ್ರೆ, ಬೀನ್ಸ್(Beans) ಬೆಲೆ ಇನ್ನೂರು ರೂಪಾಯಿ ದಾಟಿದೆ. ಕಳೆದ ವಾರಕ್ಕಿಂತ ಈ ವಾರ ಬಹುತೇಕ ತರಕಾರಿ(Vegetable) ದರ ದುಪ್ಪಟ್ಟು, ಮೂರು ಪಟ್ಟು ಜಾಸ್ತಿಯಾಗಿದೆ. 

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾದ ಬೆನ್ನಲ್ಲೇ ನಗರದ ಮಾರುಕಟ್ಟೆಗಳಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ. ಟೊಮ್ಯಾಟೋ ನೂರರ ಗಡಿ ದಾಟಿದ್ರೆ, ಬೀನ್ಸ್ ಇನ್ನೂರು ಹಾಗೂ ಬೆಳ್ಳುಳ್ಳಿ ಮುನ್ನೂರು ರೂಪಾಯಿ ದಾಟಿದೆ. ಬೆಂಗಳೂರಿನ ಕೆಆರ್ ಮಾರುಕಟ್ಟೆ, ಮಲ್ಲೇಶ್ವರ, ಗಾಂಧಿ ಬಜಾರ್, ಹೆಬ್ಬಾಳ ಮಾರುಕಟ್ಟೆ ಸೇರಿದಂತೆ ಎಲ್ಲಾ ಕಡೆಗಳಲ್ಲೂ ತರಕಾರಿ ಬಲು ತುಟ್ಟಿಯಾಗಿದೆ. ಇದರಿಂದ ಜನ ಸಾಮಾನ್ಯರು ಹೈರಾಣಾಗಿದ್ದಾರೆ.

ರಾಜ್ಯದಲ್ಲಿ ಕುಸಿತ ಕಂಡ ಟೊಮ್ಯಾಟೊ ಇಳುವರಿ : ರಾಜ್ಯದಲ್ಲಿ ಟೊಮ್ಯಾಟೋ ಉತ್ಪಾದನೆ ಕುಸಿತ ಕಂಡ ಹಿನ್ನೆಲೆ ಬೆಲೆ ಏರಿಕೆಯಾಗಿದೆ ಅನ್ನೋದು ವರ್ತಕರ ಮಾತು. ಮಂಡ್ಯ, ಕೋಲಾರ, ಕನಕಪುರ, ಕಡೂರು, ಮದ್ದೂರು ಕಡೆಗಳಲ್ಲಿ ಟೊಮ್ಯಾಟೋ ಇಳುವರಿ ಕುಸಿತವಾಗಿದೆ. ಸದ್ಯ ಮಹಾರಾಷ್ಟ್ರದಿಂದ ಆಮದಾಗುವ ಟೊಮ್ಯಾಟೋ ನೆಚ್ಚಿಕೊಂಡಿವೆ ಬೆಂಗಳೂರಿನ ಮಾರುಕಟ್ಟೆಗಳು. ಟೊಮ್ಯಾಟೋ ಜೊತೆಗೆ ಬೀನ್ಸ್, ಬೆಳ್ಳುಳ್ಳಿ ಸೇರಿದಂತೆ ಇತರೆ ತರಕಾರಿ ದರವೂ ತುಟ್ಟಿಯಾಗಿದೆ. ಮುಂದಿನ ಒಂದು ತಿಂಗಳ‌ ಕಾಲ ದರ ಇದೇ ರೀತಿ ಏರಿಕೆಯಾಗಲಿದೆ ಎನ್ನುವುದು ಮಾರುಕಟ್ಟೆ ವರದಿ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

18 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

19 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

21 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

21 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 day ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago